ಮನ್ರೇಗಾ ರದ್ದು ವಿರುದ್ಧ ಸುಪ್ರೀಂ ಕೋರ್ಟ್ ಮೊರೆ: ರಾಜ್ಯ ಸಚಿವ ಸಂಪುಟ ತೀರ್ಮಾನ
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್ಆರ್ಇಜಿಎ) ರದ್ದುಪಡಿಸಿ ಜಾರಿಗೆ ತಂದಿರುವ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಕೇಂದ್ರ ಸರ್ಕಾರ ಮನ್ರೇಗಾಗೆ ಬದಲಾಗಿ VB-G RAM-G ಕಾಯ್ದೆ ಜಾರಿಗೊಳಿಸಿರುವುದಕ್ಕೆ ರಾಜ್ಯ ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿ, ಎಂಎನ್ಆರ್ಇಜಿಎ ಪುನರ್ ಸ್ಥಾಪನೆಗೆ ಆಗ್ರಹಿಸಿತ್ತು. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು…
