ಮರಳು ಮಾಫಿಯಾಗಳೊಂದಿಗೆ ನಂಟು : ಕುಂಬಳೆ ಠಾಣೆಯ ಆರು ಪೊಲೀಸರ ಅಮಾನತು

ಮಂಜೇಶ್ವರ : ಮರಳು ಮಾಫಿಯಾಗಳೊಂದಿಗೆ ನಂಟು ಬೆಳೆಸಿ ಕೊಂಡು ಪೊಲೀಸಿನ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿರುವುದನ್ನು ಪತ್ತೆ ಹಚ್ಚಿ ಕುಂಬಳೆ ಪೊಲೀಸ್ ಠಾಣೆಯ ಐದು ಪೊಲೀಸರನ್ನು ಹಾಗೂ ಇಲ್ಲಿಂದ ವರ್ಗಾವಣೆಗೊಂಡ ಒಂದು ಪೊಲೀಸನನ್ನು ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರ ನಿರ್ದೇಶದಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕುಂಬಳೆ ಠಾಣೆಯ ಸೀನಿಯರ್ ಸಿವಿಲ್ ಪೊಲೀಸ್ ಅಧಿಕಾರಿ ಅಬ್ದುಲ್ ಸಲಾಂ, ಮನು, ಲಿನೇಶ್, ಅನೂಪ್, ಚಾಲಕ ಕೃಷ್ಣ ಪ್ರಸಾದ್ ಹಾಗೂ ಕುಂಬಳೆ ಠಾಣೆಯಿಂದ ಇತ್ತೀಚೆಗೆ ವರ್ಗಾವಣೆಗೊಂಡ ವಿನೋದ್ ಕುಮಾರ್ ಎಂಬಿವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ….

Read More

ದ.ಕ ಜಿಲ್ಲಾ ಜಾನಪದ ಯುವ ಬ್ರಿಗೇಡ್ ಘಟಕದ ಉದ್ಘಾಟನೆ ಆಗಸ್ಟ್ 07 ರಂದು

ಮಂಗಳೂರು: ಕನ್ನಡ ಜಾನಪದ ಪರಿಷತ್ ಹಾಗೂ ಜಾನಪದ ಯುವ ಬ್ರಿಗೇಡ್ ಇದರ ಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಡಾ| ಎಸ್. ಬಾಲಾಜಿ, ಬೆಂಗಳೂರು ಇವರು ಜಾನಪದ ಕಲೆಯನ್ನು ಉಳಿಸುವ ಮತ್ತು ಬೆಳೆಸುವ ದೃಷ್ಟಿಯಿಂದ ರಾಜ್ಯಾದಂತ ಹಲವಾರು ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಿ ಕಲೆಯನ್ನು ಪೋಷಿಸುತ್ತಾ ಬರುತ್ತಿದ್ದು ಇದರ ಪ್ರಯತ್ನದ ಫಲವಾಗಿ ಸ್ಥಾಪಿತವಾದ ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಯುವ ಬ್ರಿಗೇಡ್ ಘಟಕದಉದ್ಘಾಟನಾ ಕಾರ್ಯಕ್ರಮವು ಸುರತ್ಕಲ್‌ನ ಗೋವಿಂದದಾಸ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ಸಂಯೋಗದೊಂದಿಗೆ ಪದವಿ ಕಾಲೇಜಿನ ಎ.ವಿ. ಹಾಲ್‌ನಲ್ಲಿ…

Read More

ಅಂತರ್ ಜಿಲ್ಲಾ ವಿದ್ಯಾರ್ಥಿಗಳ ಫುಟ್ಬಾಲ್ ಪಂದ್ಯಾವಳಿ,ಆಗಸ್ಟ್ -04 ರಂದು

ಮಂಗಳೂರು: ದ.ಕ. ಜಿಲ್ಲಾ ಪುಟ್ಟಾಲ್ ಸಂಸ್ಥೆ ಕಳೆದ 26 ವರ್ಷಗಳಿಂದ ನಡೆಸುತ್ತಾ ಬಂದಿರುವ ಅಂತರ್ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದವಿ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗಳಿಗಾಗಿ ನಡೆಸುತ್ತಾ ಬರುತ್ತಿದ್ದು, 27ನೇ ವರ್ಷದ ಪಂದ್ಯಾವಳಿ ಆಗೋಸ್ಟ್ 4ನೇ ತಾರೀಖು ಸೋಮವಾರ ಪ್ರಾರಂಭವಾಗಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಡಿ.ಎಂ. ಅಸ್ಲಂ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು , ಮಂಗಳೂರು ನೆಹರೂ ಮೈದಾನಕ್ಕೆ ಹೊಸ ಟರ್ಪ್…

