ಪ್ರಧಾನಿ ಮೋದಿ ಅವರು ನವೆಂಬರ್​​ 28 ರಂದು ಕೃಷ್ಣ ನಗರಿ ಭೇಟಿ …. ! ಸಿದ್ಧತೆ ಹೇಗಿದೆ ..?

ಉಡುಪಿ: ಪ್ರಧಾನಿ ಮೋದಿ ಅವರು ಇದೇ ನವೆಂಬರ್​​ 28 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಐತಿಹಾಸಿಕ ಉಡುಪಿ ಶ್ರೀ ಕೃಷ್ಣಮಠಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದು, ಶ್ರೀ ಕೃಷ್ಣನ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಉಡುಪಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಪ್ರಧಾನಿ ಮಂತ್ರಿಯವರ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಕಾರ್ಯಕ್ರಮದ ಸಂಪೂರ್ಣ ಸಿದ್ಧತೆ ನೋಡಿಕೊಳ್ಳುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ…

Read More

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ(ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ…

Read More

ಹಿರಿಯ ನಟ ಧರ್ಮೇಂದ ಇನ್ನಿಲ್ಲ

ಮುಂಬೈ: ಹಿರಿಯ ಚಲನಚಿತ್ರ ನಟ ಧರ್ಮೇಂದ್ರ ಸೋಮವಾರ ಬೆಳಿಗೆ, ಅಲ್ಪಕಾಲದ ಅನಾರೋಗ್ಯದಿಂದ ತಮ್ಮ ಮುಂಬೈನ ವಿವಾಸದಲ್ಲಿ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಡಿಸೆಂಬ‌ರ್ 8ರಂದು ಆಚರಿಸಲಿದ್ದ 90ನೇ ಹುಟ್ಟುಹಬ್ಬಕ್ಕೆ ಕೆಲವ ದಿನಗಳು ಬಾಕಿ ಇರುವಾಗಲೇ ಅವರ ನಿಧನ ಸಂಭವಿಸಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಅಕ್ಟೋಬರ್ 31ರಂದು ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಂತ್ಯಕ್ರಿಯೆಯನ್ನು ಪವನ್ ಹ್ಯಾನ್ಸ್ ಸ್ಮಶಾನದಲ್ಲಿ ನೆರವೇರಿಸಲಾಗುವುದು. ಶ್ರೀರಾಮ್ ರಾಘವನ್ ನಿರ್ದೇಶನದ ಇಕ್ಕಿಸ್ ಧರ್ಮೇಂದ್ರ ಅವರ ಕೊನೆಯ ಚಿತ್ರವಾಗಲಿದ್ದು ಅಮಿತಾಬ್ ಬಚ್ಚನ್…

Read More

ನವೆಂಬರ್ 28ರಿಂದ 30ರವರೆಗೆ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ “ಮಂಗಳೂರು ಸಂಗೀತೋತ್ಸವ – 2025 ಸಮಾರಂಭ

ಮಂಗಳೂರು: ಸಂಗೀತ ಪರಿಷತ್ ಮಂಗಳೂರು (ರಿ) ಆಶ್ರಯದಲ್ಲಿ ಭಾರತೀಯ ವಿದ್ಯಾಭವನ ಹಾಗೂ ರಾಮಕೃಷ್ಣ ಮಠ, ಮಂಗಳೂರು ಇವರುಗಳ ಸಹಯೋಗದಲ್ಲಿ “ಮಂಗಳೂರು ಸಂಗೀತೋತ್ಸವ – 2025 ನವೆಂಬರ್ 28ರಿಂದ 30ರವರೆಗೆ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿ , ಸಂಗೀತೋತ್ಸವವನ್ನು ನವೆಂಬರ್ 28ರಂದು ಸಂಜೆ 5.00 ಗಂಟೆಗೆ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಅವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀಕ್ಷೇತ್ರ…

Read More

ರಬ್ಬರ್ ಬೆಳೆಗಾರರ ಸಮಸ್ಯೆಯ ಪರಿಹಾರಕ್ಕೆ ನವೆಂಬರ್ 29 ರಂದು ಉಜಿರೆಯಲ್ಲಿ ರಾಜ್ಯಮಟ್ಟದ ಒಂದು ದಿನದ ರಬ್ಬರ್ ಬೆಳೆಗಾರರ ಸಮ್ಮೇಳನ …. !

ಮಂಗಳೂರು: ಕರ್ನಾಟಕ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ. ಉಜಿರೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿ., ಉಜಿರೆ ಹಾಗೂ ಕರ್ನಾಟಕ ರಾಜ್ಯದ ರಬ್ಬರು ಮಾರ್ಕೆಟಿಂಗ್ ಸೊಸೈಟಿಗಳ ಜಂಟಿ ಆಶ್ರಯದಲ್ಲಿ ನವೆಂಬರ್ 29 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಪೂರ್ವಾಹ್ನ ೧೦ ರಿಂದ ರಾಜ್ಯಮಟ್ಟದ ಒಂದು ದಿನದ ರಬ್ಬರ್ ಬೆಳೆಗಾರರ ಸಮ್ಮೇಳನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಭಿಡೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…

Read More

ನವೆಂಬರ್ 28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದಿವ್ಯ ಹಸ್ತದಿಂದ ಗೋಕರ್ಣ ಪರ್ತಗಾಳಿಯಲ್ಲಿ 77 ಅಡಿ ಎತ್ತರದ ಕಂಚಿನ ಶ್ರೀರಾಮನ ಪ್ರತಿಮೆಯ ಲೋಕಾರ್ಪಣೆ … !

