ಆಗಸ್ಟ್ 1 ಹಾಗೂ 2 ರಂದು 15ನೇ ಆವೃತ್ತಿಯ ‘ಆಳ್ವಾಸ್ ಉದ್ಯೋಗ ಮೇಳ..!

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸಿಕೊಂಡು ಬರುತ್ತಿರುವ ಉದ್ಯೋಗ ಮೇಳದ 15ನೇ ಆವೃತ್ತಿಯು ಆಗಸ್ಟ್ 1 ಹಾಗೂ 2 ರಂದು ಮೂಡಬಿದ್ರೆಯ ವಿದ್ಯಾಗಿರಿಯಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ. ಮಂಗಳೂರಿನ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ ಉದ್ಯೋಗಮೇಳವು ವೃತ್ತಿ ಆಕಾಂಕ್ಷಿಗಳಿಗೆ ಸದಾ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದ್ದು ಈ ಮೇಳವು ವಿಶೇಷವಾಗಿ ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಉದ್ಯೋಗ ಅವಕಾಶಕೊಡಿಸುವ…

Read More

ಹೈದರಾಬಾದ್ ,ಮುಂಬೈ,ಬೆಂಗಳೂರು ,ಅಹಮದಾಬಾದ್ ನಡೆದ ಭಯೋತ್ಪಾದನಾ ದಾಳಿಯ ಹಿನ್ನಲೆಯಲ್ಲಿ ಬಂದಿಯಾಗಿದ್ದ ಆರೋಪಿ ಯಾಸೀನ್ ಭಟ್ಕಳ ವಿಚಾರಣೆ ಮತ್ತೆ ಆರಂಭ

ಹೈದರಾಬಾದ್ ,ಮುಂಬೈ,ಬೆಂಗಳೂರು ,ಅಹಮದಾಬಾದ್ ನಡೆದ ಭಯೋತ್ಪಾದನಾ ದಾಳಿಯ ಹಿನ್ನಲೆಯಲ್ಲಿ 04-10-2008 ರಂದು ಬಂಧಿಸಲಾಗಿದ್ದ ಯಾಸೀನ್ ಭಟ್ಕಳ ವಿಚಾರಣೆ ಮತ್ತೆ ಆರಂಭವಾಗಿದೆ ನಿಷೇಧಿತ ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೊಂದಿಗೆ ನಂಟು ಇಟ್ಟುಕೊಂಡಿದ್ದ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಯಾಸೀನ್ ಭಟ್ಕಳ ವಿರುದ್ಧ ದೇಶದ ವಿವಿಧ ಕಡೆಗಳಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಪೂರ್ವ ತಯಾರಿ ಆರೋಪ ಮತ್ತು ಸ್ಪೋಟಕ ವಸ್ತುಗಳನ್ನು ಹಾಗೂ ಸ್ಪೋಟಕಗಳನ್ನು ತಯಾರಿಸುವ ವಸ್ತುಗಳನ್ನು ತನ್ನ ಬಳಿ ಇಟ್ಟುಕೊಂಡ ಆರೋಪದಲ್ಲಿ ಮಂಗಳೂರಿನ ಉಳ್ಳಾಲ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು, ದಕ್ಷಿಣ ಕನ್ನಡ…

Read More

ಕುಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ

ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿತ್ತು. ಇದೀಗ ಮತ್ತೆ ಕುಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮವಾಗಿದೆ. ಜುಲೈ 22ರ ಸಂಜೆ ಮೊದಲ ಬಾರಿಗೆ ಭಾರೀ ವಾಹನ ದಟ್ಟಣೆ ಕಂಡುಬಂದಿತ್ತು. ಜುಲೈ 23ರಂದು ಇಡೀ ದಿನ ಕೊಟ್ಟಾರ-ಪಣಂಬೂರು ಮಾರ್ಗದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನಗಳ ಸಂಚಾರವನ್ನು ಪರಿಣಾಮಕಾರಿಯಾಗಿ ಸುಗಮಗೊಳಿಸಲು ಸಾಧ್ಯವಾಗದೆ ಪೊಲೀಸರು ಪರದಾಡಿದ್ದರು. ಬುಧವಾರ, ಕುಳೂರಿನ…

