ಮೇ 26ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯ ನಿರೀಕ್ಷೆ

ತಿರುವನಂತಪುರಂ: ಈ ಬಾರಿ ಕೇರಳಕ್ಕೆ ಮೇ 26ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು, ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಆಗಮಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯ ದಕ್ಷಿಣ ಭಾಗ ಹಾಗೂ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳಲಿದ್ದು, ಮೇ 24ರೊಳಗೆ ಕೇರಳ ತಲುಪುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಮುಂಗಾರು ಉತ್ತರದತ್ತ…

Read More

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಬಿಎ ಮೀಡಿಯಾ ಮತ್ತು ಕಮ್ಯುನಿಕೇಶನ್ ಕೋರ್ಸ್‌ಗೆ ಪ್ರವೇಶಮಾಧ್ಯಮ, ಚಿತ್ರರಂಗ ಹಾಗೂ ಡಿಸೈನ್ ಕ್ಷೇತ್ರದಲ್ಲಿ ವೃತ್ತಿಜೀವನಕ್ಕೆ ಅವಕಾಶ

ಮಂಗಳೂರು: NITTE Deemed to be University ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಬಿಎ (ಆನರ್ಸ್) ಮೀಡಿಯಾ ಮತ್ತು ಕಮ್ಯುನಿಕೇಶನ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಚಿತ್ರರಂಗ, ಪತ್ರಿಕೋದ್ಯಮ, ಜಾಹೀರಾತು ಹಾಗೂ ಡಿಸೈನ್ ಕ್ಷೇತ್ರಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಈ ಕೋರ್ಸ್ ವಿಶೇಷ ಅವಕಾಶ ಕಲ್ಪಿಸಲಿದೆ. ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಂಸ್ಥೆ ಅತ್ಯಾಧುನಿಕ ತರಬೇತಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಭಾರತದಲ್ಲೇ ಏಕೈಕ Godox ಪ್ರಮಾಣಿತ ಸಂಸ್ಥೆ ಎಂಬ ಹೆಗ್ಗಳಿಕೆಗೆ…

Read More

ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಫೋಟೋಗ್ರಫಿ–ಫಿಲ್ಮ್‌ಮೇಕಿಂಗ್ ಕೋರ್ಸ್‌ಗೆ ಪ್ರವೇಶ ಆರಂಭಆಧುನಿಕ ಸ್ಟುಡಿಯೋ ಹಾಗೂ ಕೈಗಾರಿಕಾ ಸಂಪರ್ಕ ಸೌಲಭ್ಯ

ಮಂಗಳೂರು: NITTE Deemed to be University ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಎಂ.ಎ. ಇನ್ ಫೋಟೋಗ್ರಫಿ ಮತ್ತು ಫಿಲ್ಮ್‌ಮೇಕಿಂಗ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಮಾಧ್ಯಮ ಹಾಗೂ ದೃಶ್ಯ ಸಂವಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಈ ಕೋರ್ಸ್ ವಿಶೇಷ ಅವಕಾಶ ಕಲ್ಪಿಸಲಿದೆ. ಸಂಸ್ಥೆಯಲ್ಲಿ ಅತ್ಯಾಧುನಿಕ ಮಲ್ಟಿ-ಕ್ಯಾಮೆರಾ ಟೆಲಿವಿಷನ್ ಸ್ಟುಡಿಯೋ, ಐಮ್ಯಾಕ್ ಎಡಿಟಿಂಗ್ ಸ್ಟುಡಿಯೋ, ಆಡಿಯೋ–ವೀಡಿಯೋ ಎಡಿಟಿಂಗ್, ಗ್ರಾಫಿಕ್ ಹಾಗೂ ವೆಬ್ ಡಿಸೈನಿಂಗ್ ಸೌಲಭ್ಯಗಳಿವೆ. 2024 ಮತ್ತು 2025ರಲ್ಲಿ ಪ್ರಶಸ್ತಿ…

