ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ” ನಾಗರ ಪಂಚಮಿ ” ಆಚರಣೆ

ಮಂಜೇಶ್ವರ : ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ” ನಾಗರ ಪಂಚಮಿ ” ಸಂಭ್ರಮ ದಿಂದ ಆಚರಿಸಲಾಯಿತು . ಪ್ರಾತಃ ಕಾಲ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ವಾಸುಕೀ ಪೂಜೆ , ದೇವಳದ ಮುಂಭಾಗದಲ್ಲಿರುವ ಅಶ್ವತ್ಥ ಕಟ್ಟೆಯಲ್ಲಿ ಶ್ರೀ ನಾಗದೇವರ ಶೀಲಾ ಪ್ರತಿಮೆಗಳಿಗೆ ಪಂಚಾಮೃತ , ಕ್ಷೀರಾಭಿಷೇಕ , ಶಿಯಾಳಾಭಿಷೇಕ ಗಳು ಭಜಕರ ಸಮ್ಮುಖದಲ್ಲಿ ನೆರವೇರಿತು . ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು

Read More

ಧರ್ಮತ್ತಡ್ಕ ಶಾಲೆಯಲ್ಲಿ ರಂಜಿಸಿದ ಗಮಕ ವಾಚನ-ವ್ಯಾಖ್ಯಾನ.

ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ,ಕೇರಳ ಗಡಿನಾಡ ಘಟಕ ,ಕಾಸರಗೋಡು ಮತ್ತು ಸಿರಿಗನ್ನಡ ವೇದಿಕೆ ಬೆಂಗಳೂರು ಕೇರಳ ಗಡಿನಾಡ ಘಟಕ ಕಾಸರಗೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ”ಗಮಕ ವಾಚನ -ವ್ಯಾಖ್ಯಾನ ಕಾರ್ಯಕ್ರಮ”ವು ” ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ, ಧರ್ಮತ್ತಡ್ಕದಲ್ಲಿ ಇಂದು ನಡೆಯಿತು. ಗಮಕ ಪರಿಷತ್ತು ನಡೆದು ಬಂದ ಬಗೆ -ಮಹತ್ವ, ಕಾರ್ಯಚಟುವಟಿಕೆಗಳ ಕುರಿತು ಪ್ರಾಸ್ತಾವಿಕ ನುಡಿಗಳೊಂದಿಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ನಿವೃತ್ತ ಅಧ್ಯಾಪಕ, ಸಾಹಿತಿಯಾದಂತಹ ” ಶ್ರೀ.ವಿ ಬಿ ಕುಳಮರ್ವ “ನುಡಿದರು.ಶಾಲಾ ವ್ಯವಸ್ಥಾಪಕ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು .ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು ತಾಲೂಕು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಾಸರಗೋಡು ವಲಯದ ಅಡ್ಕತ್ತಬೈಲು ಕಾರ್ಯ ಕ್ಷೇತ್ರದಲ್ಲಿ BEMHS ಶಾಲೆಯ ಹತ್ತನೇ ತರಗತಿಯ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ ನಿನ್ನೆ BEMHS ಶಾಲೆಯಲ್ಲಿ ನಡೆಯಿತ್ತು . ಕಾಸರಗೋಡು ತಾಲೂಕಿನ ಭಜನಾ ಪರಿಷತ್ ಅಧಕ್ಷರಾದ ಶ್ರೀ ವೆಂಕಟ್ರಮಣ ಹೊಳ್ಳ ದೀಪ ಬೆಳಗಿಸಿ ಉದ್ಘಾಟಿಸಿದರು . ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಹಾಗೂ…

Read More

ಮಂಜೇಶ್ವರ ಕ್ವಾಟರ್ಸ್ನಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ : ಮಂಜೇಶ್ವರ ಕಡಂಬಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಕೆ ಎ ಅಬ್ದುಲ್ಲ ಮಾಲಕತ್ವದ ಕೆ ಎ ಬೋರ್ಡ್ ಪ್ಲೈವುಡ್ ಕಾರ್ಖಾನೆಯಲ್ಲಿ ನೌಕರನಾಗಿರುವ ಬಿಹಾರ ಮೂಲದ ಯುವಕನೊಬ್ಬ ಅಲ್ಲೇ ಸಮೀಪವಿರುವ ಕ್ವಾರ್ಟರ್ಸ್ ನಲ್ಲಿ ಸೋಮವಾರ ಸಂಜೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಿಹಾರ ನಿವಾಸಿ ಸೂರಜ್ ಸಾವನ್ನಪ್ಪಿದ ಯುವಕನಾಗಿದ್ದಾನೆ. ಈತ 8 ತಿಂಗಳು ಮೊದಲು ಬಿಹಾರದಿಂದ ಕೆಲಸಕ್ಕಾಗಿ ಬಂದಿದ್ದಾನೆನ್ನಲಾಗಿದೆ. ಜೊತೆಯಾಗಿದ್ದ ಈತನ ಭಾವ ಸೂರಜ್ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡ ಮೊದಲ ವ್ಯಕ್ತಿಯಾಗಿದ್ದಾನೆ. ಬಳಿಕ ಈತನೇ ಸೂರಜ್…