Read More

ಧರೆಗುರುಳಿದ ಶತಾಯುಷಿ ಬೃಹತ್ ಮರ.ತಪ್ಪಿದ ಭಾರೀ ಅನಾಹುತ

ಕಾಸರಗೋಡು:ಕಾಞಂಗಾಡ್ ರಾಜ್ಯ ಹೆದ್ದಾರಿಯಲ್ಲಿ ಬರುವ ಚಾಮುಂಡಿಕುನ್ನು ಪರಿಸರದಲ್ಲಿ ವ್ಯಾಪಕವಾಗಿ ಸುರಿದ ಮಳೆ ಹಾಗೂ ಬಲವಾಗಿ ಬೀಸಿದ ಗಾಳಿಯ ಪರಿಣಾಮ ಚಿತ್ತಾರಿ ವಿಲೇಜ್ ಆಫೀಸ್ ಬಳಿಯ ಬೃಹತ್ ತ್ತಾದ ಮರವೊಂದು ಧರೆಗೆ ಉರುಳಿದೆ . ಪರಿಣಾಮ ಕಾರೊಂದು ಜಕ್ಕಮ್ ಆಗಿದೆ ಜೊತೆಗೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ರೆಂಬೆ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ತಂತಿ ತುಂಡಾಗಿ ರೋಡ್ ಗೆ ಬಿದ್ದಿದೆ . ಪರಿಣಾಮ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಾಸ ಉಂಟಾಯಿತು . ಕೆಲ ದಿನಗಳ ಹಿಂದೆ ಈ ಮರವನ್ನು…

Read More

ಮಂಜೇಶ್ವರದ ಅಂಬಿತ್ತಾಡಿಯಲ್ಲಿ ದೈತ್ಯಾಕಾರದ ಮರವೊಂದು ಧಾರಾಶಾಯಿ.ಅಸ್ತವ್ಯಸ್ತಗೊಂಡ ಸಂಚಾರ ವ್ಯವಸ್ಥೆಯನ್ನು ಸ್ಥಳೀಯರ ಸಹಕಾರದೊಂದಿಗೆ ಸರಿಪಡಿಸಿದ ವಾರ್ಡ್ ಸದಸ್ಯೆ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯ 7ನೇ ವಾರ್ಡ್ ಅಂಬಿತ್ತಾಡಿಯಲ್ಲಿ ದೈತ್ಯಾಕಾರದ ಮರವೊಂದು ರಸ್ತೆಗೆ ಬಿದ್ದು ಸುಮಾರು ವಾರಗಳ ಕಾಲ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ದಿನನಿತ್ಯದ ಓಡಾಟದಲ್ಲಿ ಸಮಸ್ಯೆ ಎದುರಿಸುತ್ತಿದ್ದ ಸ್ಥಳೀಯರಿಗೆ ಬಹಳ ಅಡಚಣೆಯಾಗಿತ್ತು. ರಸ್ತೆಗೆ ಅಡ್ಡವಾಗಿ ಬಿದ್ದ ಈ ಮರ, ಸ್ಥಳೀಯ ನಿವಾಸಿಗಳ ಮತ್ತು ವಾಹನ ಸವಾರರ ಸಂಚಾರಿ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿತ್ತು. ಸಂಬಂಧಿತ ಇಲಾಖೆಗಳಿಂದ ನಿರೀಕ್ಷಿಸಿದ ನೆರವು ತಡವಾಗುತ್ತಿದ್ದ ಸಂದರ್ಭದಲ್ಲಿ 7ನೇ ವಾರ್ಡ್‌ನ ಸದಸ್ಯೆ ಶ್ರೀಮತಿ ರುಬೀನಾ ಅವರು ಮುಂದಾಗಿದ್ದು, ಊರಿನ ಯುವಕರು ಹಾಗೂ…

