ಮನ್ರೇಗಾ ರದ್ದು ವಿರುದ್ಧ ಸುಪ್ರೀಂ ಕೋರ್ಟ್ ಮೊರೆ: ರಾಜ್ಯ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ರದ್ದುಪಡಿಸಿ ಜಾರಿಗೆ ತಂದಿರುವ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಕೇಂದ್ರ ಸರ್ಕಾರ ಮನ್ರೇಗಾಗೆ ಬದಲಾಗಿ VB-G RAM-G ಕಾಯ್ದೆ ಜಾರಿಗೊಳಿಸಿರುವುದಕ್ಕೆ ರಾಜ್ಯ ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿ, ಎಂಎನ್‌ಆರ್‌ಇಜಿಎ ಪುನರ್ ಸ್ಥಾಪನೆಗೆ ಆಗ್ರಹಿಸಿತ್ತು. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು…

Read More

ಕುಂಬಳೆಯಲ್ಲಿ ಟ್ರಾಫಿಕ್ ನಿರ್ಧಾರ ಜಾರಿಗೆ ವಿಳಂಬ: ವ್ಯಾಪಾರಿಗಳಿಂದ ಪ್ರತಿಭಟನೆ ಎಚ್ಚರಿಕೆ

ಕುಂಬಳೆ, ಮೇ 7: ಕುಂಬಳೆ ಪಟ್ಟಣದಲ್ಲಿ ಜಾರಿಗೆ ತರಲಾಗಿದ್ದ ಟ್ರಾಫಿಕ್ ವ್ಯವಸ್ಥೆಯ ನಿರ್ಧಾರ ಅನುಷ್ಠಾನವಾಗದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಹಾಗೂ ಪ್ರಯಾಣಿಕರಲ್ಲಿ ಅಸಮಾಧಾನ ಹೆಚ್ಚಾಗಿದೆ. ಹಿಂದಿನ ಪಂಚಾಯತ್ ಆಡಳಿತ ಸಮಿತಿ 2025ರ ಅಕ್ಟೋಬರ್ 23ರಂದು ಕೈಗೊಂಡ ನಿರ್ಧಾರದಂತೆ, ಪೇರಾಲ್ ಕಣ್ಣೂರು, ಸೀತಾಂಗೋಳಿ, ಪೆರ್ಲ, ಸುಳ್ಯ, ಬದಿಯಡ್ಕ ಮತ್ತು ಮುಳ್ಳೇರಿಯಾ ಭಾಗಗಳಿಗೆ ತೆರಳುವ ಬಸ್‌ಗಳು ಪ್ರಯಾಣಿಕರ ಅನುಕೂಲಕ್ಕಾಗಿ ಹಳೆಯ ಬಸ್ ನಿಲ್ದಾಣದಲ್ಲಿ ಐದು ನಿಮಿಷ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಳಿಸುವ ವ್ಯವಸ್ಥೆ ಜಾರಿಗೊಳಿಸಲು ಸೂಚಿಸಲಾಗಿತ್ತು. ಆದರೆ ಇದುವರೆಗೆ ಈ ನಿರ್ಧಾರ ಜಾರಿಯಾಗದ…

Read More

ಒಡುವಾರ್ ಅಮಾನತುಲ್ ಇಸ್ಲಾಂ ಮದ್ರಸ ವಾರ್ಷಿಕೋತ್ಸವ ಮೇ 9ರಿಂದ ಪ್ರಾರಂಭ

ಕುಂಬಳೆ, ಮೇ 7: ಅಮಾನತುಲ್ ಇಸ್ಲಾಂ ಮದ್ರಸ ವತಿಯಿಂದ ವಾರ್ಷಿಕೋತ್ಸವ, ಧಾರ್ಮಿಕ ಜ್ಞಾನ ಸಮ್ಮೇಳನ ಹಾಗೂ ಇಸ್ಲಾಮಿಕ್ ಕಥಾಪ್ರಸಂಗ ಕಾರ್ಯಕ್ರಮವು ಮೇ 9ರಿಂದ 13ರವರೆಗೆ ಬದರ್ ಜುಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಸಂಘಟಕರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಮೇ 9ರಂದು ಸಂಜೆ 7 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಸಯ್ಯಿದ್ ಕೆ.ಎಸ್. ಆಟಕ್ಕೋಯ ತಂಙಳ್ ಉದ್ಘಾಟಿಸಲಿದ್ದು, ಡಾ. ಫಾರೂಖ್ ನಯೀಮಿ ಹಿಜ್ರ ಎಕ್ಸ್‌ಪೆಡಿಷನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮೇ 10 ಮತ್ತು 11ರಂದು ಖ್ಯಾತ ಕಥಾಪ್ರಸಂಗಕಾರ ಸುಬೈರ್ ಮಾಸ್ಟರ್ ತೊಟ್ಟಿಕ್ಕಲ್ ಹಾಗೂ…

