‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉಧ್ಘಾಟನೆ: ಜು.26ರಂದು

ಮಂಗಳೂರು :ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉದ್ಘಾಟನಾ ಸಮಾರಂಭ ಜು.26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ತಿಳಿಸಿದರು . ಅವರು ಮಂಗಳೂರಿನ ಪಾಂಡೇಶ್ವರದಲ್ಲಿರುವ ರೆಡ್ ಕ್ರಾಸ್ ಪ್ರೇರಣ ಹಾಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, . ಕರ್ನಾಟಕದ…

Read More

ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕ ಜಯರಾಮ್ ಮಂಜೇಶ್ವರರವರ ಮುಡಿಗೇರಿದ ಸಂಗೀತ ಶಿರೋಮಣಿ ಪ್ರಶಸ್ತಿ

ಮಂಜೇಶ್ವರ : ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕ ಶ್ರೀ ಜಯರಾಮ್ ಮಂಜೇಶ್ವರರವರಿಗೆ ಕೆನಡಾದ ಇತಿಹಾಸ ಪ್ರಸಿದ್ಧ ವರಸಿತ್ತಿ ವಿನಯಾಗರ್ ಹಿಂದೂ ದೇವಸ್ಥಾನದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಂಗೀತ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಇವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು .ಮೂಲತಃ ಮಂಜೇಶ್ವರದವರಾದ ಇವರು ಕಳೆದ ಹಲವಾರು ವರ್ಷಗಳಿಂದ ಸ್ಯಾಕ್ಸೋಫೋನ್ ವಾದಕರಾಗಿ ಜನಪ್ರಿಯರಾಗಿದ್ದಾರೆ.

Read More

ಜೈ ತುಳುನಾಡು ಕಾಸರಗೋಡು ಘಟಕದಿಂದ ಮರೆಯದ ಆಟಿ ಕಾರ್ಯಕ್ರಮ 27 ರಂದು

ಮಂಜೇಶ್ವರ : ಜೈ ತುಳುನಾಡುವಿನ ಕಾಸರಗೋಡು ಘಟಕದ ಆಶ್ರಯದಲ್ಲಿ ಮರೆಯದ ಆಟಿ ಮತ್ತು ಭಾಷಣ ಮತ್ತು ಪಾರ್ದನ ಸ್ಪರ್ಧೆ ಜುಲೈ 27 ರಂದು ಭಾನುವಾರ ಕಾಸರಗೋಡು ಕರಂದಕ್ಕಾಡ್ ಬಿಲ್ಲವ ಸೇವಾ ಸಂಘದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಂಘ ಕಾಸರಗೋಡು ಇದರ ಅಧ್ಯಕ್ಷ ರಘು ಕೆ ಮೀಪುಗುರಿ ಉಧ್ಘಾಟಿಸಲಿದ್ದಾರೆ. ಬೆಳಗ್ಗೆ 10 30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜೈ ತುಳುನಾಡು ಕಾಸರಗೋಡು ಘಟಕದ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ವಿ ಕುಲಾಲ್ ಕಣ್ವತೀರ್ಥ ಅಧ್ಯಕ್ಷತೆ ವಹಿಸಲಿದ್ದಾರೆ.ಸಾಹಿತಿ ಮತ್ತು ಜೈ…

Read More

ಕೈಬೀಸಿ ಕರೆಯುವ ಬೇಕಲಕೋಟೆ…

ಕೇರಳ ರಾಜ್ಯದ ಸ್ವರ್ಣ ಕಿರೀಟದಂತೆ ,ಗಜರಾಜನಂತೆ, ಸಪ್ತ ಭಾಷೆಯ ಸಂಗಮ ನಾಡು ತುಳು, ಮಲಯಾಳಂ, ಕನ್ನಡ, ಮರಾಠಿ, ಬ್ಯಾರಿ ,ಕೊಂಕಣಿ, ಉರ್ದು ಭಾಷೆಗಳ ಪೊರೆಯುವ ತೊಟ್ಟಿಲು ಈ ಗೂಡು. ಚರಿತ್ರೆಯ ಪುಟಗಳನ್ನು ಒಮ್ಮೆ ಇಣುಕಿ ನೋಡಿದರೆ ಭವ್ಯವಾದ ಇಕ್ಕೇರಿ ನಾಯಕರು ಕಟ್ಟಿದ ಬೇಕಲ ಕೋಟೆ ಮತ್ತು ಅದರ ಅಕ್ಕಪಕ್ಕದ ನೆಲೆಗಳು ಪುಳಕಿಸುವಂತದ್ದು. ಸರ್ವ ಧರ್ಮದ ಶಾಂತಿಯ ತೋಟವಾಗಿರುವ, ದೈವಗಳ ಆರಾಧನೆಯ ಬೀಡಾಗಿರುವ ಕಾಸರಗೋಡು ದೇವಾಲಯಗಳಿಗೆ, ಮಂದಿರಗಳಿಗೆ, ಪಳ್ಳಿಗಳಿಗೆ ಹೆಸರುವಾಸಿ. ಉದಾಹರಣೆ ಮಧೂರು, ಅಡೂರು, ಅನಂತಪುರ , ಮಾಲಿಕ್…