Read More

ನರಹರಿ–ಕೃಷ್ಣಕೋಡಿ ಸಂಪರ್ಕ ಕಡಿತ: 150ಕ್ಕೂ ಹೆಚ್ಚು ಕುಟುಂಬಗಳಿಗೆ ತೊಂದರೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಬಂದ್ ಆಗಿರುವ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಮಾಡುವಂತೆ ಹಾಗೂ ಕೆಡವಿ ಹಾಕಲಾದ ಬಸ್ ನಿಲ್ದಾಣವನ್ನು ಮರುಸ್ಥಾಪಿಸಿಕೊಡುವಂತೆ ನರಹರಿ ಭಾಗದ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.ಬಿಸಿರೋಡು- ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ 75 ರ ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣದ ವೇಳೆ ಕಲ್ಲಡ್ಕ ಸಮೀಪದ ಗೋಳ್ತಮಜಲು ಗ್ರಾ.ಪಂ‌.ವ್ಯಾಪ್ತಿಯ ನರಹರಿ ನಗರ ಮತ್ತು ಕೃಷ್ಣಕೋಡಿ ಎಂಬಲ್ಲಿ ಒಟ್ಟು ಮೂರು ರಸ್ತೆಗಳ ಸಂಪರ್ಕವನ್ನು ಕಡಿದು ಹಾಕಲಾಗಿತ್ತು. ಹಾಗಾಗಿ ಕಳೆದ ಮೂರು ವರ್ಷಗಳಿಂದ ಈ ಭಾಗದ ಸಾರ್ವಜನಿಕರು ಸಂಚರಿಸಲು…

Read More

ಇರಾನ್ ಮೇಲೆ ಪರಮಾಣು ದಾಳಿ ವಿಚಾರಣೆ? ಟ್ರಂಪ್ ಪ್ರಶ್ನೆ ಬಹಿರಂಗ!

ವಾಷಿಂಗ್ಟನ್: ಇರಾನ್ ವಿರುದ್ಧ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಬಳಸುವ ಸಾಧ್ಯತೆಯಿದೆ ಕುರಿತು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಜನರಲ್ ಡಾನ್ ಕೆನ್ ಅವರನ್ನು ಪ್ರಶ್ನಿಸಿದ್ದರು ಎಂಬ ಸಾರ್ವಜನಿಕ ಮಾಹಿತಿ ಬಹಿರಂಗವಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದು, ಇರಾನ್ ವಿರುದ್ಧದ ಯುದ್ಧದ ಸಂದರ್ಭದಲ್ಲಿ ಟ್ರಂಪ್ ಪರಮಾಣು ಬಳಕೆಯ ಶಸ್ತ್ರಾಸ್ತ್ರ ಆಯ್ಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದರು….

Read More

ಮಧ್ಯಪ್ರಾಚ್ಯ ಉದ್ವಿಗ್ನತೆಗೆ ಸೈನಿಕ ಪರಿಹಾರವಿಲ್ಲ: ಇರಾನ್ ವಿದೇಶಾಂಗ ಸಚಿವರ ಸ್ಪಷ್ಟನೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗೆ ಸೈನಿಕ ಪರಿಹಾರ ಸಾಧ್ಯವಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ. ಶಾಂತಿ ಸ್ಥಾಪನೆಗೆ ಭಾರತ ಮಹತ್ವದ ಹಾಗೂ ರಚನಾತ್ಮಕ ಪಾತ್ರ ವಹಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು, ಅಮೆರಿಕದ ಮೇಲೆ ಇರಾನ್‌ಗೆ ವಿಶ್ವಾಸವಿಲ್ಲ ಎಂದು ಹೇಳಿದರು, ಪರಸ್ಪರ ವಿರುದ್ಧ ಸಂದೇಶಗಳಿಂದ ಇರಾನ್–ಅಮೆರಿಕ ಮಾತುಕತೆಗಳಲ್ಲಿ ಗೊಂದಲ ಉಂಟಾಗಿದೆ ಎಂದು ಆರೋಪಿಸಿದರು. ಇರಾನ್ ಯಾವತ್ತೂ ಅಣ್ವಸ್ತ್ರ ನಿರ್ಮಾಣಕ್ಕೆ ಯತ್ನಿಸಿಲ್ಲ ಎಂದು ಪುನರುಚ್ಚರಿಸಿದ ಅವರು, ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ; ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆಗ್ರಹ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್, ದೇಶದ ಅತ್ಯಂತ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೊಂದಾದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು…