Read More

ಕೇರಳದ ಮುಂದಿನ ಮುಖ್ಯಮಂತ್ರಿ ಯಾರು? ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ

ತಿರುವನಂತಪುರಂ: ಹತ್ತು ವರ್ಷಗಳ ಎಡ ಪ್ರಜಾಸತ್ತಾತ್ಮಕ ಮೈತ್ರಿ (ಎಲ್‌ಡಿಎಫ್) ಆಡಳಿತಕ್ಕೆ ತೆರೆ ಎಳೆದು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಕೇರಳದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದ್ದರೂ, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಹಿರಿಯ ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳಲ್ಲಿ ಆಲಪ್ಪುಳ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕಾಂಗ್ರೆಸ್ ಪ್ರಧಾನ…

Read More

ಐಕಳ ಬಳಿ ಕಾರು ಪಲ್ಟಿ: ಚಾಲಕ ಪವಾಡಸದೃಶವಾಗಿ ಪಾರು

ಮೂಡುಬಿದಿರೆ: ಪಕ್ಷಿಕೆರೆಯಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಬಳಿ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಮೂಲಗಳ ಪ್ರಕಾರ, ಕೆಎ-20 ನೋಂದಣಿ ಸಂಖ್ಯೆಯ ಕಾರು ಬೆಳಗಿನ ಜಾವ ಸುರಿದ ಮಳೆಯ ಹಿನ್ನೆಲೆಯಲ್ಲಿ ಜಾರುವ ರಸ್ತೆಯಲ್ಲಿ ತಿರುವು ಪಡೆಯುವ ವೇಳೆ ನಿಯಂತ್ರಣ ತಪ್ಪಿದೆ. ಪರಿಣಾಮ ವಾಹನ ಪಲ್ಟಿಯಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ರಸ್ತೆಯ ಮೇಲೆ ಎಣ್ಣೆಯ…

Read More

ಉಡುಪಿಯಲ್ಲಿ ಅಕಾಲಿಕ ಮಳೆ: ಬಿಸಿಲ ಬೇಗೆಯಿಂದ ಕಂಗೆಟ್ಟ ಜನರಿಗೆ ತಂಪಿನ ಅನುಭವ

ಉಡುಪಿ: ಉಡುಪಿ ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.ಬೆಳಿಗ್ಗೆ 10ಗಂಟೆಗೆ ಸುಮಾರಿಗೆ ಶುರುವಾದ ಗುಡುಗು ಸಹಿತ ಮಳೆಯು ಎರಡು ತಾಸುಗಿಂತಲೂ‌ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ನಗರ, ಸಂತೆಕಟ್ಟೆ, ಮಣಿಪಾಲ, ಅಲೆವೂರು, ಪರ್ಕಳ, ಮಲ್ಪೆ ಮೊದಲಾದ ಕಡೆಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಳಿಕ ಎಡಬಿಡದೆ ಸುರಿದ ಮಳೆಯು ಬಿಸಿಲಿನಿಂದ…

Read More

ಬಾರ್‌ಗಳಿಗೆ ಅಡುಗೆ ಅನಿಲ ಕೊರತೆ: ಗ್ಯಾಸ್ ವಿತರಣೆಗೆ ಅಡಿಟ್ ನಡೆಸಲು ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಆಗ್ರಹ

