ಬಂಗ್ರಮಂಜೇಶ್ವರದಲ್ಲಿ ‘ವಿಶ್ವ ರೂಪಂ’ ಯುವಜನೋತ್ಸವದ ಮಹಾಸಮಾರೋಪ

ಬಂಗ್ರಮಂಜೇಶ್ವರ: ಇಲ್ಲಿನ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದ ಆಶ್ರಯದಲ್ಲಿ, ಓಜ ಸಾಹಿತ್ಯ ಕೂಟದ ನೇತೃತ್ವದಲ್ಲಿ ಕಳೆದ 12 ವಾರಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಹಬ್ಬ “ವಿಶ್ವ ರೂಪಂ’ ಯುವಜನ ಓಜಸ್ವರೂಪಂ – ಸೀಸನ್ 2.0 (2025-26) ರ ಸಂಭ್ರಮದ ಸಮಾರೋಪ ಸಮಾರಂಭವು ಇದೇ ಬರುವ ಫೆಬ್ರವರಿ 1, 2026ರಂದು ಜರುಗಲಿದೆ. ಈ ಭವ್ಯ ಸಮಾರೋಪ ಸಮಾರಂಭವು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನದೊಂದಿಗೆ ಸಂಪನ್ನಗೊಳ್ಳಲಿದೆ….

Read More

ನರೇಗಾ ಮರುಸ್ಥಾಪನೆಗೆ ಒತ್ತಾಯ: ಕೊಳ್ನಾಡು ಗ್ರಾಮ ಪಂಚಾಯತ್ ಸಾಮನ್ಯ ಸಭೆಯಲ್ಲಿ ಬಹುಮತದ ತೀರ್ಮಾನ

ಕೊಳ್ನಾಡು ಗ್ರಾಮ ಪಂಚಾಯತ್ ಸಾಮನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್ ಕೆ. ಸಾಲೆತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷರಾದ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ಉಪಸ್ಥಿತರಿದ್ದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಹೆಸರನ್ನು ಬದಲಾಯಿಸಿ ‘ವಿಕಸಿತ ಭಾರತ ಉದ್ಯೋಗ ಖಾತರಿ ಅಜೀವಿಕ ಅಭಿಯಾನ’ ಎಂದು ಮರುನಾಮಕರಣ ಮಾಡಿರುವ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ಸಭೆಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ ಹಿರಿಯ ಸದಸ್ಯರಾದ…

Read More

ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ವಾದಿರಾಜ ಜಯಂತಿ ಆಚರಣೆ

ಮಂಗಳೂರು:ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ವಾದಿರಾಜ ಜಯಂತಿ ಕಾರ್ಯಕ್ರಮ ಶುಕ್ರವಾರ ಸಂಜೆ ಪ್ರತಿಷ್ಠಾನದ ಹಾಲ್ ನಲ್ಲಿ ಜರುಗಿತು.ಕಾರ್ಯಕ್ರಮವನ್ನು ವಾದಿರಾಜರಿಗೆ ದೀಪಾರ್ಚನೆಗೈದು ಕೀರ್ತನೆಯನ್ನು ಹಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ನಿತ್ಯಾನಂದ ಕಾರಂತ್ ಅವರು, “ವಾದಿರಾಜರ ಸ್ಮರಣೆಯನ್ನು ಇಂದಿನ ಪೀಳಿಗೆಯ ಮಕ್ಕಳಿಗೂ ತಲುಪಿಸುವಲ್ಲಿ ಇಂತಹ ಕಾರ್ಯಕ್ರಮ ಶ್ಲಾಘನೀಯ. ಪ್ರದೀಪ್ ಕುಮಾರ್ ಕಲ್ಕೂರ ಅವರು ಈ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ವಾದಿರಾಜರ ಕೀರ್ತನೆಗಳು ಜನರನ್ನು ಇಂದಿಗೂ ಮುಂದಿಗೂ ತಲುಪಲಿ” ಎಂದರು. ವೇದಿಕೆಯಲ್ಲಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ,…

Read More

“ಕೊರಗಜ್ಜ” ಚಿತ್ರದ ಪ್ರಮೋಷನ್ ಗೆ ನಟ ಮಮುಟ್ಟಿಯಿಂದ ಬ್ರೇಕ್?ಕಬೀರ್ ಬೇಡಿಗೆ ಅವಮಾನ!!