Read More

ಕಾರ್ಯಕರ್ತರ ಶ್ರಮ ಗೆಲುವಿನ ಸೂತ್ರ-ಆದರ್ಶ ಬಿ ಎಂ

ಕಾರ್ಯಕರ್ತರು ಗಳ ಶ್ರಮ ಹಾಗೂ ಸಿದ್ದಂತಗಳ ಮೇಲಿನ ನಂಬಿಕೆ ಗೆಲುವಿನ ಸೂತ್ರ.. ಗೆಲುವು ಪರಿಶ್ರಮಕ್ಕೆ ಮಾತ್ರ ದೊರೆಯುತ್ತದೆ ಎಂದುಬಿಜೆಪಿ ಪೈವಳಿಕೆ ಪೆರ್ವೋಡಿ ವಾರ್ಡ್ ಸಮ್ಮೇಳನ ಉದ್ಘಾಟಿಸಿ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಸಂಘಟನಾ ಚಟುವಟಿಕೆ, ಹಾಗೂ ಪಕ್ಷದ ಕಾರ್ಯಕ್ರಮ ಗಳ ವಿವರ ನೀಡಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ಪಂಚಾಯತ್ ಸಮಿತಿ ಅಧ್ಯಕ್ಷರಾದ ಸತ್ಯ ಶಂಕರ್ ಭಟ್ ಪ್ರವೀಣ್ ರೈ ಪಟ್ಲ, ಸುಬ್ರಮಣ್ಯ ಭಟ್, ಗಣೇಶ ಪೆರ್ವೋಡಿ, ಚಂದ್ರವತಿ ಶೆಟ್ಟಿ, ಕಮಲ,…

Read More

ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸೋ ಸ್ವಿಮಿಂಗ್ ಪುಲೋ ?!

ಮಂಗಳೂರು : ಆಮೆಗತಿಯಲ್ಲಿ ಸಾಗುತ್ತಿರುವ ಮಂಗಳೂರು ನಗರದ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾಮಗಾರಿಯು ಸುತ್ತಮುತ್ತಲಿನ ಪ್ರದೇಶವಾಸಿಗಳಿಗೆ ತೊಂದರೆ ಕೊಡುವುದಂತೂ ಸತ್ಯ . ಒಂದು ವರ್ಷದಲ್ಲಿ ಕಾಮಗಾರಿ ಪೂರ್ತಿಯಾಗುತ್ತೆ ಎನ್ನುವ ವಿಸ್ವಾಸವನ್ನು ನೀಡಿದ್ದ ರೈಲ್ವೇ ಇಲಾಖೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೂರು ವರುಷ ಕಳೆಯುತ್ತಾ ಬಂದರೂ ಕಾಮಗಾರಿಯನ್ನು ಪೂರ್ತಿ ಮಾಡದೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ವಿಫಲವಾಗಿದೆ . ಅತ್ಯಂತ ನುರಿತ ತಾಂತ್ರಿಕರು ಇದ್ದರೂ ಕಾಮಗಾರಿ ಪೂರ್ತಿಯಾಗದೇ ಅಲ್ಲಿನ ನಗರವಾಸಿಗಳಿಗೆ ತೊಂದರೆಯನ್ನು ನೀಡುತ್ತದೆ ….

Read More

ಮುಖ್ಯ ಮಂತ್ರಿ ಸಿದ್ದರಾಮಯ್ಯರಿಂದ ಪಂಚ ಗ್ಯಾರಂಟಿಗಳಿಗಾಗಿ ಸುಮಾರು 51,034 ಕೋಟಿ ರೂ. ಅನುದಾನ

ಬೆಂಗಳೂರು: ಬಜೆಟ್ ವರ್ಷದ ಮೊದಲ ತ್ರೈ ಮಾಸಿಕದಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿನ ಬಂಡವಾಳ ವೆಚ್ಚ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿದೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅತ್ಯಲ್ಪ ಹಣವನ್ನು ಬಂಡವಾಳ ವೆಚ್ಚಕ್ಕಾಗಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಯ ಹೊರೆಯ ಮಧ್ಯೆ ಆಡಳಿತ ನಡೆಸುತ್ತಿದೆ. ಒಂದೆಡೆ ಅಭಿವೃದ್ಧಿ ಖರ್ಚು ಕುಂಠಿತವಾಗದಂತೆ ಪಂಚ ಗ್ಯಾರಂಟಿ ಮುಂದುವರಿಸುವುದು ಕಾಂಗ್ರೆಸ್ ಸರ್ಕಾರದ ಹೊಣೆಗಾರಿಕೆಯಾಗಿದೆ. ಈಗಾಗಲೇ ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷೀಯರೇ ಸರ್ಕಾರದ ವಿರುದ್ಧ ಅಭಿವೃದ್ಧಿ ಕುಂಠಿತ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಕಳೆದ…

Read More

ನಿರಂತರ 170 ಗಂಟೆ ಭರತನಾಟ್ಯ: ವಿಶ್ವ ದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ

ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ‌ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ. ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್​​ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ ನೀಡಿದ್ದೇ ಈವರೆಗಿನ ದಾಖಲೆಯಾಗಿತ್ತು. ಇದೀಗ 170 ಗಂಟೆ ಸತತ ಪ್ರದರ್ಶನ…

Read More

ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿತದ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ವ್ಯತ್ಯಯ !

ಮಂಗಳೂರು : ವಿಪರೀತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತಗೊಂಡ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿರುವ ಘಟನೆ ಮಣ್ಣಗುಂಡಿ ಎಂಬಲ್ಲಿ ನಡೆದಿದೆ. ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಸೋಮವಾರ ಬೆಳಗಿನ ಜಾವದಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎಂದು ತಿಳಿದು ಬಂದಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಸ್ಥಳೀಯರು ಕಳಪೆ…

Read More

ಉಪ್ಪಳ ಶಾರದಾ ನಗರದಲ್ಲಿ ಭೀಕರ ಕಡಲ್ಕೊರೆತ .ಹಲವಾರು ಮನೆಗಳು ಅತಂತ್ರ .ಕಡಲ್ಕೊರೆತ ಪ್ರದೇಶಕ್ಕೆ ಕೆ ಆರ್ ಜಯಾನಂದ ನಿಯೋಗ ಭೇಟಿ.ತುರ್ತು ಪರಿಹಾರಕ್ಕೆ ಆಗ್ರಹ

ಉಪ್ಪಳ : ಭೀಕರ ಕಡಲ್ಕೊರೆತದಿಂದ ಉಪ್ಪಳ ಪರಿಸರದ ಶಾರದಾನಗರದಿಂದ ಹನುಮಾನ್ ನಗರ, ಐಲ ಕಡಪ್ಪರ, ಪೆರಿಂಗಡಿ ವರೆಗಿನ 5ಕಿ.ಮೀ ಪ್ರದೇಶದ ಕಡಲ ತಡೆಗೋಡೆ ಸಹಿತ ಪುಲಿಮುಟ್ಟು ಸಮುದ್ರ ಕೊಚ್ಚಿ ಕೊಂಡೊಯ್ದು ಸುಮಾರು 400 ಕೂಟುಂಬಗಳ ಬದುಕಿನ ಭವಿಷ್ಯವೇ ಅತಂತ್ರ ಸ್ಥಿತಿಯಲ್ಲಿದೆ. ಇಡೀ ಪ್ರದೇಶವನ್ನು ಕಢಲುಆಕ್ರಮಿಸಿ, ರೌದ್ರ ತೆರೆಗಳೊಂದಿಗೆ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಜನರು ಭೀತಿಯೊಂದಿಗೆ ಬದುಕುತ್ತಿದ್ದಾರೆ. ಈ ಪ್ರದೇಶಗಳಿಗೆ ಆದಿತ್ಯವಾರ ಸಂಜೆ ಸಿಪಿಎಂ ಸೆಕ್ರೇಟರಿಯೇಟ್ ಸದಸ್ಯ, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಕೆ. ಆರ್. ಜಯಾನಂದ ನೇತೃತ್ವದ ನಿಯೋಗ…

Read More
error: Content is protected !!