ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಭದ್ರತಾ ಲೋಪದ ಕಾರಣಕ್ಕೆ ಪಹಲ್ಗಾಮ್ ನಲ್ಲಿ ದೇಶದ 26 ಅಮಾಯಕ ನಾಗರಿಕರ ಹತ್ಯೆಯಾಯಿತು. ಈ ಬಗ್ಗೆ ಸಂಸತ್ ಅಧಿವೇಶನಲ್ಲಿ ಕಾಂಗ್ರೆಸ್ ನಾಯಕರು ಪ್ರಶ್ನಿಸಲು ಮುಂದಾದರೆ ಸರಿಯಾದ ಉತ್ತರ ನೀಡಬೇಕಾದ ಪ್ರಧಾನಿ ಮೋದಿ ಅವರು ಸುಳ್ಳಿನ ಮುಖಾಂತರ ಜನರ ಭಾವನೆ ತಿರುಚಿದ್ದಾರೆ. ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು…

Read More

ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದು ಮಾಡಿ ಆದೇಶ ಹೊರಡಿಸಿದ ಹೈಕೋರ್ಟ್

ಬೆಂಗಳೂರು ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು. ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಆಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್…

Read More

ಛತ್ತೀಸಗಡ ಕ್ರೈಸ್ತ ಭಗಿನಿಯರ ಬಂಧನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಎಲ್ಲಾ ಸಾಂವಿಧಾನಿಕ ಶಿಷ್ಟಾಚಾರಗಳನ್ನು ಗಾಳಿಗೆ ತೂರಿ, ಕೂಗುಮಾರಿಗಳ ಕೈಗೆ ಆಡಳಿತ ಒಪ್ಪಿಸುವ ಬಿಜಿಪಿಯ ನೀಚ ರಾಜಕಾರಣವು ಭಸ್ಮಾಸುರನ ಕತೆಯಂತೆ, ಅದಕ್ಕೇ ತಿರುಗು ಬಾಣವಾಗಲಿದೆ. ಎಲ್ಲರಿಂದಲೂ ನಿರ್ಲಕ್ಷಿಸಲ್ಪಟ್ಟ ಹಳ್ಳಿಗಾಡಿನ ಆದಿವಾಸಿಗಳ ಸೇವೆ ಮಾಡುತ್ತಿದ್ದ ಇಬ್ಬರು ಕ್ರೈಸ್ತ ಭಗಿನಿಯರನ್ನು ಅನ್ಯಾಯವಾಗಿ ಬಂಧಿಸಿ ಜೈಲಿಗಟ್ಟಿದ ಛತ್ತೀಸಗಡ ಸರಕಾರವು ಅದರ ಕೆಟ್ಟ ಫಲಗಳನ್ನು ಖಂಡಿತಾ ಅನುಭವಿಸಲಿದೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ ಜೆಎಸ್ ಹೇಳಿದ್ದಾರೆ. ಕ್ರೈಸ್ತ ಭಗಿನಿಯರನ್ನು ಅನ್ಯಾಯವಾಗಿ ಬಂಧಿಸಿ ಜೈಲಿಗಟ್ಟಿದ ಛತ್ತೀಸಗಡ ಸರ್ಕಾರದ ಸರ್ಕಾರಿ ಭಯೋತ್ಪಾದನೆ…