ಉಡುಪಿ, ಮೇ 7: ಕಳೆದ ಎರಡು ತಿಂಗಳಿನಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಗೆ ಅಡುಗೆ ಅನಿಲ ಸರಬರಾಜು ಆಗುತ್ತಿಲ್ಲ ಎಂದು ಆರೋಪಿಸಿರುವ ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್, ಜಿಲ್ಲೆಯ ಗ್ಯಾಸ್ ವಿತರಕ ಏಜೆನ್ಸಿಗಳ ಸರಬರಾಜು ವ್ಯವಸ್ಥೆಯ ಬಗ್ಗೆ ಅಡಿಟ್ ನಡೆಸಬೇಕು ಎಂದು ಆಗ್ರಹಿಸಿದೆ. ಉಡುಪಿ ಕರಾವಳಿ ಬೈಪಾಸ್‌ನ ಶಾರದಾ ಹೋಟೆಲ್ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅಸೋಸಿಯೇಶನ್ ಅಧ್ಯಕ್ಷ ಬಿ. ಗೋವಿಂದ ರಾಜ್ ಹೆಗ್ಡೆ, “ಕಾಳಸಂತೆಯಲ್ಲಿ ಗ್ಯಾಸ್ ದೊರೆಯುತ್ತಿದೆ. ಕೇಟರಿಂಗ್ ವಲಯಕ್ಕೂ ಪೂರೈಕೆ ನಡೆಯುತ್ತಿದೆ. ಆದರೆ ಸರ್ಕಾರಕ್ಕೆ ಜಿಎಸ್‌ಟಿ…

Read More

ಬಂಟ್ವಾಳ: ತಲಪಾಡಿ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ನಝೀರ್ ಟಿ.ಎಂ. ನಿಧನ

ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ತಲಪಾಡಿ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ನಝೀರ್ ಟಿ.ಎಂ. (57) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಲಪಾಡಿ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನಝೀರ್ ಅವರು ಸೌಮ್ಯ ಸ್ವಭಾವ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಮನ ಗೆದ್ದಿದ್ದರು. ಎಲ್ಲರೊಂದಿಗೆ ಆತ್ಮೀಯತೆಯಿಂದ ಬೆರೆಯುತ್ತಿದ್ದ ಅವರು ಸಮುದಾಯದಲ್ಲಿ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ಮೃತರು ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ…

Read More

ಪಿಂಚಣಿ ವಿಳಂಬಕ್ಕೆ ಪುತ್ತೂರು ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ

ಪುತ್ತೂರು: ರಾಜ್ಯದಾದಂತ್ಯ ವಿಕಲ ಚೇತನರಿಗೆ, ಮಲಗಿದ್ದಲೆ ಇರುವ ವಿಕಲಚೇತನರಿಗೆ ಎಂಡೊಪೀಡಿತ ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಮಾಶಾಸನ ಪಿಂಚಣಿ ಬಾರದೆ ಜೀವನ ನಿರ್ವಹಣೆ ಮಾಡಲು ತುಂಬಾ ಕಷ್ಟಕರ ವಾಗಿದೆ.ಈ ವಿಷಯದ ಬಗ್ಗೆ 6/5/26ರಂದು ಪುತ್ತೂರು ತಾಲ್ಲೂಕು ಪಂಚಾಯತ್ ಮಿನಿ ಸಭಾಂಗಣ ದಲ್ಲಿ ಪುತ್ತೂರು ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕರಾದ ಶ್ರೀಮತಿ ತುಳಸಿ ಯವರ ಅಧ್ಯಕ್ಷ ತೆ ಯಲ್ಲಿ ನಡೆದ ವಿಕಲ ಚೇತನರ ಇಲಾಖೆ ಯಾಡಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತರ ಹಾಗೂ ಗ್ರಾಮೀಣ ಹಾಗೂ ನಗರ ಪುನರ್ವಸತಿ…

Read More

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಬಿಜೆಪಿ ಕಾರ್ಯಕರ್ತರ ಮೇಲೆ ಬಾಂಬ್ ದಾಳಿ, ಐವರಿಗೆ ಗಾಯ

ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರಗೊಂಡಿದ್ದು, ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳ ಬಳಿಕ ಈ ದಾಳಿ ಸಂಭವಿಸಿದೆ. ಮೋಟಾರ್ ಸೈಕಲ್‌ನಲ್ಲಿ…

Read More
error: Content is protected !!