Read More

ಕೊಂಡೆವೂರು: ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ನಾಳೆ

ಉಪ್ಪಳ :ಕೊಂಡೆವೂರು: ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ನಾಳೆ ನಡೆಯಲಿದೆ.ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಯೋಗಾಶ್ರಮದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ದೀಪ ಬೆಳಗಿಸಿ ಉಧ್ಘಾಟಿಸಿ ಆಶೀರ್ವಚನ ನೀಡುವರು.ಈ ಸಂಧರ್ಭದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಏಷ್ಯಾನೆಟ್ ಸುವರ್ಣ ವಾಹಿನಿಯ ಸುದ್ದಿ ಸಂಪಾದಕ ಅಜಿತ್ ಹನುಮಕ್ಕ ನವರು ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಗಿಲ್ ಯುದ್ಧ ವೀರ ಹವಲ್ದಾರ್ ಜಾನಿ ಮಾಥು ರಾಜಪುರಂ ಉಪಸ್ಥಿತರಿರುವರು, ಬ್ರಿಗೇಡಿಯರ್ ಐ.ಎನ್.ರೈ ಕುಂಬಳೆ, ಕಮಾಂಡರ್…

Read More

ಮಂಗಳೂರು ನಗರದಲ್ಲಿ ಮತ್ತೆ ಫ್ಲೆಕ್ಸ್ ಹಾವಳಿ -ತ್ವರಿತ ಕಾರ್ಯಾಚರಣೆ ನಡೆಸಬೇಕೆಂದು ಸಾರ್ವಜನಿಕರ ಆಗ್ರಹ

ಮಂಗಳೂರು ನಗರದಲ್ಲಿ ಮತ್ತೆ ಫ್ಲೆಕ್ಸ್ ಹಾವಳಿ ಶುರುವಾಗುವ ಸಾಧ್ಯತೆ ಎದ್ದು ಕಾಣ್ತಾ ಇದೆ . ಈ ಮೂಲಕ ಹಳೆ ಚಾಳಿ ಮುಂದುವರೆದಿದೆ . ಮಹಾನಗರ ಪಾಲಿಕೆ ಇವುಗಳ ಮೇಲೆ ಕಣ್ಣಿಟ್ಟು ತ್ವರಿತ ಕಾರ್ಯಾಚರಣೆ ನಡೆಸಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಕೆಲವು ತಿಂಗಳ ಹಿಂದೆ ನಿರಂತರ ಕಾರ್ಯಾಚರಣೆ ಮೂಲಕ ಮಂಗಳೂರು ನಗರವನ್ನು ಪ್ಲೆಕ್ಸ್ ಮುಕ್ತಗೊಳಿಸುವಲ್ಲಿ ಪಾಲಿಕೆ ಯಶಸ್ವಿಯಾಗಿತ್ತು. ಆದರೆ ಮುಂಗಾರು ಆರಂಭದ ಬೆನ್ನಲೇ ಈ ಕಾರ್ಯಾಚರಣೆಯ ವೇಗ ಕುಗ್ಗಿತ್ತು ,ಇದೀಗ ಮತ್ತೆ ಕೆಲವು ಕಡೆಗಳಲ್ಲಿ ಪ್ಲೆಕ್ಸ್‌…

Read More

ಕೇರಳದಲ್ಲಿ ಪೂರ್ವಜರ ಆತ್ಮಮೋಕ್ಷಕ್ಕಾಗಿ ಅಚರಿಸುವ ಕರ್ಕಿಡಕ ವಾವು ಬಲಿ

ಉಡುಪಿ: ಕೇರಳದಲ್ಲಿ ಪೂರ್ವಜರ ಆತ್ಮಮೋಕ್ಷಕ್ಕಾಗಿ ಅಚರಿಸುವ ಕರ್ಕಿಡಕ ವಾವು ಬಲಿ(ಬಲಿ ತರ್ಪಣಂ) ವನ್ನು ಮೊದಲ ಬಾರಿಗೆ ಕೇರಳ ಸಮಾಜಂ ಉಡುಪಿ ಸಂಘಟನೆ ಮಲ್ಪೆ ಕಡಲ ತೀರದಲ್ಲಿ ಜುಲೈ 24 ರಂದು ಅಯೋಜಿಸಿತ್ತು. ಮಾಲಯಾಳಂ ಕ್ಯಾಲೆಂಡರ್ ಪ್ರಕಾರ ಜುಲೈ ಮತ್ತು ಅಗಸ್ಟ್ ತಿಂಗಳ ಮಧ್ಯದಲ್ಲಿ ಬರುವ ತಿಂಗಳನ್ನು ಕರ್ಕಿಡಕ ಮಾಸ ಎಂದು ಕರೆಯುತ್ತಾರೆ.ಈ ಸಂದರ್ಭದಲ್ಲಿ ಮೃತ ಪೂರ್ವಜರ ಅತ್ಮ ಶಾಂತಿ ,ಸದ್ಗತಿಗಾಗಿ ಬಲಿ ತರ್ಪಣಂ ಮಾಡುವುದು ಕೇರಳದ ಸಂಪ್ರದಾಯ. ಕೇರಳದ‌ ಪ್ರಮುಖ ಧಾರ್ಮಿಕ ಕ್ಷೇತ್ರ ಗಳಾದ ಆಲುವಾ ಶಿವ…