Read More

ಮರಳು ಮಾಫಿಯಾಗಳ ನೀಡುತಿದ್ದ ಕಂತು ಕಂತು ನೋಟುಗಳಿಗಾಗಿ ನಿಯಮವನ್ನು ಗಾಳಿಗೆ ತೂರಿದ ಆ(ರಕ್ಷ)ಕರು

ಮರಳು ಮಾಫಿಯಾಗಳೊಂದಿಗೆ ಪೊಲೀಸರ ನಂಟಿನ ವಿಷಯದಲ್ಲಿ ಎಳೆ ಎಳೆಯಾಗಿ ಒಂದೊಂದು ಮಾಹಿತಿ ಬಹಿರಂಗಗೊಳ್ಳುತ್ತಿದೆ. ಆರಂಭದಲ್ಲಿ ಕುಂಬಳೆ ಠಾಣೆಯ ಎಸ್ಸೈ ಯನ್ನು ಬಲೆಗೆ ಹಾಕುವ ಯತ್ನ ವಿಫಲವಾದ ಹಿನ್ನೆಲೆಯಲ್ಲಿ ಕೆಲವೊಂದು ಪೊಲೀಸರ ಒಡನಾಟದೊಂದಿಗೆ ಮರಳು ಮಾಫಿಯಾಗಳು ಸಂಪಾದಿಸಿದ್ದು ಕೋಟಿಗಟ್ಟಲೆ. ಶ್ರಿಜೇಶ್ ಕುಂಬಳೆ ಎಸ್ಸೈ ಆಗಿ ಅಧಿಕಾರ ವಹಿಸಿದ್ದು ಒಂದೂವರೆ ವರ್ಷಕ್ಕೆ ಮೊದಲು. ಮರಳು ಮಾಫಿಯಾ ಹಾಗೂ ಮಾದಕ ದಂಧೆಕೋರರಿಗೆ ಸಿಂಹ ಸ್ವಪ್ನವಾಗಿದ್ದ ಶ್ರಿಜೇಶ್ ಮುಖ ನೋಡದೆ ಯಾವುದೇ ರಾಜಕೀಯ ಪುಡಾರಿಗಳ ಒತ್ತಾಸೆಗೂ ಬಗ್ಗದೆ ಕಟ್ಟು ನಿಟ್ಟಿನ ಕ್ರಮ ತೆಗದುಕೊಳ್ಳುವ…

Read More

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ, ದಕ್ಷಿಣ ರಾಜ್ಯಗಳು ಇದರಲ್ಲಿ ಮುಂಚೂಣಿ – ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ, ಯೇನಪೋಯ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಅಂಗಾಂಗ ದಾನ ದಿನಾಚರಣೆ 2025 ಕಾರ್ಯಕ್ರಮವು ಎಂಡ್ಯೂರೆನ್ಸ್ ಸಭಾಂಗಣ, ವೈದಿಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ…

Read More

ಕೊಂಡೆವೂರು: ಕರ್ಕಾಟಕ ಮಾಸದ ಔಷಧೀಯ ಗಂಜಿ ಕಾರ್ಯಕ್ರಮ ಆಗೋಸ್ತು 3ರಂದು

ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ .3.08.2025 ಆದಿತ್ಯವಾರ ವಿಶಿಷ್ಟವಾದ ಕರ್ಕಾಟಕ ಮಾಸದ ಔಷಧೀಯ ಗಂಜಿ ಕಾರ್ಯಕ್ರಮ ನಡೆಯಲಿದೆ. ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಠದ ಆರೋಗ್ಯ ಯೋಜನೆಯ ನಿತ್ಯಾನಂದ ಆಯುರ್ವೇದಿಕ್ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಕೇರಳದ ಪಾರಂಪರಿಕ ನಾಟಿ ವೈದ್ಯರುಗಳು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಹಸಿರು ಪರಿಸರದ ಪ್ರತಿಯೊಂದು ಗಿಡ ಬಳ್ಳಿ ಎಲೆಗಳು ಹೊಂದಿರುವ ಔಷಧೀಯ ಗುಣಗಳ ಬಗ್ಗೆ ಕರ್ಕಾಟಕ ಮಾಸದಲ್ಲಿ ಬಳಕೆಯ ಮಹತ್ವದ ಬಗ್ಗೆ ಮತ್ತು ಔಷಧೀಯ ಗುಣಗಳ ಬಗ್ಗೆ…

Read More

ಕ್ರೈಸ್ತ ಸನ್ಯಾಸಿಯರ ಬಂಧನ ವಿರೋಧಿಸಿ ಅಖಿಲ ಭಾರತ ಜನಾಧಿಪತ್ಯ ಮಹಿಳಾ ಅಸೋಸಿಯೇಶನ್ ಪ್ರತಿಭಟನೆ.

