ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಭದ್ರತಾ ಲೋಪದ ಕಾರಣಕ್ಕೆ ಪಹಲ್ಗಾಮ್ ನಲ್ಲಿ ದೇಶದ 26 ಅಮಾಯಕ ನಾಗರಿಕರ ಹತ್ಯೆಯಾಯಿತು. ಈ ಬಗ್ಗೆ ಸಂಸತ್ ಅಧಿವೇಶನಲ್ಲಿ ಕಾಂಗ್ರೆಸ್ ನಾಯಕರು ಪ್ರಶ್ನಿಸಲು ಮುಂದಾದರೆ ಸರಿಯಾದ ಉತ್ತರ ನೀಡಬೇಕಾದ ಪ್ರಧಾನಿ ಮೋದಿ ಅವರು ಸುಳ್ಳಿನ ಮುಖಾಂತರ ಜನರ ಭಾವನೆ ತಿರುಚಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು…