ಕನ್ನಡ ಕಟ್ಟುವ ಕಟ್ಟಾಳುಗಳನ್ನು ಜೋಡಿಸುವುದೇ ಕನ್ನಡ ಜಾಗೃತಿ ಅಭಿಯಾನದ ಉದ್ದೇಶ. ಡಾ. ವಾಮನ್ ರಾವ್ ಬೇಕಲ್.
ಕಾಸರಗೋಡು : ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕನ್ನಡದ ಕಟ್ಟಾಳುಗಳನ್ನು ಪರಸ್ಪರ ಜೋಡಿಸುವುದೇ “ಮನೆ ಮನೆ -ಕನ್ನಡ ಜಾಗೃತಿ ಅಭಿಯಾನದ ಪ್ರದಾನ ಉದ್ದೇಶ. ಕನ್ನಡ ಮನಸುಗಳು ಒಂದಾಗಬೇಕು. ಕನ್ನಡ ಪ್ರಜ್ಞೆ ಹೊಸ ತಲೆಮಾರಿನಲ್ಲಿ ಬೆರೂರಿಸುವ ಪ್ರಯತ್ನಕ್ಕೆ, ಕವಿಗಳು, ಸಾಹಿತಿಗಳು, ಕಲಾವಿದರು, ಸಂಘಟಕರು ಒಂದಾಗಿ ಸೇರಿ ಚರ್ಚಿಸುವ ವೇದಿಕೆ ನಿರ್ಮಾಣವಾಗಬೇಕು. ಹೊಸ ಹೊಸ ಯೋಚನೆ -ಯೋಜನೆಗಳ ಮೂಲಕ ಒಟ್ಟಾಗಿ ಕನ್ನಡ ಉಳಿಸುವ, ಬೆಳೆಸುವ ಪ್ರಯತ್ನಕ್ಕೆ ಪ್ರತಿಜ್ಞಾಬದ್ಧರಾಗಬೇಕು ಎಂದು ಕನ್ನಡ ಭವನ ಮತ್ತು ಕೇರಳ ರಾಜ್ಯ…