NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಐವರು ಆರೋಪಿಗಳಿಗೆ ಮತ್ತೆ 7 ದಿನ ಸಿಬಿಐ ಕಸ್ಟಡಿ
ಹೊಸದಿಲ್ಲಿ, NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಐವರು ಆರೋಪಿಗಳನ್ನು ಮತ್ತೆ ಏಳು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿ ದಿಲ್ಲಿಯ ವಿಶೇಷ ನ್ಯಾಯಾಲಯ ಗುರುವಾರ ಆದೇಶ ನೀಡಿದೆ. ನಾಸಿಕ್ನ ಶುಭಂ ಖೈರ್ನಾರ್, ಜೈಪುರದ ಮಂಗಿಲಾಲ್ ಬಿವಾಲ್, ವಿಕಾಸ್ ಬಿವಾಲ್, ದಿನೇಶ್ ಬಿವಾಲ್ ಹಾಗೂ ಗುರುಗ್ರಾಮದ ಯಶ್ ಯಾದವ್ ಬಂಧಿತ ಆರೋಪಿಗಳಾಗಿದ್ದಾರೆ. ಮೇ 3ರಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ನಡೆಸಿದ NEET ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ…