Read More

‘ಗೇರು ಮೇಳ-2026’ ಅಂಗವಾಗಿ ಚಿತ್ರಕಲೆ, ಭಾಷಣ, ರಂಗೋಲಿ ಸ್ಪರ್ಧೆ ಆಯೋಜನೆ ಮೇ 17 ರಂದು

ಮಂಗಳೂರು, ಮೇ 15: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ವತಿಯಿಂದ ಹಮ್ಮಿಕೊಂಡಿರುವ ‘ಗೇರು ಮೇಳ-2026’ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಮೇ 17ರಂದು ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿವೆ. ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಗಮ ಮನವಿ ಮಾಡಿದೆ. ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ-2026’ ಮೇ 17 ಮತ್ತು 18ರಂದು…

Read More

ಮೇ 17ರಂದು ‘ತರವಾಡ್’ ಕಾದಂಬರಿ ಕುರಿತು ಸಾಹಿತ್ಯ ಚರ್ಚೆ

ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ವತಿಯಿಂದ ಬ್ಯಾರಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಕುರಿತ ಸಂಶೋಧನಾ ಚಟುವಟಿಕೆಗಳ ಅಂಗವಾಗಿ ದಿವಂಗತ ಕಾಸಿಮ್ ಉಳ್ಳಾಲ್ ಅವರ ಪ್ರಸಿದ್ಧ ‘ತರವಾಡ್’ ಬ್ಯಾರಿ ಕಾದಂಬರಿಯ ತುಲನಾತ್ಮಕ ಹಿನ್ನೋಟ ಹಾಗೂ ಸಾಹಿತಿಗಳ-ಬರಹಗಾರರ ಕೂಡುವಿಕೆ ಕಾರ್ಯಕ್ರಮ ಮೇ 17ರಂದು ನಡೆಯಲಿದೆ.ನಗರದ ಡಾ. ಶಿವರಾಮ ಕಾರಂತ ಭವನದಲ್ಲಿ ಮಧ್ಯಾಹ್ನ 2.30ಕ್ಕೆ ಕಾರ್ಯಕ್ರಮ ಜರುಗಲಿದ್ದು, ಉದ್ಘಾಟನೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಡಾ. ಬಿ.ಎಂ. ಫಾರೂಕ್ ನೆರವೇರಿಸಲಿದ್ದಾರೆ. ಖ್ಯಾತ ಕಥೆಗಾರ ಮುನವ್ವರ್ ಜೋಗಿಬೆಟ್ಟು ‘ತರವಾಡ್’ ಕಾದಂಬರಿಯ…

Read More

ಮೇ 17ರಂದು ವಿಶಿಷ್ಟಚೇತನರ ಸಂಸ್ಥೆಯ 34ನೇ ವಾರ್ಷಿಕ ಮಹೋತ್ಸವ

ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟಚೇತನರ ಸಂಸ್ಥೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ 34ನೇ ವರ್ಷದ ವಾರ್ಷಿಕ ಮಹೋತ್ಸವ ಸಮಾರಂಭ ಮೇ 17ರಂದು ಮಂಗಳೂರಿನ ರೆಡ್ ಕ್ರಾಸ್ ಸಭಾಭವನದಲ್ಲಿ ನಡೆಯಲಿದೆ. ಸಮಾಜದಲ್ಲಿ ಕಡೆಗಣನೆಗೆ ಒಳಗಾಗಿರುವ ಅಶಕ್ತ ಹಾಗೂ ದೈಹಿಕ ವಿಶೇಷಚೇತನರನ್ನು ಒಗ್ಗೂಡಿಸಿ, ಅವರ ಹಕ್ಕುಗಳ ರಕ್ಷಣೆ ಹಾಗೂ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಸಂಸ್ಥೆಯನ್ನು 1992ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಖ್ಯಾತ ಮೂಳೆರೋಗ ತಜ್ಞ ಡಾ. ಎಂ. ಶಾಂತರಾಮ ಶೆಟ್ಟಿ…

Read More
error: Content is protected !!