“ವಾದಿರಾಜ ವಾಲಗ ಮಂಡಳಿ” ಸಿನಿಮಾ ಮೇ ತಿಂಗಳಿನಲ್ಲಿ ತೆರೆಗೆ ಬರುವ ಸಾಧ್ಯತೆ – ನಿರ್ಮಾಪಕ ಡಾ.ಎಂ.ಎನ್. ರಾಜೇಂದ್ರ ಕುಮಾರ್
ಉಡುಪಿ:ಎಂ.ಎನ್.ಆರ್. ಪ್ರೊಡಕ್ಷನ್ ಸಂಸ್ಥೆಯಡಿ ನಿರ್ಮಿಸಲಾಗುತ್ತಿರುವ ವಾದಿರಾಜ ವಾಲಗ ಮಂಡಳಿ ಕನ್ನಡ ಚಲನಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ವರ್ಷದ ಮೇ ತಿಂಗಳಿನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಪ್ರೊಡಕ್ಷನ್ನ ಅಧ್ಯಕ್ಷ, ನಿರ್ಮಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಬ್ರಹ್ಮಾವರ ತೆಂಕುಮನೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 300 ವರ್ಷಗಳ ಇತಿಹಾಸವುಳ್ಳ ಬ್ರಹ್ಮಾವರ ತೆಂಕುಮನೆಯಲ್ಲಿ ಮುಂದಿನ 15 ದಿನಗಳ ಚಿತ್ರೀಕರಣ ನಡೆಯಲಿದ್ದು, ಆ ಬಳಿಕ ಮಂಗಳೂರು ಅದ್ಯಪಾಡಿ, ಮಂಜೇಶ್ವರದಲ್ಲಿ ಚಿತ್ರೀಕರಿಸಲಾಗುತ್ತದೆ. 50 ದಿನಗಳಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಿ ಮೇ ನಲ್ಲಿ ತೆರೆ…