ಮಧೂರು ಶ್ರೀ ಕ್ಷೇತ್ರ ವಿಶೇಷ

ತುಳುನಾಡ ನೆಲೆಯಲ್ಲಿ ನೆಲೆಯಾಗಿರುವ , ಸಪ್ತ ಭಾಷಾ ಸಂಗಮ ಭುವಿಯಲ್ಲಿ ಸಿಂಗರಿಸುವ , ಮದರಿಗೆ ಒಲಿದು ಎಲ್ಲರ ಸತ್ಕರಿಸುವ , ಮಧುವಾಹಿನಿ ದಿವ್ಯ ತಟದಿ ವಿರಾಜಮಾನವಾಗಿರುವ , ಭವ್ಯ ವಾಸ್ತು ಶೈಲಿಯಲ್ಲಿ ದಿವ್ಯತೆಯ ಅನುಭೂತಿಯಿಂದ ಪಸರಿಸುವ , ಕುಂಬಳೆ ಅರಸರ ಆಡಳಿತ ಕಾಲದಿ ಜೀರ್ಣೋದ್ಧಾರಗೊಂಡಿರುವ , ಮುದದಿಂದ ಒಲಿಯುವ ಮದವೂರ ವಿಘ್ನೇಶನು ನೆಲೆಸಿರುವ , ಕಾರ್ಣಿಕದ ಪರಮೇಶ್ವರನು ಪಾಪವ ಕಳೆಯುತ್ತಿರುವ, ಭಕ್ತರ ನೆಚ್ಚಿನ ತಾಣ, ಸಾಹಿತ್ಯ ತಿರುಳಲ್ಲಿದೆ ಕ್ಷೇತ್ರ ಪುರಾಣ , ಜಯಸಿಂಹನ ಇತಿಹಾಸ ಭವ್ಯ ಕಿರಣ…

Read More

ನಟನೆಯ ಬದುಕೇಕೆ……..!?

ಮೂಗರನ್ನು ಪ್ರೀತಿಸಬಹುದು ಆದರೆ ಮೂಗರ ತರ ನಟನೆ ಮಾಡುವವರನ್ನು ಪ್ರೀತಿಸಿದರೆ ವ್ಯರ್ಥ, ಅಂಧರನ್ನು ಪ್ರೀತಿಸ ಬಹುದು ಆದ್ರೆ ಅಂಧಕಾರದಲ್ಲಿ ತೇಲಾಡುವವರು ಮೋಹಿಸಿದರೆ ಕಷ್ಟ, ಕಿವುಡರನ್ನು ಸ್ನೇಹಿಸಬಹುದು ಆದರೆ ನಾವಾಡುವ ಮಾತಿಗೆ ಕಿವಿಯಾಗದವರನ್ನು ಇಷ್ಟಪಟ್ಟು ಫಲ ಇಲ್ಲ. ಹೌದು ಸ್ನೇಹಿತರೆ ನಾವು ಒಬ್ಬರನ್ನು ಇಷ್ಟಪಡಲು ಶುರು ಮಾಡುತ್ತೇವೆ . ಅವರ ಜೊತೆ ಬಾಳಿನಲ್ಲಿ ಹೆಜ್ಜೆ ಹಾಕಬೇಕೆಂಬ ಕನಸು ಕಾಣ್ತಾ ಇರ್ತೇವೆ . ಆದರೆ ನಮ್ಮ ಕನಸುಗಳು ಕನಸಾಗಿ ಉಳಿಯುವ ಕಾಲ ದೂರವೇನು ಉಳಿದಿರುವುದಿಲ್ಲ. ಎಷ್ಟೇ ಕಷ್ಟ ಬಂದರೂ ಸ್ನೇಹವನ್ನು…

Read More

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – ₹5 ಲಕ್ಷ ಅನುದಾನ ಮಂಜೂರು

ಮಂಗಳೂರು : ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ.ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಈ ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಶ್ರೀ ಬೃಜೇಶ್…

Read More

ಭಾರೀ ಮಳೆಯಿಂದಾಗಿ ವರ್ಕಾಡಿಯ ವಿವಿದೆಡೆ ವ್ಯಾಪಕ ನಾಶನಷ್ಟ:ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಿವಿದೆಡೆ ಬೇಟಿ :

ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ವಿಧಾನಸಭಾ ಕ್ಷೇತ್ರದ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ವರ್ಕಾಡಿ ಬೊಡೋಡಿ, ಮತ್ತು ಪೊಯ್ಯತ್ ಬಯಲು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದೆ. ಅಲ್ಲದೆ, ತಿಮ್ಮಂಗನೂರು ಅಣೆ-ನಡಿಬಯಲು ರಸ್ತೆಯಲ್ಲಿ ಭೂಕುಸಿತದಿಂದಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್., ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ವೋರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯ, ಹಿರಿಯ ಮುಖಂಡ ಧೂಮಪ್ಪ ಶೆಟ್ಟಿ, ಹಾಗೂ…

