ನ.26ರಂದು ಕದ್ರಿ ಯುದ್ಧ ಸ್ಮಾರಕದಲ್ಲಿ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ
ಮಂಗಳೂರು: ಮುಂಬೈ ನಗರದ ಮೇಲೆ 2008ರ ನ.26ರಂದು ನಡೆದ ಭಯೋತ್ಪಾದನಾ ದಾಳಿಯ ಸಂದರ್ಭ ಉಗ್ರರ ವಿರುದ್ಧ ವೀರಾವೇಶದಿಂದ ಹೋರಾಡಿ ನಾಗರಿಕರನ್ನು ರಕ್ಷಿಸಿದ ವೀರ ಯೋಧರನ್ನು ಸ್ಮರಿಸಿ ನುಡಿನಮನ ಸಲ್ಲಿಸುವ ಸಲುವಾಗಿ ಮಂಗಳೂರಿನ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ವತಿಯಿಂದ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ ನ.26ರಂದು ಸಂಜೆ 4ಕ್ಕೆ ಕದ್ರಿ ಯುದ್ಧ ಸ್ಮಾರಕದಲ್ಲಿ ನಡೆಯಲಿದೆ ಎಂದು ವೇದಿಕೆಯ ಸ್ಥಾಪಕ ಫ್ರ್ಯಾಂಕ್ಲಿನ್ ಮೊಂತೆರೋ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸೈಂಟ್ ಅಲೋಶಿಯಸ್…