ಮಂಗಳೂರು: ಗೋವಾ ಕಾಣಕೋಣ: ಸಮೀಪದ ಪರ್ತಗಾಳಿ ಕೇಂದ್ರ ಮಠದಲ್ಲಿ ನವೆಂಬರ್ 27 ರಿಂದ ಡಿಸೆಂಬರ್ 07 ರ ತನಕ 11 ದಿನಗಳ ಸಾರ್ಧಪಂಚ ಶತಮಾನೋತ್ಸವ ಕಾರ್ಯಕ್ರಮವು ನಡೆಯಲಿದೆ . ಇದರ ಭಾಗವಾಗಿ ನವೆಂಬರ್ 28 ರಂದು ಮಧ್ಯಾಹ್ನ 3.30 ರಿಂದ ಸಾಯಂಕಾಲ 5.00 ಗಂಟೆ ತನಕ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು . ಈ ಸಂದರ್ಭದಲ್ಲಿ ಅವರು ಪ್ರಭು ಶ್ರೀ ರಾಮನ ಮೂರ್ತಿಯ ಅನಾವರಣದ ಜೊತೆಗೆ ಶ್ರೀ ರಾಮಾಯಣ ಥೀಮ್ ಪಾರ್ಕ,…

Read More

ಬೀಡಿ ಮಾಲಕರ ವಂಚನೆಯ ವಿರುದ್ಧ ಬೀದಿಗಿಳಿದ ಬೀಡಿ ಕಾರ್ಮಿಕರು – ರಾತ್ರಿ ಹಗಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಉದ್ಘಾಟನೆ

ಮಂಗಳೂರು : ಕಳೆದ 7 ವರ್ಷಗಳಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ಮೀನಾ ಮೇಷ ಎಣಿಸುವ ರಾಜ್ಯ ಸರಕಾರದ ವಿರುದ್ದ ಬೀಡಿ ಕಾರ್ಮಿಕರು CITU ನೇತ್ರತ್ವದಲ್ಲಿ ಇಂದಿನಿಂದ (24-11-2025) ನಗರದ ಕ್ಲಾಕ್ ಟವರ್ ಬಳಿಯಲ್ಲಿ ರಾತ್ರಿ ಹಗಲು ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು.ಪ್ರಾರಂಭದಲ್ಲಿ ಧರಣಿನಿರತರು ಬೀಡಿ ಮಾಲಕರು ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ…

Read More

ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ , ಜಾಥಾ ಮತ್ತು ಮಹಿಳೆಯರನ್ನು ಕೊಂದವರು ಯಾರು ಎನ್ನುವ ಜನಾದೋಲನ ಕಾರ್ಯಕ್ರಮ … !

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಸತ್ಯವನ್ನು ಬೆಳಕಿಗೆ ತರುವ ಉದ್ದೇಶದಿಂದ “ಕೊಂದವರು ಯಾರು?” ಅಭಿಯಾನವನ್ನು ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸದಸ್ಯೆಯರು ಘೋಷಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ದಹಲಿಯ ನಿರ್ಭಯಾ ಪ್ರಕರಣ ನಡೆದ ದಿನವಾದ ಡಿಸೆಂಬರ್ 16 ಅನ್ನು ಮಹಿಳಾ ಸಂಘಟನೆಗಳು ದೇಶವ್ಯಾಪಿ ಅತ್ಯಾಚಾರ ವಿರೋಧಿ ದಿನವೆಂದು ಆಚರಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಅದೇ…

Read More

ಸಂತ ಅಲೋಶಿಯಸ್ ಉರ್ವಾದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಗಳೂರು: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಜೇನ್ ಜೆರುಶ ಪಿಂಟೋ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಗುಂಡು ಎಸೆತ ಹಾಗೂ ಚಕ್ರಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನುಗಳಿಸಿ ಮಧ್ಯ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು ವಂ ಗುರುಗಳಾದ ಬೆಂಜಮಿನ್ ಪಿಂಟೋ , ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜ ,ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್, ಸುಧಾಕರ್ ಮತ್ತು ಹರಿಣಾಕ್ಷಿ ಇವರು ಶಾಲಾವತಿಯಿಂದ ಅಭಿನಂದಿಸಿ ಶುಭ ಹಾರೈಸಿದರು.

Read More

370ನೇ ವಿಧಿ ರದ್ದತಿ, SIR ಬಗ್ಗೆ ತೀರ್ಪು: 53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್!

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪುಟ್ಟ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ…

Read More
error: Content is protected !!