Read More

ಅನಾಹುತಕ್ಕೆ ಆಹ್ವಾನಿಸುತ್ತಿರುವ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ ಪಾತ್

ಮಂಗಳೂರು : ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು ಪಾದಚಾರಿಗಳ ಅನಾಹುತಕ್ಕೆ ಆಸ್ಪದವನ್ನು ನೀಡುವಂತಿದೆ. ದಿನವೂ ಕಿಕ್ಕಿರಿದು ನೆರೆದು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ. ಮಾತ್ರವಲ್ಲದೆ ಈ ಮೊದಲೇ ಅಲ್ಲಿ ಇದ್ದ ಡ್ರೈನೇಜ್ ಗುಂಡಿಯು ಬಾಯಿ ತೆರೆದಿದ್ದು ಅಪಾಯವನ್ನು ಹೆಚ್ಚಿಸುತ್ತಿದೆ . ಸ್ಥಳೀಯರು ಹೇಳುವಂತೆ ಈ ಗುಂಡಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಿದ್ದ ಘಟನೆ ಕೆಲವೇ ದಿನಗಳ ಹಿಂದೆ ನಡೆದಿದೆ. ಅಪಾಯ ಕಣ್ಣೆದುರಿಗೇ ಇದ್ದರೂ ಅಧಿಕಾರಿಗಳು ಯಾವುದೇ ಕ್ರಮವನ್ನು…

Read More

ವರ್ಕಾಡಿ ಕಜೆ ಪ್ರದೇಶದಲ್ಲಿ ಭೀಕರ ಭೂಕುಸಿತ .ಅಪಾಯದ ಅಂಚಿನಲ್ಲಿ ಸ್ಥಳೀಯರು

ಮಂಜೇಶ್ವರ: ಮಂಜೇಶ್ವರದ ವರ್ಕಾಡಿ ಕಜೆ ಪ್ರದೇಶದಲ್ಲಿ ಭೂಮಿ ಕುಸಿದು ಅಪಾಯದ ಸ್ಥಿತಿ ಉಂಟಾಗಿದ್ದು, ಸುತ್ತಮುತ್ತಲಿನ ನಿವಾಸಿಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಭೂಕುಸಿತದ ಪರಿಣಾಮವಾಗಿ ಸುಮಾರು 10 ಮೀಟರ್ ಆಳದ ಎರಡು ದೊಡ್ಡ ಗುಂಡಿಗಳು ಸೃಷ್ಟಿಯಾಗಿದೆ. ಈ ಪ್ರದೇಶದಲ್ಲಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಭೂಮಿ ಕುಸಿದಿದ್ದು, ಆ ಭಾಗದ ನೆಲ ಬಿರುಕು ಬಿಟ್ಟಿದೆ. ಈ ಕಾರಣದಿಂದಾಗಿ ಸ್ಥಳೀಯ ನಿವಾಸಿಗಳಾದ ಅವ್ವಮ್ಮ, ಅಸಿಯಮ್ಮ, ಅಹ್ಮದ್ ಕುಞಿ ಮೊಂಟಾದವರನ್ನು ಸ್ಥಳೀಯರ ಸಹಾಯದಿಂದ ಮೊದಲೇ…

Read More

ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷಚೇತನರ ಸಮಸ್ಯೆ ಪರಿಹಾರಕ್ಕೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ!

ಕುಂದಾಪುರ: ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ವಿಶೇಷಚೇತನರ ಪ್ರಮಾಣಪತ್ರ ಮಾಡಿಸಲು ಕುಂದಾಪುರ ಮತ್ತು ಬೈಂದೂರಿನ ಬೇರೆ ಬೇರೆ ಕಡೆಗಳಿಂದ ಬಂದಿದ್ದ ವಿಶೇಷಚೇತನರು ಪ್ರಮುಖ ಶಸ್ತ್ರಚಿಕಿತ್ಸಕ ವೈದ್ಯರು ಲಭ್ಯವಾಗದ ಕಾರಣ ಪ್ರಮಾಣಪತ್ರ ಸಿಗದೆ ನಿರಾಶರಾಗಿ ವಾಪಸ್ ಆದ ಘಟನೆ ಇತ್ತೀಚಿಗೆ ನಡೆದಿದ್ದು ಕೂಡಲೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ವೈದ್ಯರನ್ನು ನೇಮಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರಮುಖೇನ ಒತ್ತಾಯಿಸಿದ್ದಾರೆ….