ಮಂಗಳೂರು: ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಪ್ಯಾನ್ ಇಂಡಿಯಾ ಫಿಲ್ಮ್ “ಕೊರಗಜ್ಜ” ಚಿತ್ರತಂಡ ಪ್ರಮೋಷನ್ ಸಲುವಾಗಿ ಕೊಚ್ಚಿಯ “ಹಾಲಿಡೇ ಇನ್” ಪಂಚತಾರ ಹೊಟೆಲ್ ನ ‘ಗ್ರ್ಯಾಂಡ್ ಬಾಲ್ ರೂಮಿ’ನಲ್ಲಿ ಇತ್ತೀಚೆಗೆ ಅದ್ದೂರಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಸುಮಾರು ಒಂದು ವಾರಗಳ ಮೊದಲೇ ಕೊಚ್ಚಿಯ ಪಿ ಆರ್ ಒ ಮುಖಾಂತರ ಎಲ್ಲಾ ಮಾಧ್ಯಮಗಳಿಗೆ ಪತ್ರಿಕಾ ಗೋಷ್ಟಿಯ ಆಮಂತ್ರಣ ಕೂಡಾ ರವಾನೆಯಾಗಿತ್ತು. ಆದರೆ ಪ್ರೆಸ್ ಮೀಟ್ ನ ಮುಂಚಿನ ದಿನ ತಡರಾತ್ರಿ ಚಿತ್ರತಂಡಕ್ಕೆ ಪಿಆರ್ ಒ ಕರೆ ಮಾಡಿ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಅಥವಾ…

Read More

ಕಾಸರಗೋಡು ಆಡಳಿತ ಕೇಂದ್ರಗಳಿಗೆ ಬಾಂಬ್ ಬೆದರಿಕೆ: ತನಿಖೆ ತೀವ್ರ

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಸಂಜೆ ಬಂದ ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ಪೊಲೀಸ್‌, ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ಸ್ಕ್ವಾಡ್ ತಂಡಗಳು ಸಿವಿಲ್ ಸ್ಟೇಷನ್‌ನಲ್ಲಿ ವ್ಯಾಪಕ ತಪಾಸಣೆ ನಡೆಸಿದವು. ಪರಿಶೀಲನೆಯಲ್ಲಿ ಬಾಂಬ್‌ಗೆ ಸಂಬಂಧಿಸಿದ ಯಾವುದೇ ಸುಳಿವುಗಳು ಪತ್ತೆಯಾಗದಿದ್ದರೂ, ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಎಚ್ಚರಿಕೆಯಿಂದ ಮುಂದುವರಿದಿದ್ದಾರೆ. ಉಕ್ರೇನ್‌ನಿಂದ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಸಂದೇಶದ ಮೂಲವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಇತ್ತೀಚೆಗೆ ಕಾಸರಗೋಡು ನ್ಯಾಯಾಲಯ ಸಂಕೀರ್ಣಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ…

Read More

ಅನಂತಪುರ ಕೈಗಾರಿಕಾ ಪ್ರದೇಶದ ಪ್ರೈವುಡ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ

ಮಂಜೇಶ್ವರ: ಅನಂತಪುರ ಕೈಗಾರಿಕಾ ಪ್ರದೇಶದಲ್ಲಿರುವ ಮಾರ್ಕ್ ವುಡ್ ಪ್ರೈವುಡ್ ಕಾರ್ಖಾನೆಯಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪೇರಾಲ್ ಕಣ್ಣೂರಿನ ಅಬ್ದುಲ್ ರಹಿಮಾನ್ ಅವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಬೆಳಗಿನ ಜಾವ ಸುಮಾರು ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ಮುನ್ನ ನಿನ್ನೆ ರಾತ್ರಿ ಸುಮಾರು 12 ಗಂಟೆಯವರೆಗೆ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಿ ಬಳಿಕ ಮನೆಗೆ ತೆರಳಿದ್ದರು. ಬೆಂಕಿಯ ತೀವ್ರತೆ ಹೆಚ್ಚಿದ ಹಿನ್ನೆಲೆ ಕಾಸರಗೋಡು, ಉಪ್ಪಳ, ಕಾಞಂಗಾಡು ಸೇರಿದಂತೆ ವಿವಿಧ ಕಡೆಗಳಿಂದ ಎಂಟು…

Read More

ಮಂಜೇಶ್ವರ: ವಸತಿಗೃಹ ದಾಳಿ–ಬೆದರಿಕೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸ್ ವಶ

ಮಂಜೇಶ್ವರ: ವಸತಿಗೃಹಕ್ಕೆ ಅತಿಕ್ರಮಿಸಿ ನುಗ್ಗಿ ಯುವಕ ಹಾಗೂ ಗೆಳತಿಯ ಅರೆನಗ್ನ ವೀಡಿಯೋ–ಫೋಟೋ ಚಿತ್ರೀಕರಿಸಿ ಬೆದರಿಸಿ ಹಣ ಮತ್ತು ಮೊಬೈಲ್ ಅಪಹರಿಸಿದ ಪ್ರಕರಣದಲ್ಲಿ ಮತ್ತೊಬ್ಬನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಡಾಜೆ ಕಾಜೂರ್ ಮಾಲಿ ನಿವಾಸಿ ಟಿ.ಕೆ. ಮೊಹಮ್ಮದ್ ಫೈಸಲ್ (42) ಬಂಧಿತ ಆರೋಪಿ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಮಂಜೇಶ್ವರ ಪಿರಾರಮೂಲೆ ನಿವಾಸಿ ಕೆ.ಎ. ಹಾರಿಸ್ (40) ಬಂಧಿತನಾಗಿದ್ದ. ಜನವರಿ 14ರಂದು ನಡೆದ ಘಟನೆಯಲ್ಲಿ ನಾಲ್ಕು ಮಂದಿಯ ತಂಡ…

Read More

ಮಂಜೇಶ್ವರ: ಕಾರು–ಬೈಕ್ ಡಿಕ್ಕಿ; ಇಬ್ಬರು ಯುವಕರು ಗಂಭೀರ ಗಾಯ

ಮಂಜೇಶ್ವರ : ಕಾರು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಬೈಕ್ ಸವಾರ ಬೇಳ ಪೆರಿಯಡ್ಕ ನಿವಾಸಿ ಶಶಿಕುಮಾರ್ (24) ಹಾಗೂ ಕಿಣ್ಣಂಗಾರಿನ ಕಿರಣ್ ರಾಜ್ (27) ಎಂಬಿವರನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಬಳೆ ಕೃಷ್ಣ ಭವಣ್ ಹೋಟೆಲಿನ ಸಮೀಪದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಸಂಚರಿಸುತ್ತಿದ್ದ ಬೈಕ್ ಗೆ ಎದುರಿನಿಂದ ಆಗಮಿಸಿದ ಕಾರು ಡಿಕ್ಕಿ ಹೊಡೆದಿದೆ.ರಸ್ತೆಗೆಸೆಯಲ್ಪಟ್ಟ ಇಬ್ಬರ ತಲೆಗೂ ಗಂಭೀರ ಗಾಯ ಉಂಟಾಗಿದೆ.

Read More

ಕನ್ನಡ ಗ್ರಾಮದಲ್ಲಿ ಕಾಸರಗೋಡು ಗೋ-ಕುಟೀರದ ನಿರ್ಮಾಣಕ್ಕೆ ಚಾಲನೆ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕರಾದ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯನ್ನು ಗೋ-ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಮಹತ್ವದ ಧಾರ್ಮಿಕ ಕಾರ್ಯಕ್ಕೆ ಚಾಲನೆ ನೀಡಲಾಯಿತು. 2025ರ ನವೆಂಬರ್ 4ರಂದು ಕಾಸರಗೋಡು ಕನ್ನಡ ಗ್ರಾಮದ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ **“ಕಾಸರಗೋಡು ಗೋ-ಕುಟೀರ”**ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭೂಮಿ ಪೂಜೆ ನೆರವೇರಿಸಿ, ಗೋ-ಕುಟೀರ…

Read More

ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು.ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಜನತೆಯ ಆಹಾರ ಅಭಿರುಚಿಯು ಬಹಳ ವಿಶಿಷ್ಟವಾಗಿದೆ. ತಿಂಡಿ ತಿನಿಸುಗಳ ಬಗ್ಗೆ ಇಲ್ಲಿನ ಜನರ ಪ್ರೀತಿಯು ಆಹಾರ ಸಂಸ್ಕೃತಿಯನ್ನು ಎತ್ತರಕ್ಕೆ ಕೊಂಡೊಯ್ದಿದೆ. ವೈವಿಧ್ಯಮಯ ಖಾದ್ಯಗಳಿಗೆ ಕರಾವಳಿಯು ಹೆಸರುವಾಸಿಯಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ದರ್ಶನ್ ಎಚ್…

Read More
error: Content is protected !!