ಸುಬ್ರಹ್ಮಣ್ಯ ದೇವಾಲಯದ ಧನ ವ್ಯಕ್ತಿಗತ ಪ್ರಚಾರಕ್ಕಾಗಿ ಬಳಕೆ ಮಾಡಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ಖಂಡನೆ….. !
ಮಂಗಳೂರು : ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ದಿನಾಂಕ 25ರಂದು ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಚಂಪಾ ಷಷ್ಟಿ ಕಾರ್ಯಕ್ರಮದ ಜಾಹೀರಾತನ್ನು ದಿನಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ, ಅದರಲ್ಲಿ ದೇವತಾ ಕಾರ್ಯಕ್ಕಿಂತ ವ್ಯಕ್ತಿಗತ ಪ್ರಚಾರಕ್ಕೆ ಹೆಚ್ಚು ಮಹತ್ವ ಕೊಡಲಾಗಿದೆ, ರಾಜಕೀಯ ನಾಯಕರ ಮತ್ತು ಇತರರ ಭಾವಚಿತ್ರ ಗಳೊಂದಿಗೆ ಜಾಹೀರಾತು ಪ್ರಕಟವಾಗಿದೆ. ದೇವಸ್ಥಾನದ ಅಥವಾ ಧಾರ್ಮಿಕ ದತ್ತಿ ಇಲಾಖೆಯ ಹಣ ಈ ರೀತಿ ದುರುಪಯೋಗ ಪಡಿಸುವುದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ ಎಂದು…