Read More

ಗಡಿನಾಡ ಗುಡಿಯಲ್ಲಿ ಕನ್ನಡಮ್ಮನ ಉಸಿರಾಗಿರುವ ಶಾಲೆ

ಗಡಿನಾಡಿನಲ್ಲಿ ನಿರಂತರ ಕನ್ನಡ ಕಲರವಿಸಲು ಭಾಷಾ ಅಭಿಮಾನಿಗಳು, ಭಾಷೆಯ ಆಡುವವರು ಎಷ್ಟು ಮುಖ್ಯವೋ ಇವುಗಳಿಗೆ ನೀರರೆಯುವ ಸಾಹಿತ್ಯ , ಕನ್ನಡ ಭವನ, ಕನ್ನಡ ಶಾಲೆಗಳು ಅಷ್ಟೇ ಮುಖ್ಯ. ಒಂದು ಕಾಲದಲ್ಲಿ ನೂರಾರು ಶಾಲೆಗಳು ಅಸ್ತಿತ್ವದಲ್ಲಿದ್ದು ಅವುಗಳನ್ನೆಲ್ಲಾ ಸುವರ್ಣಾಕ್ಷರದಲ್ಲಿ ಬರೆಯುತ್ತಿದ್ದ ಕಾಲವದು. ಇಂದು ಆ ಸಂಖ್ಯೆಗಳು ಕುಗ್ಗುತ್ತಾ ಇದೆ, ಭಾಷಾ ಅಭಿಮಾನ ಇಲ್ಲಿನ ಅನ್ಯ ಭಾಷೆಯ ಮೇಲಿನ ವ್ಯಾಮೋಹದಿಂದ ಕಡಿಮೆ ಆಗ್ತಾ ಇದೆ. ಈ ವ್ಯಾಮೋಹದ ಜಾಲವು ಬಹುಶಃ ಗಡಿನಾಡು ಕೈ ತಪ್ಪಿದಾಗಿನಿಂದ ಆರಂಭವಾಗಿತ್ತೆಂಬುದು ಸ್ಪಷ್ಟ. ಗಡಿನಾಡ ಕನ್ನಡಿಗರ…

Read More

ಮಂಜೇಶ್ವರ ಸರಕಾರಿ ಆಸ್ಪತ್ರೆಯ ಶೋಚನೀಯಾವಸ್ತೆ .ಎಸ್ ಡಿ ಪಿ ಐ ಪ್ರತಿಭಟನೆ

ಮಂಜೇಶ್ವರ: ಮಂಜೇಶ್ವರ ಸಿ.ಎಚ್‌.ಸಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಔಷಧಿಗಳ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳು ಒದಗಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಮಂಜೇಶ್ವರ ಗ್ರಾಮಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಆಸ್ಪತ್ರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಸೂಕ್ತ ವೈದ್ಯರು ಹಾಗೂ ಔಷಧಿಗಳು ಲಭ್ಯವಿಲ್ಲದಿರುವುದು ಆರೋಗ್ಯದ ದೃಷ್ಟಿಯಿಂದ ಗಂಭೀರ ಸಮಸ್ಯೆ ಉಂಟಾಗುವುದಾಗಿ ಪ್ರತಿಭಟನಾ ನಿರತರು ಆರೋಪಿಸಿದರು. ಮಂಜೇಶ್ವರ ಉಪನೋಂದಣಿ ಕಚೇರಿ ಪರಿಸರದಿಂದ ಆರಂಭಗೊಂಡ ಮೆರವಣಿಗೆಯನ್ನು ಪೊಲೀಸರು ಆಸ್ಪತ್ರೆ…

Read More

ಜನಾರ್ದನ ಚೆಂಡ್ತಿಮಾರ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಂದಾಳು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಬಂಟ್ವಾಳ ಪುರಸಭೆ ಸದಸ್ಯ ಜನಾರ್ದನ ಚೆಂಡ್ತಿಮಾರ್ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಜನಾರ್ದನ ಚೆಂಡ್ತಿಮಾರ್ ಅವರ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಆಘಾತಕ್ಕೊಳಗಾಗಿದೆ. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ಜನಪರ, ಜೀವಪರ ಚಳವಳಿಗಳಲ್ಲಿ ಭಾಗಿಯಾಗುತ್ತಾ ಜನಸಾಮಾನ್ಯರ ಧ್ವನಿಯಾಗಿದ್ದರು. ರಾಜಕೀಯದ ಜೊತೆಗೆ ಸಾಮಾಜಿಕ ಸೇವೆಯೂ ಅನುಪಮವಾದುದು. ಭ್ರಷ್ಟಾಚಾರ ರಹಿತ ನಾಯಕರಾಗಿದ್ದ…