Read More

“ವಿಶ್ವ ಕುಂದಾಪ್ರ ದಿನಾಚರಣೆಯು ಆಗಸ್ಟ್ 3 ರಂದು

ಮಂಗಳೂರು: ಕುಂದಗನ್ನಡದ ನೆಲದಲ್ಲಿ ಜನಿಸಿ, ವೃತ್ತಿ ನಿಮಿತ್ತ ಮಂಗಳೂರಿಗೆ ಬಂದು ನೆಲೆಸಿ, ತುಳುನಾಡಿನವರೇ ಆಗಿದ್ದುಕೊಂಡರೂ, ತಮ್ಮ ಮೂಲ ನೆಲೆಯ ಭಾಷೆ, ಸಂಸ್ಕೃತಿ ಆಚರಣೆ, ಸಂಪ್ರದಾಯವನ್ನ ಉಳಿಸಿಕೊಂಡು ತಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದವರ ಆಶ್ರಯದಲ್ಲಿ “ವಿಶ್ವ ಕುಂದಾಪ್ರ ದಿನಾಚರಣೆಯು ಆಗಸ್ಟ್ ೩ ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 7ರ ತನಕ ನಗರದ ಉರ್ವ ಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಆಯೋಜನಾ ಸಮಿತಿಯ ಸಂಚಾಲಕಾರದ ಸಂತೋಷ್ ಶೆಟ್ಟಿ…

Read More

ಒಡಿಯೂರು : ಗ್ರಾಮೋತ್ಸವ 2025 ಆಗಸ್ಟ್ 8 ರಂದು

ಮಂಗಳೂರು: ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ – ಗ್ರಾಮೋತ್ಸವದ ಪ್ರಯುಕ್ತ 2001ರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ . ಈ ಭಾರಿಯ ಗ್ರಾಮೋತ್ಸವ ೨೦೨೫ ಕಾರ್ಯಕ್ರಮವು ಆಗಸ್ಟ್ ೮ ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ , ಗಣ್ಯರ ಸಮ್ಮುಖದೊಂದಿಗೆ ಜರಗಲಿದೆ ಎಂದು ಜನ್ಮದಿನೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ಸಹಕಾರ ರತ್ನ ಲ / ಎ . ಸುರೇಶ್ ರೈ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು ,…

Read More

ಮಂಜೇಶ್ವರ ತೀರ ಪ್ರದೇಶದಲ್ಲಿ ತೀವ್ರಗೊಂಡ ಕಡಲ್ಕೊರೆತ ಸ್ಥಳಕ್ಕೆ ಬೇಟಿ ನೀಡಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ ಸಿ ಪಿ ಎಂ ಜಿಲ್ಲಾ ಸೆಕ್ರಟರಿಯೇಟ್ ಸದಸ್ಯ-ಕೆ ಆರ್ ಜಯಾನಂದ

ಮಂಜೇಶ್ವರ: ಉಪ್ಪಳ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಶಾರದಾ ನಗರ, ಮಣಿಮುಂಡ ಕಡಪ್ಪುರ, ಹನುಮಾನ್ ನಗರ, ಬಾಂಗ್ಲಾ, ಶಾರದಾ ಮಂದಿರ ಸಮೀಪದ ಪ್ರದೇಶ, ಐಲಾ ಹನುಮಾನ್ ನಗರ ಎಂಬಿಡೆಗಳಲ್ಲಿ ಕಡಲ್ಕೊರೆತ ತೀವೃಗೊಂಡಿದೆ. ಅದೇ ರೀತಿ ಪೆರಿಂಗಡಿ ಹಾಗೂ ಬೇರಿಕೆ ಗಳಲ್ಲಿ ಕಡಲ್ಕೊರೆತ ತೀವ್ರ ರೀತಿಯಲ್ಲಿ ಮುಂದುವರಿಯುತ್ತಿದ್ದು, ಸುಮಾರು 5ರಷ್ಟು ವಿದ್ಯುತ್ ಕಂಬಗಳು ಸಮುದ್ರ ಪಾಲಾಗಿವೆ. 20ರಷ್ಟು ಕಂಬಗಳು ಇನ್ನೂ ಅಪಾಯದಂಚಿನಲ್ಲಿದೆ. ಈ ಪರಿಸರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಸುಮಾರು 50ರಷ್ಟು ಮನೆಗಳು ಅಪಾಯದಂಚಿನಲ್ಲಿವೆ. ಈ ಪ್ರದೇಶದಲ್ಲಿ ವಿದ್ಯುತ್…

