“ವಾದಿರಾಜ ವಾಲಗ ಮಂಡಳಿ” ಸಿನಿಮಾ ಮೇ ತಿಂಗಳಿನಲ್ಲಿ ತೆರೆಗೆ ಬರುವ ಸಾಧ್ಯತೆ – ನಿರ್ಮಾಪಕ ಡಾ.ಎಂ.ಎನ್. ರಾಜೇಂದ್ರ ಕುಮಾರ್

ಉಡುಪಿ:ಎಂ.ಎನ್.ಆರ್. ಪ್ರೊಡಕ್ಷನ್ ಸಂಸ್ಥೆಯಡಿ ನಿರ್ಮಿಸಲಾಗುತ್ತಿರುವ ವಾದಿರಾಜ ವಾಲಗ ಮಂಡಳಿ ಕನ್ನಡ ಚಲನಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ವರ್ಷದ ಮೇ ತಿಂಗಳಿನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಪ್ರೊಡಕ್ಷನ್‌ನ ಅಧ್ಯಕ್ಷ, ನಿರ್ಮಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಬ್ರಹ್ಮಾವರ ತೆಂಕುಮನೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 300 ವರ್ಷಗಳ ಇತಿಹಾಸವುಳ್ಳ ಬ್ರಹ್ಮಾವರ ತೆಂಕುಮನೆಯಲ್ಲಿ ಮುಂದಿನ 15 ದಿನಗಳ ಚಿತ್ರೀಕರಣ ನಡೆಯಲಿದ್ದು, ಆ ಬಳಿಕ ಮಂಗಳೂರು ಅದ್ಯಪಾಡಿ, ಮಂಜೇಶ್ವರದಲ್ಲಿ ಚಿತ್ರೀಕರಿಸಲಾಗುತ್ತದೆ. 50 ದಿನಗಳಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಿ ಮೇ ನಲ್ಲಿ ತೆರೆ…

Read More

ಡಿ.12ಕ್ಕೆ ತೆರೆ ಮೇಲೆ ಘರ್ಜಿಸಲು ಬರುತ್ತಿದೆ ಬಹುನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾ… !

ಮಂಗಳೂರು:ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ನಿರ್ದೇಶಕ ಭರತ್ ಶೆಟ್ಟಿ, “ಈಗಾಗಲೇ ಸಿನಿಮಾದ ಮೂರು ಪ್ರೀಮಿಯರ್ ಶೋಗಳು ನಡೆದಿದ್ದು ಪ್ರೇಕ್ಷಕರು…

Read More

ಗುರುವಿನ ಅನುಗ್ರಹ ಮೂಲದಿಂದ ಮಾತ್ರ ವ್ಯಕ್ತಿ ಸಂಪೂರ್ಣನಾಗುತ್ತಾನೆ :ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ

ಕಾಸರಗೋಡು :ಗುರುವಿನ ಅನುಗ್ರಹ ಪ್ರಾಪ್ತಿಯಾದರೆ ಮಾತ್ರ ವ್ಯಕ್ತಿ ಜೀವನದಲ್ಲಿ ಪರಮೋನ್ನತ ಸ್ಥಾನ ಮಾನಗಳು ವ್ಯಕ್ತಿಯ ಪಾಲಿಗೆ ಬಂದರೂ ಅದು ವಿಜಯಪತಕ್ಕೆ ಬಂದು ವ್ಯಕ್ತಿ ವಿರಾಜಮಾನನಾಗುತ್ತಾನೆ. “ಗುರುನೆಲೆಇಲ್ಲದಿದ್ದರೆ ಯಾವ ನೆಲೆಯೂ ಇಲ್ಲ. ಗುರುಮೂಲದಿಂದಲೇ ನಮಗೆ ದೈವತ್ವದ, ಧರ್ಮದ ಸೂತ್ರ ತಿಳಿಯುವುದು. ಅಂತಹ ಒಂದು ಗುರುವಿಗೆ ಪ್ರಾರ್ಥನೆ ಹಾಗೂ ಧ್ಯಾನ, ಭಜನೆ ಯನ್ನು ಮಾಡಲು ಅವಕಾಶವಾಗುವ ನಿಟ್ಟಿನಲ್ಲಿ ರಾಮಕ್ಷತ್ರಿಯ ಸಮಾಜದ ಗುರುಗಳಾದ ಶ್ರೀ ಭಿಕ್ಷು ಸ್ವಾಮೀಜಿ ಗಳ ಮಂದಿರದಲ್ಲಿ ಪ್ರಾರ್ಥನ ಮಂದಿರ ಅತೀ ಸುಂದರವಾಗಿ ನಿರ್ಮಿಸಿ ಅರ್ಪಿಸಿದ ಕನ್ನಡ ಭವನದ…

Read More

ರೋಡಲ್ಲಿ ತೇಲಾಡಿದ ಮೊಟ್ಟೆ … !?

