Headlines

ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಬಂಧನ

ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಕಾಟಿಪಳ್ಳ ಗ್ರಾಮ, ಚೊಕ್ಕಬೆಟ್ಟು, ಕೃಷ್ಣಮಠ ರಸ್ತೆಯ ಶ್ರೀಮತಿ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ಕಳೆದ 05 ವರ್ಷಗಳಿಂದ ಶಿವಲೀಲಾ ಮತ್ತು ಆಕೆಯ ಇಬ್ಬರು ಮಕ್ಕಳಾದ ಸೋಮನಾಥ ಮತ್ತು ಮಲ್ಲಿಕಾರ್ಜುನ ರವರ ವಾಸ್ತವ್ಯವಿದ್ದು ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ದಿನಾಂಕ: 19-07-2026 ರಂದು ರಾತ್ರಿ 11.00 ಗಂಟೆಗೆ ಆರೋಪಿಯಾದ ಸೋಮನಾಥ, ಪ್ರಾಯ 21 ವರ್ಷ, ತಂದೆ: ದಿ|| ಪರಸಪ್ಪ, ವಾಸ: ರೇಖಾ ರವರ ಬಾಡಿಗೆ ಮನೆ, ಚೊಕ್ಕಬೆಟ್ಟು, ಮಂಗಳೂರು ತಾಲೂಕು, ಖಾಯಂ ವಾಸ: ತಗ್ಯಾಳ…

Read More

ಕುಂಬಳೆಯಲ್ಲಿ ಬಸ್ ಬ್ಯಾಟರಿ ಕಳವು: ಲಾರಿ ಬ್ಯಾಟರಿ ಕಳವು ಪ್ರಕರಣದ ಆರೋಪಿಗಳ ಮೇಲೆ ಕಣ್ಣಿಟ್ಟ ಪೊಲೀಸರು

ಕುಂಬಳೆ: ಕುಂಬಳೆ-ಬದಿಯಡ್ಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನ ಬ್ಯಾಟರಿಯನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಮಹಾಲಕ್ಷ್ಮಿ ಬಸ್ ನಿನ್ನೆ ರಾತ್ರಿ ಸರ್ವೀಸ್ ಮುಗಿಸಿದ ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಇಂದು ಬೆಳಗ್ಗೆ ಚಾಲಕ ದಿನೇಶ್ ಬಂದು ಬಸ್ ಸ್ಟಾರ್ಟ್ ಮಾಡಲು ಪ್ರಯತ್ನಿಸಿದಾಗ ವಾಹನ ಚಾಲನೆಗೆ ಬರಲಿಲ್ಲ. ಪರಿಶೀಲನೆ ನಡೆಸಿದಾಗ ಬಸ್‌ನ ಬ್ಯಾಟರಿ ಕಾಣೆಯಾಗಿರುವುದು ಪತ್ತೆಯಾಗಿದೆ. ಈ ಸಂಬಂಧ ಚಾಲಕ ದಿನೇಶ್ ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಇದೇ ವೇಳೆ ಕುಂಬಳೆ…

Read More

ಪೆರ್ಲದಲ್ಲಿ ಆಘಾತಕಾರಿ ಘಟನೆ: ಕ್ವಾರ್ಟರ್ಸ್‌ನಲ್ಲಿ 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಕ್ವಾರ್ಟರ್ಸ್‌ನೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತಪಟ್ಟಿದ್ದಾನೆ.ಮೃತ ವಿದ್ಯಾರ್ಥಿಯನ್ನು ಬೆದ್ರಂಪಳ್ಳದಲ್ಲಿ ವಾಸಿಸುತ್ತಿದ್ದ ಪ್ರಕಾಶನ್ ಮತ್ತು ಸುನಿತಾ ದಂಪತಿಯ ಪುತ್ರ 12 ವರ್ಷದ ಶ್ರೀಹರಿ ಎಂದು ಗುರುತಿಸಲಾಗಿದೆ.ಪ್ರಕಾಶನ್ ಹಾಗೂ ಕುಟುಂಬ ಮೂಲತಃ ಪತ್ತನಂತಿಟ್ಟ ಜಿಲ್ಲೆಯ ಅಡೂರು ನಿವಾಸಿಗಳಾಗಿದ್ದು, ಬೆದ್ರಂಪಳ್ಳದ ಅಬ್ದುಲ್ಲ ಕುಂಣಿ ಅವರ ರಬ್ಬರ್ ತೋಟದಲ್ಲಿ ಪ್ರಕಾಶನ್ ಮತ್ತು ಅವರ ಪತ್ನಿ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಶ್ರೀಹರಿಗೆ ಹೊರತಾಗಿ ಪ್ರೀತು ಮತ್ತು ನಿಹಾರಿಕ ಎಂಬ ಇಬ್ಬರು ಮಕ್ಕಳು…