Read More

ಅಮೇರಿಕಾದಲ್ಲಿ ಹೊಸ ಇತಿಹಾಸ ಬರೆದ ಪುತ್ತೂರಿನ “ಪೂವರಿ” ತುಳು ಮಾಸಿಕ ಪತ್ರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವಿಕುಭ ಹೆಬ್ಬಾರಬೈಲು ಸಂಪಾದಕತ್ವದಲ್ಲಿ ಹೊರಡುತ್ತಿರುವ, ದಶಮಾನೋತ್ಸವ ಸಂಭ್ರಮದಲ್ಲಿರುವ “ಪೂವರಿ” ತುಳು ಮಾಸಿಕದ ಜೂನ್ ತಿಂಗಳ ವಿಶೇಷ ಸಂಚಿಕೆಯು ಅಖಿಲ ಅಮೇರಿಕಾ ತುಳು ಅಂಗಣ ಯೂ.ಎಸ್.ಎ.(ಆಟ) ನೇತೃತ್ವದ ‘ಆಟ ಸಿರಿ ಪರ್ಬ- 2025’ ಸಮಾರಂಭದಲ್ಲಿ ಲೋಕಾರ್ಪಣೆಗೊಂಡು ಅಮೇರಿಕಾದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ಜಗತ್ತಿನಲ್ಲಿ ಹರಡಿ ಕೊಂಡಿರುವ ಸುಮಾರು 2 ಕೋಟಿ ತುಳುವರ, ಸುಮಾರು 40 ಸಮುದಾಯದ ತುಳು ಮಾತೃ ಭಾಷೆಯಾಗಿರುವ ತುಳುನಾಡಿನ ಏಕೈಕ ತುಳು ಮಾಸಿಕ ‘ಪೂವರಿ’ ಪತ್ರಿಕೆ ಉತ್ತರ ಕೆರೋಲಿನಾ…

Read More

ಮೈ ತುಂಬಿ ಹರಿಯುವ ನೇತ್ರಾವತಿ

ಸುಮಾರು ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ‌ಮಳೆಗೆ ನೇತ್ರಾವತಿ ‌ನದಿ ತುಂಬಿ ಹರಿಯುತ್ತಿದ್ದು, ಇಂದು ನೇತ್ರಾವತಿ ನೀರಿನ ಮಟ್ಟ 6.9 ಮೀ. ಅಗಿದೆ. ಬೆಳಿಗ್ಗೆಯಿಂದ ಮಳೆಯ ಪ್ರಮಾಣ ತುಸು ಕಡಿಮೆಯಾದಂತೆ ಕಾಣುತ್ತಿದ್ದು,ರಾತ್ರಿಯಿಡಿ ಗಾಳಿ ಮಳೆ ಆಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಕೂಡ ಈವರೆಗೆ ನೇತ್ರಾವತಿ ನದಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿಲ್ಲ.ನೇತ್ರಾವತಿ ನದಿಗೆ ಅಲ್ಲಲ್ಲಿ ಆಡ್ಡವಾಗಿ ಚೆಕ್ ಡ್ಯಾಂಗಳು ,ಡ್ಯಾಂಗಳು ನಿರ್ಮಾಣಗೊಂಡ ಕಾರಣದಿಂದ ನೀರಿನ ಹರಿಯುವ ಪ್ರಮಾಣದಲ್ಲಿ ಏರುಪೇರಾಗುತ್ತದೆ. ಹಾಗಾಗಿ ನೆರೆಯ ಆತಂಕ ಇತ್ತೀಚಿನ ದಿನಗಳಲ್ಲಿ ‌ಕಡಿಮೆಯಾಗಿದೆ.

Read More
error: Content is protected !!