ಮಂಗಳೂರು: ಮೊಟ್ಟೆ ಸಾಗಾಟದ ವಾಹನಕ್ಕೆ ಲಾರಿ ಢಿಕ್ಕಿಯಾಗಿ ರಸ್ತೆ ತುಂಬಾ ಮೊಟ್ಟೆ ಚೆಲ್ಲಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದುದರಿಂದ ಈ ಹಾನಿ ಸಂಭವಿಸಿದೆ. ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವಾಗಿದೆ. ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ವಾಹನಕ್ಕೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಹಿಂದಿನಿಂದ ಲಾರಿ ಢಿಕ್ಕಿಯಾಗಿದೆ. ಇದರಿಂದ ಡಿವೈಡರ್ ಮೇಲೆ ಹತ್ತಿದ್ದ ಮೊಟ್ಟೆ ಸಾಗಾಟದ ವಾಹನ ಮಗುಚಿ…

Read More

ದಕ್ಷಿಣ ಕನ್ನಡ ಜಿಲ್ಲಾ ಪೌರಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘ ನೇತೃತ್ವದಲ್ಲಿ ಊರ್ವ ಪತ್ರಿಕಾ ಭವನದಿಂದ ಜಿಲ್ಲಾ ಪಂಚಾಯತ್ ಕಚೇರಿ ತನಕ ಕಾಲ್ನಡಿಗೆ ಜಾಥಾ…. !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೌರಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘ (ರಿ) ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್‌ಗಳಲ್ಲಿ ದುಡಿಯುತ್ತಿರುವ ಸ್ವಚ್ಛತಾ ಕಾರ್ಮಿಕರು ಮತ್ತು ಸ್ವಚ್ಛತಾ ವಾಹನ ಚಾಲಕರು ತಮ್ಮ ಬೇಡಿಕೆಗಳಿಗೆ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಮಂಗಳವಾರ ಉರ್ವಾ ಸ್ಟೋರ್‌ನಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಊರ್ವ ಪತ್ರಿಕಾ ಭವನದಿಂದ ಕಾಲ್ನಡಿಗೆ ಜಾಥಾ ಹೊರಟ ಕಾರ್ಮಿಕರು ಘೋಷಣೆ ಕೂಗುತ್ತ ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ…

Read More

ಕಾಸರಗೋಡು ಸ್ಥಳೀಯಾಡಳಿತ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಮಂಜೇಶ್ವರ: ಜಿಲ್ಲೆಯಲ್ಲಿ ಡಿ.11ರಂದು ನಡೆಯಲಿರುವ ಸ್ಥಳೀಯಾಡಳಿತ ಚುನಾವಣೆಗೆ ಸಿದ್ದತೆ ಪೂರ್ಣಗೊಂಡಿದೆ ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ. ಇನ್ಸಾಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಮಂಗಳವಾರ ಸಂಜೆ ತೆರೆಬೀಳಲಿದೆ. ಮಂಗಳವಾರದಂದು ಬೆಳಗ್ಗಿನಿಂದ ಎಲ್ಲೆಡೆ ಅಬ್ಬರದ ಪ್ರಚಾರ ಕಂಡು ಬಂತು. ಎಲ್ಲೆಡೆ ವಾಹನಗಳಲ್ಲಿ ಧ್ವನಿ ವರ್ಧಕಗಳನ್ನು ಕಟ್ಟಿ ಸುಮಧುರ ಹಾಡಿನೊಂದಿಗೆ ಅಭ್ಯರ್ಥಿಗಳ ಪರ ಪ್ರಚಾರ ಕಂಡು ಬಂತು. ಜಿಲ್ಲಾ ಪಂಚಾಯತ್‌ನ 18 ಡಿವಿಜನ್, 38 ಗ್ರಾಮ ಪಂಚಾಯತ್, ಮೂರು ನಗರಸಭೆ ಹಾಗೂ ಆರು ಬ್ಲಾಕ್…

Read More

ಮೂತ್ರಪಿಂಡಗಳನ್ನು ಆರೋಗ್ಯವಾಗಿರಿಸಿಕೊಳ್ಳಲು ಎಷ್ಟು ನೀರು ಕುಡಿಯಬೇಕು?