ಮಂಜೇಶ್ವರ: ಸುಳ್ಳು ಆರೋಪ ಹೊರಿಸಿ ಕ್ರೈಸ್ತ ಸನ್ಯಾಸಿಯರನ್ನು ಬಂಧಿಸಿ ಜೈಲಿಗಟ್ಟಿದ ಛತ್ತೀಸ್ಗಡ್ ಬಿಜೆಪಿ ಸರ್ಕಾರ ದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ, ಅಖಿಲ ಭಾರತ ಜನಾಧಿಪತ್ಯ ಮಹಿಳಾ ಅಸೋಸಿಯೇಶನ್ ನ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರಾಲಿಯು ಮಂಜೇಶ್ವರ ಹೊಸಂಗಡಿ ಪೇಟೆಯಲ್ಲಿ ನಡೆಯಿತು. ರಾಲಿಯ ಉದ್ಘಾಟನೆ ಯನ್ನು ಜಿಲ್ಲಾ ಸಮಿತಿ ಮಾಜಿ ಸದಸ್ಯೆ ಬೇಬಿ ಶೆಟ್ಟಿ ನೆರವೇರಿಸಿ, ಅಧ್ಯಕ್ಷತೆಯನ್ನು ಏರಿಯಾ ಸಮಿತಿ ಅಧ್ಯಕ್ಷೆ ಐರಿನ್ ಜೋಸ್ಫಿನ್ ವಹಿಸಿದ್ದರು. ಏರಿಯಾ ಸಮಿತಿ ಕಾರ್ಯದರ್ಶಿ ಗೀತಾ ಸಾಮಾನಿ ಸ್ವಾಗತಿಸಿದರು .ವರ್ಕಾಡಿ…

Read More

2.2 ಲಕ್ಷ ರೂ ಮೌಲ್ಯದ ಅಡಿಕೆ ಕಳ್ಳತನ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಯಶಸ್ವಿ.

ಸುಮಾರು 2.2 ಲಕ್ಷ ರೂ ಮೌಲ್ಯದ ಅಡಕೆಯನ್ನು ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಕಳವು ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಯಶಸ್ವಿಯಾಗಿದ್ದಾರೆ. ಆರೋಪಿಗಳಲ್ಲಿ ಒರ್ವನಾದ ಸುಳ್ಯ ತಾಲೂಕಿನ ಪೈಚಾರು ಗ್ರಾಮದ ಸತೀಶ್ (29)ನನ್ನು ದಸ್ತಗಿರಿ ಮಾಡಿ, ಕಳವುಗೈದ ರೂ. 74000 ಮೌಲ್ಯದ 15 ಚೀಲ ಒಣ ಅಡಿಕೆ, ಕಳವು ಅಡಿಕೆಯನ್ನು ಮಾರಾಟ ಮಾಡಿದ ನಗದು ಹಣ ರೂ 70,000 ವನ್ನು ಒಟ್ಟು ಹಾಗೂ ಕೃತ್ಯಕ್ಕೆ ಬಳಸಿದ…

Read More

ಬಂಟ್ವಾಳ: ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ.

ಬಂಟ್ವಾಳ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ ನೇತ್ರಾವತಿ ‌ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜುಲೈ 27ರಂದು ಹೇಮಂತ್ ಮನೆಯಿಂದ ನಾಪತ್ತೆಯಾಗಿದ್ದ, ಈ ಬಗ್ಗೆ ಜುಲೈ 28 ರಂದು ಸೋಮವಾರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜುಲೈ 29 ರಂದು ಮಂಗಳವಾರ ಮಧ್ಯಾಹ್ನದ ವೇಳೆ ಬಂಟ್ವಾಳ…

Read More

ಡಾ| ಎಚ್. ಪ್ರಭಾಕರ್‌ರೀಗೆ ಕನ್ನಡ ಭವನದಅಭಿನಂದನಾ ಪ್ರಶಸ್ತಿ

ಕಾಸರಗೋಡು: ಬೆಂಗಳೂರಿನ ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿ ವತಿಯಿಂದ “ವೈದ್ಯರ ದಿನಾಚರಣೆ” ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ “ಹೆಲ್ತ್ ಕೇರ್ ಎಕ್ಸಲೆನ್ಸ್” ಪ್ರಶಸ್ತಿ ಸ್ವೀಕರಿಸಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಇಂಟರ್ ವೆಸ್ಟನಲ್ ಕಾರ್ಡಿಯಾಲಜಿಸ್ಟ್ ಡಾ| ಎಚ್. ಪ್ರಭಾಕರ್ ಇವರಿಗೆ ಡಾ| ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಮತ್ತು ಡಾ| ರವೀಂದ್ರ ಜೆಪ್ಪು ಗೌರವಾಧ್ಯಕ್ಷರಾಗಿರುವ ಕನ್ನಡ…

Read More
error: Content is protected !!