ಮಾತಾ ಅಮೃತಾನಂದಮಯಿ ಮಠ ಬೋಳೂರಿನಲ್ಲಿ ಜುಲೈ 27ರಂದು ಗುರುಪೂರ್ಣಿಮಾ ಉತ್ಸವ
ಅಮ್ಮ,ತಾನಂದಮಯಿ ಮಠದಲ್ಲಿ ಗುರುಪೂರ್ಣಿಮಾ ಉತ್ಸವ ಜುಲೈ 27ರಂದು ಮಾತಾ ಅಮೃತಾನಂದಮಯಿ ಮಠ ಬೋಳೂರು ಇಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುರೇಶ್ ಅಮೀನ್ ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುಪೂರ್ಣಿಮಾ ಆಚರಣೆಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಗುವುದು. ಅಂದು ಬೆಳಗೆ, 7.00 ಗಂಟೆಗೆ ಮಂಗಳೂರು ನಗರದ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಪ್ರಧಾನ ಅರ್ಚಕರಾದ ಬ್ರಹ್ಮಚಾರಿ ರತೀಶ್ ಮತ್ತು ಅರ್ಚಕ ವೃಂದದವರಿಂದ ಮಹಾಗಣಪತಿ ಹೋಮದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಗುರುಹೋಮ,…