ಯೂರಿಕ್ ಆಮ್ಲ (Uric Acid) ಎಂಬುದು ನಮ್ಮ ದೇಹವು (Body) ಪ್ಯೂರಿನ್‌ಗಳನ್ನು ಒಡೆಯುವಾಗ ಉತ್ಪಾದಿಸುವ ಒಂದು ನೈಸರ್ಗಿಕ ವಸ್ತುವಾಗಿದೆ. ಈ ಪ್ಯೂರಿನ್‌ಗಳು ಮಾಂಸ (Meat), ಸಮುದ್ರಾಹಾರ ಮತ್ತು ತರಕಾರಿಗಳಂತಹ (Vegetables) ದೈನಂದಿನ ಆಹಾರ (Food) ಪದಾರ್ಥಗಳಲ್ಲಿಯೂ ಕಂಡು ಬರುತ್ತವೆ ಮತ್ತು ಇದು ದೇಹದ ಸ್ವಂತ ಜೀವಕೋಶಗಳಿಂದ ನೈಸರ್ಗಿಕವಾಗಿ ಉತ್ಪತ್ತಿಯಾಗುತ್ತದೆ. ಸಾಮಾನ್ಯವಾಗಿ, ಯೂರಿಕ್ ಆಮ್ಲವು ರಕ್ತ ವ್ಯವಸ್ಥೆಯಲ್ಲಿ ಕರಗುತ್ತದೆ ಮತ್ತು ಮೂತ್ರಪಿಂಡಗಳ ಮೂಲಕ ದೇಹವನ್ನು ಬಿಡುತ್ತದೆ, ಆದರೆ ಕೆಲವೊಮ್ಮೆ ಅದು ಸಂಗ್ರಹವಾಗುತ್ತದೆ. ಈ ಸ್ಥಿತಿಯನ್ನು ವೈದ್ಯಕೀಯವಾಗಿ ಹೈಪರ್ಯೂರಿಸೆಮಿಯಾ ಎಂದು ಕರೆಯಲಾಗುತ್ತದೆ….

Read More

ಮಂಗಳೂರು: ಅಕ್ರಮ ಎಂಡಿಎಂಎ ಮಾರಾಟ- ಮೂವರು ಆರೋಪಿಗಳ ಬಂಧನ

ಮಂಗಳೂರು : ತಲಪಾಡಿ ಗ್ರಾಮದ ತಚ್ಚಣಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದ ಬಗ್ಗೆ “ವಿಶ್ವಾಸಾರ್ಹ ಮಾಹಿತಿ” ಆಧಾರದ ಮೇಲೆ ದಾಳಿ ನಡೆಸಿ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಬ್ದುಲ್ ರವೂಫ್ (30), ಶರೀಫ್ ಅಲಿಯಾಸ್ ಅಮೀನ್ (34) ಮತ್ತು ನಿಯಾಜ್ (23) ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 42 ಗ್ರಾಂ ಎಂಡಿಎಂಎ, ಒಂದು ಟೊಯೋಟಾ ಕಾರು, ಮೂರು ಮೊಬೈಲ್ ಫೋನ್ ಹ್ಯಾಂಡ್‌ಸೆಟ್‌ಗಳು ಮತ್ತು 2,500 ರೂ. ನಗದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಪ್ರಾಥಮಿಕ ವಿಚಾರಣೆಯಲ್ಲಿ ನಿಯಾಜ್…

Read More

ಮಣಿಪಾಲ : ಕೋಳಿ ಅಂಕಕ್ಕೆ ದಾಳಿ- ಎಂಟು ಮಂದಿ ವಶಕ್ಕೆ

ಮಣಿಪಾಲ, : ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್, ಫಾರೂಕ್ ಅಹಮ್ಮದ್ ಬಂಧಿತ ಆರೋಪಿಗಳು. ಇವರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ 2 ವರ್ಷದ ಮಗು ಪತ್ತೆ

ಮಂಗಳೂರು: ಮಂಗಳೂರು ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಜುಲೈ 7 ರಂದು ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಮಂಗಳೂರು ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ. ಈ ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ (ದೂರವಾಣಿ ಸಂಖ್ಯೆ:0824-2440004) ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
error: Content is protected !!