Read More

ಪೊಲೀಸರ ಮಿಂಚಿನ ಕಾರ್ಯಕ್ಕೆ ತಗಲು ಹಾಕಿಕೊಂಡ ಮಾಸ್ಟರ್ ಮೈಂಡ್ ರೋಹನ್ ಸಾಲ್ಡಾನ ಬಂಧನ

ಮಂಗಳೂರು: ಸಾಲ ಕೊಡುವ ಆಮಿಷವೊಡ್ಡಿ ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳಿಂದ 200 ಕೋಟಿಗೂ ಅಧಿಕ ಹಣವನ್ನು ವಂಚಿಸಿದ ಆರೋಪಿ ರೋಹನ್ ಸಲ್ಡಾನಾ (45) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ತನ್ನ ಐಷಾರಾಮಿ ಬಂಗಲೆಯಲ್ಲಿ ವಿದೇಶಿ ಯುವತಿಯರೊಂದಿಗೆ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಬಂಗಲೆಯಲ್ಲಿ ಗುಪ್ತ ಕೊಠಡಿ (ಹೈಡ್ ಔಟ್ ರೂಮ್) ಇರುವುದು ಕೂಡ ಪತ್ತೆಯಾಗಿದೆ. ರೋಹನ್ ಸಲ್ಡಾನಾ ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು, ಭೂ ವ್ಯವಹಾರ ಮತ್ತು ಉದ್ಯಮದಲ್ಲಿ…

Read More

ಕೇರಳ ಸ್ಥಳೀಯಾಡಳಿತ ಚುನಾವಣಾ ಸನ್ನಿಹಿತ : ಎಡರಂಗ ಸರಕಾರಕ್ಕೆ ಸವಾಲುಗಳ ಸರಮಾಲೆ

ತಿರುವನಂತಪುರಂ : ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯ ದಿಕ್ಸೂಚಿಯೆಂದೇ ವ್ಯಾಖ್ಯಾನಿಸಲಾಗುವ ತ್ರಿಸ್ತರ ಪಂಚಾಯತ್ ನ ಸ್ಥಳೀಯಾಡಳಿತ ಚುನಾವಣೆಗಳು ಬಹುತೇಕ ಸೆಪ್ಟೆಂಬರ್ ಒಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ. ಇದಕ್ಕೆ ಬೇಕಾಗಿ ಚುನಾವಣಾ ಆಯೋಗವು ವಾರ್ಡ್ ವಿಭಜನೆ ಹಾಗೂ ಇನ್ನಿತರ ಕಾರ್ಯಗಳಲ್ಲಿ ಮಗ್ನವಾಗಿದೆ. 2026 ರ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮೂರನೇ ಬಾರಿಗೆ ಅಧಿಕಾರ ಪಡೆಯುವ ಹುಮ್ಮಸ್ಸಿನಲ್ಲಿರುವ ಎಡರಂಗ ಸರಕಾರಕ್ಕೆ ಸ್ಥಳೀಯಾಡಳಿತ ಚುನಾವಣೆಯ ಸಮಯ ಸನ್ನಿಹಿತವಾಗುವ ಸಮಯದಲ್ಲೇ ಒಂದೊಂದೇ ಸವಾಲುಗಳು ಎದುರಾಗುತ್ತಿದೆ. ಇದು ಆಡಳಿತ ಪಕ್ಷದ…

Read More

ಕುಟ್ಟಿ ತೆಯ್ಯಂ-ಆದಿ ಮತ್ತು ವೇಡನ್ ತೆಯ್ಯಂ

ಆಟಿ ಮಾಸವನ್ನು ‘ಕರ್ಕಟಕ’ ಮಾಸವೆಂದು ಕರೆಯುತ್ತಾರೆ. ಈ ಅವಧಿಯಲ್ಲಿ ಉತ್ತರ ಮಲಬಾರ್ ಭಾಗದಲ್ಲಿ ಅದರಲ್ಲೂ ಪ್ರಮುಖವಾಗಿ ಕಾಸರಗೋಡು ಮತ್ತು ಕಣ್ಣೂರ್ ಈ ಭಾಗದಲ್ಲಿ ದೈವಾರಾಧನೆಗಳು ದೇವಾಲಯಗಳಲ್ಲಿ ನಡೆಯುವುದು ಬಹುತೇಕ ವಿರಳವಾಗಿರುತ್ತದೆ. ಶೂನ್ಯ ಮಾಸದಲ್ಲಿ ಕೋಲಗಳನ್ನು ಕಟ್ಟಿ ಆಡಿಸುವ ಸಂಪ್ರದಾಯ ತುಂಬಾ ಕಡಿಮೆ. ಕಲಶ ಮಹೋತ್ಸವದ ಬಳಿಕ ಯಾವುದೇ ಕಳಿಯಾಟಗಳು, ದೈವಕಟ್ಟುಗಳು ನಡೆಯುವುದಿಲ್ಲ ಮುಂದಿನ ತುಲಾ ಹತ್ತು ಬರುವ ತನಕ. ಆದರೆ ಈ ನಡುವೆಯೂ ಕೂಡ ಒಂದು ವೈಶಿಷ್ಟವಾದ ದೈವರಾಧನೆಗಳು ನಡೆಯುತ್ತದೆ. ಆದರೆ ಇದು ವಯಸ್ಕರ ಕಟ್ಟಿ ಆಡುವ…

Read More
error: Content is protected !!