Read More

ಖ್ಯಾತ ಸ್ಯಾಕ್ಸೋಫೋನ್ ವಾದಕ ಜಯರಾಮ ಮಂಜೇಶ್ವರ ರಿಗೆ ‘ನಾದಚಿಂತಾಮಣಿ’ ಪ್ರಶಸ್ತಿ ಪ್ರಧಾನ

ಮಂಜೇಶ್ವರ: ಖ್ಯಾತ ಸ್ಯಾಕ್ಸೋಫೋನ್ ವಾದಕ ಜಯರಾಮ ಮಂಜೇಶ್ವರ ರಿಗೆ ‘ನಾದಚಿಂತಾಮಣಿ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆನಡಾ ಕಂದಸಾಮಿ ದೇವಸ್ಥಾನದಲ್ಲಿ ಲೆಜೆಂಡರಿ ಸಂಗೀತಗಾರರಾದ ಡಾ.ಎಂ.ಪಿ.ನಕೀಂತೀರನ್ (ನಾಥಸ್ವರಂ) ಅಣ್ಣಾ ಮತ್ತು ಡಾ.ಟಿ.ಜಿ.ಮುತ್ತುಕುಮಾರಸ್ವಾಮಿ ಅಣ್ಣಾ (ಥವಿಲ್) ಅವರ ಗೌರವಾನ್ವಿತ ಸಮ್ಮುಖದಲ್ಲಿ ದೇವಾಲಯದ ಅಧ್ಯಕ್ಷರಾದ ಶ್ರೀ ಎಸ್.ಮುತ್ತುರಾಜಲಿಂಗಂ ಅವರಿಂದ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಜಯರಾಮ ಮಂಜೇಶ್ವರ ‘ಈ ಮನ್ನಣೆಯನ್ನು ಪಡೆದಿದ್ದಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಮತ್ತು ನಿಜವಾಗಿಯೂ ವಿನಮ್ರನಾಗಿದ್ದೇನೆ ಎಂದರು . ‘ನನ್ನ ಪ್ರತಿಭೆಯನ್ನು ಗುರುತಿಸಿ ನನ್ನ…

Read More

ರಾಜೇಂದ್ರ ಕಲ್ಲೂರಾಯರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ

ಕಾಸರಗೋಡು : ಎಡನೀರು ಶ್ರೀಮಠದ ವ್ಯವಸ್ಥಾಪಕರಾದ ನಿವೃತ್ತ ಪ್ರಾಂಶುಪಾಲ ರಾಜೇಂದ್ರ ಕಲ್ಲೂರಾಯರಿಗೆ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಪ್ರಶಸ್ತಿ – 2025’ ಆ.2ರಂದು ಬೆಳಗ್ಗೆ 10 ಗಂಟೆಗೆ ಎಡನೀರಿನ ಸ್ವಾಮೀಜಿಸ್ ಪ್ರೌಢ ಶಾಲೆಯಲ್ಲಿ ಪ್ರದಾನ ಮಾಡಲಾಗುವುದು. ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯುವ ಶಾಲೆಗಳಲ್ಲಿ ಕನ್ನಡ ಸಾಹಿತ್ಯ ಅಭಿಯಾನದ 4ನೇ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜೇಂದ್ರ ಕಲ್ಲೂರಾಯರು ಧಾರ್ಮಿಕ,…

Read More

113 ವರ್ಷದ ಇತಿಹಾಸವಿರುವ ಎಂ. ಸಿ.ಸಿ. ಬ್ಯಾಂಕಿನ 20 ನೇ ಶಾಖೆ ಆಗಸ್ಟ್ 3 ರಂದು ಬೈಂದೂರಿನಲ್ಲಿ ಉದ್ಘಾಟನೆ-ಅನಿಲ್ ಲೋಬೋ

ಮಂಗಳೂರು : 113 ವರ್ಷದ ಇತಿಹಾಸವಿರುವ ಎಂ. ಸಿ.ಸಿ. ಬ್ಯಾಂಕಿನ 20 ನೇ ಶಾಖೆ ಆಗಸ್ಟ್ 3 ರಂದು ಬೈಂದೂರಿನಲ್ಲಿ ಉದ್ಘಾಟನೆಯಾಗಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಮಂಗಳೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಎಮ್.ಸಿ.ಸಿ ಬ್ಯಾಂಕ್ 2025 ರ ಮಾರ್ಚಿಗೆ ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ‌ ಎಂದು ಅವರು ವಿವರಿಸಿದರು.ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಪ್ರಸ್ತುತ ಆಡಳಿತ ಮಂಡಳಿ…

Read More

ಪತ್ತೆಯಾಗದ ಹೇಮಂತ್ ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿಕೆ

ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಇಂದು ಕೂಡ ಶೋಧ ಕಾರ್ಯ ಮುಂದುವರಿದಿದೆ.ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ.ಹೇಮಂತ್ ನಿಗೆ ಸೇರಿದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹಾಗಾಗಿ ಈತ ಇಲ್ಲಿಯೇ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೋಲೀಸ್ ಇಲಾಖೆ ಅಗ್ನಿಶಾಮಕ ದಳದ ಸಿಬ್ಬಂದಿ ಮೂಲಕ ನಿನ್ನೆ ಮಧ್ಯಾಹ್ನ ದಿಂದ ಸಂಜೆ…

Read More
error: Content is protected !!