ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಖಂಡಿಸಿ ವಿಶ್ವ ಹಿಂದು ಪರಿಷತ್ ಮಂಗಳೂರು ಪ್ರತಿಭಟನೆ…. !
ಮಂಗಳೂರು:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ಮಾಡುವುದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ ಮಂಗಳೂರು ಗೋರಕ್ಷಾ ವಿಭಾಗ ವತಿಯಿಂದ ನಗರದ ಮಿನಿ ವಿಧಾನಸೌಧ ಎದುರು ಸೋಮವಾರ ಪ್ರತಿಭಟನೆ ನಡೆಯಿತು. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಈಗಿರುವ ಕಾನೂನು ಪ್ರಬಲವಾಗಿದ್ದು, ಅದನ್ನು ಯಥಾವತ್ತಾಗಿ ಜಾರಿಗೊಳಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕೇ ಹೊರತು ಯಾವುದೇ ಕಾರಣಕ್ಕೂ ಕಾಯ್ದೆಯನ್ನು ಸಡಿಲಗೊಳಿಸಬಾರದು. ಆದರೆ ರಾಜ್ಯ ಸರ್ಕಾರವು ಕಾನೂನು ಸಡಿಲಗೊಳಿಸಿ ಗೋ ಕಳ್ಳರಿಗೆ ಅನುಕೂಲ ಮಾಡಿಕೊಡಲು…