Read More

ದೇಶ ಕಂಡ ಕ್ರಾಂತಿಕಾರಿ ನಾಯಕ ಅಜಾತಶತ್ರು ಮಾಜಿ ಮುಖ್ಯಮಂತ್ರಿ ವಿ ಎಸ್ ಅಚ್ಚುತಾನಂದ್ ಇನ್ನು ನೆನಪು ಮಾತ್ರ

ದೇಶ ಕಂಡ ಅಪರೂಪದ ಮತ್ತು ವಿಶಿಷ್ಟ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ ವಿ ಎಸ್ ಎಂದೇ ಖ್ಯಾತರಾದ ವೇಲಿಕ್ಕತ್ತು ಶೇಖರನ್ ಅಚ್ಚುತಾನಂದನ್.1923 ಒಕ್ಟೋಬರ್ 20 ಅಲಪ್ಪುಳ ಜಿಲ್ಲೆಯ ಪುನ್ನಪ್ಪುರದ ಶಂಕರನ್ ಮತ್ತು ಅಕ್ಕಮ್ಮ ದಂಪತಿಗಳ ಪುತ್ರನಾಗಿ ಜನಿಸಿ ,ಕೃಷಿಕರ ಮತ್ತು ಶೋಷಿತ ವರ್ಗದ ಜನರ ಧ್ವನಿಯಾಗಿ ಜನಾನುರಾಗಿ ದೇಶದಲ್ಲೇ ಅತಿ ಹಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು.ತನ್ನ ನಾಲ್ಕನೇ ವಯಸ್ಸಿನಲ್ಲಿ ತಾಯಿಯನ್ನು ಏಳನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು ಸಹೋದರನಾದ ಗಂಗಾಧರನ್ ನವರ ಟೈಲರಿಂಗ್ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡರು.ತಂದೆ ತಾಯಿಯನ್ನು ಕಳೆದುಕೊಂಡು…

Read More

ಮಂಗಳೂರು : ಮಣ್ಣಗುಡ್ಡೆ ಅಂಗನವಾಡಿ ಕೇಂದ್ರದ ಕೊಠಡಿಯ ನಿರ್ಮಾಣಕ್ಕೆಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸತತ ಪ್ರಯತ್ನದ ಫಲವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ 20 ಲಕ್ಷ ರೂ ವಿಶೇಷ ಅನುದಾನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಗಾಂಧಿನಗರ ಹಾಗೂ ಕಸಬಾ ಬೆಂಗ್ರೆಯಲ್ಲಿ ಎರಡು ಅಂಗನವಾಡಿ ಕೊಠಡಿಗಳಿಗೆ ಮಂಜೂರಾತಿ ದೊರೆತಿದೆ. ಶೀಘ್ರದಲ್ಲಿಯೇ ಕಸಬಾ ಬೆಂಗ್ರೆಯಲ್ಲೂ ಶಿಲನ್ಯಾಸ…

Read More

ಕಾಸರಗೋಡಿನ ಶಾಸನಗಳು

ಕೇರಳ ರಾಜ್ಯದಲ್ಲಿಯೇ ಅಧಿಕ ಸಂಖ್ಯೆಯಲ್ಲಿ ಶಾಸನಗಳು ಕಂಡುಬರುವ ಜಿಲ್ಲೆಯೆಂದರೆ ಅದು ಕಾಸರಗೋಡು. ಪ್ರಾಚೀನ ಕಾಲದಲ್ಲಿ ತುಳುನಾಡಿನ ನಾಡಿ ಮಿಡಿತವಾಗಿದ್ದ ಕಾಸರಗೋಡಿನಲ್ಲಿ 20 ಶಾಸನಗಳನ್ನು ಪ್ರಸ್ತುತ ನೋಡಬಹುದು. ಅದರಲ್ಲೂ ಚಂದ್ರಗಿರಿ ನದಿಯ ಉತ್ತರದಲ್ಲಿ ಈ ಶಾಸನಗಳ ಸಂಖ್ಯೆಯು ಅತಿ ಹೆಚ್ಚಾಗಿ ಕಾಣಸಿಗುತ್ತದೆ. ಕಾಸರಗೋಡಿನ ಭಾಗದಲ್ಲಿ ಕಾಣಸಿಗುವಂತಹ ಶಾಸನಗಳಲ್ಲಿ 90% ಕ್ಕೂ ಹೆಚ್ಚಿನ ಶಾಸನಗಳು ದಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡುವ ದಾನಶಾಸನವಾಗಿದೆ. ಇದರಲ್ಲಿ ಭೂದಾನಕ್ಕೆ ಸಂಬಂಧಿಸಿದ ಮಾಹಿತಿಗಳು ಹೆಚ್ಚಾಗಿ ಅಡಕವಾಗಿದೆ. ಕಾಸರಗೋಡು ಈ ಭಾಗದಲ್ಲಿ ಮೂಲ ಚರಿತ್ರೆಗಳು ಪ್ರವಾಸಿಗರ ದಾಖಲೆಗಳಲ್ಲಿ…

Read More
error: Content is protected !!