Read More

ಮಮ್ಮೂಟ್ಟಿಗೆ ಮತ್ತೊಂದು ರಾಷ್ಟ್ರೀಯ ಕಿರೀಟ: ‘ಭ್ರಮಯುಗಂ’ ಅಭಿನಯಕ್ಕೆ ಅತ್ಯುತ್ತಮ ನಟ ಪ್ರಶಸ್ತಿ

ಮಲಯಾಳಂ ಚಿತ್ರರಂಗದ ದಿಗ್ಗಜ ನಟ ಮಮ್ಮೂಟ್ಟಿಗೆ ಮತ್ತೊಂದು ಪ್ರತಿಷ್ಠಿತ ಗೌರವ ಸೇರ್ಪಡೆಯಾಗಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಮಮ್ಮೂಟ್ಟಿ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಭ್ರಮಯುಗಂ’ ಸಿನಿಮಾದಲ್ಲಿನ ಅದ್ಭುತ ಹಾಗೂ ವಿಭಿನ್ನ ಅಭಿನಯಕ್ಕಾಗಿ ಈ ರಾಷ್ಟ್ರೀಯ ಗೌರವ ಮಮ್ಮೂಟ್ಟಿಗೆ ಲಭಿಸಿದೆ. ಚಿತ್ರದ ಗಂಭೀರ ಮತ್ತು ಸವಾಲಿನ ಪಾತ್ರವನ್ನು ಜೀವಂತಗೊಳಿಸುವ ಮೂಲಕ ಮಮ್ಮೂಟ್ಟಿ ಮತ್ತೊಮ್ಮೆ ತಮ್ಮ ಅಪಾರ ನಟನಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಈ ಬಾರಿಯ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮಮ್ಮೂಟ್ಟಿ ಅವರು ಬಾಲಿವುಡ್ ನಟ ಕಾರ್ತಿಕ್ ಆರ್ಯನ್…

Read More

ಭಾರಿ ಮಳೆ, ಭೂಕುಸಿತ ಹಿನ್ನೆಲೆ; ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ನಿರಂತರ ಮಳೆ, ಭೂಕುಸಿತ ಹಾಗೂ ಭಾರತೀಯ ಹವಾಮಾನ ಇಲಾಖೆಯ ಕೆಂಪು ಮತ್ತು ಕಿತ್ತಳೆ ಅಲರ್ಟ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಮವಾರದಿಂದ ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇದಾರನಾಥ, ಬದರಿನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ಮಾರ್ಗಗಳಲ್ಲಿ ಭೂಕುಸಿತ ಸಂಭವಿಸಿರುವುದರಿಂದ ಯಾತ್ರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಮಾರ್ಗಗಳು ಸುರಕ್ಷಿತವೆಂದು ಘೋಷಿಸಿದ ಬಳಿಕವೇ ಯಾತ್ರೆ ಪುನರಾರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಈಗಾಗಲೇ ಮಾರ್ಗದಲ್ಲಿರುವ ಯಾತ್ರಿಕರನ್ನು ಸುರಕ್ಷಿತ ಸ್ಥಳಗಳಲ್ಲಿ ತಂಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ರಸ್ತೆ…

Read More

ಸಂಸತ್ ಮುತ್ತಿಗೆ ವೇಳೆ ಉದ್ವಿಗ್ನತೆ; ಬ್ಯಾರಿಕೇಡ್ ಭೇದಿಸಿದ ಪ್ರತಿಭಟನಾಕಾರರ ಮೇಲೆ ಅಶ್ರುವಾಯು, ಲಾಠಿಚಾರ್ಜ್

ಹೊಸದಿಲ್ಲಿ: ಸಂಸತ್ತಿನತ್ತ ಮೆರವಣಿಗೆ ನಡೆಸಿದ ಸಿಜೆಪಿ ನೇತೃತ್ವದ ಪ್ರತಿಭಟನಾಕಾರರು ಭದ್ರತಾ ಬ್ಯಾರಿಕೇಡ್‌ಗಳನ್ನು ಭೇದಿಸಿ ಮುನ್ನಡೆಯಲು ಯತ್ನಿಸಿದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಉದ್ವಿಗ್ನಗೊಂಡಿತು. ಪ್ರತಿಭಟನಾಕಾರರನ್ನು ತಡೆಯಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ, ಲಾಠಿಚಾರ್ಜ್ ನಡೆಸಿದವು.ಶಾಸ್ತ್ರಿ ಭವನ, ರೈಸಿನಾ ರಸ್ತೆ, ಜನಪಥ್ ಹಾಗೂ ಅಶೋಕ ರಸ್ತೆ ಪ್ರದೇಶಗಳಲ್ಲಿ ನೆರೆದಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಕ್ರಮ ಕೈಗೊಂಡರು. ಭದ್ರತಾ ಮುನ್ನೆಚ್ಚರಿಕೆಯಾಗಿ ಸಂಸತ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಪ್ರತಿಭಟನಾಕಾರರು ಸಂಸತ್ ಸಮೀಪದ ರೈಲ್ ಭವನ, ಶಾಸ್ತ್ರಿ ಭವನ, ಕೃಷಿ…

Read More

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐ(ಎಂ) ಮಾನವ ಸರಪಳಿ

ಮಂಗಳೂರು, ಜುಲೈ 20: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಸರ್ಕಾರದ ಕ್ರಮವನ್ನು ಹಿಂಪಡೆಯಬೇಕು, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಮತ್ತು ನಗರ ಆರೋಗ್ಯ ಕೇಂದ್ರಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದ ವೆನ್ಲಾಕ್…

Read More

ಕಾಸರಗೋಡಿನಲ್ಲಿ ನವಜೀವನೋತ್ಸವ ಯಶಸ್ವಿ; ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಶೇಷ ಕಾರ್ಯಕ್ರಮ

ಕಾಸರಗೋಡು, ಜು. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) (ರಿ ) ಕಾಸರಗೋಡು ತಾಲೂಕಿನ ವತಿಯಿಂದ ಆಯೋಜಿಸಿದ್ದ ‘ನವಜೀವನೋತ್ಸವ’ ಕೆಸರಿನಲ್ಲಿ ಜಾನಪದ ಕ್ರೀಡೆ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಭಾನುವಾರ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನ ಉಬ್ರ0ಗಳದಲ್ಲಿ ಯಶಸ್ವಿಯಾಗಿ ನಡೆಯಿತು. ಗ್ರಾಮೀಣ ಕ್ರೀಡೆಗಳಾದ ಹಗ್ಗಜಗ್ಗಾಟ , ಮಡಕೆ ಹೊಡೆಯುವುದು , ಕೆಸರು ಗದ್ದೆ ಹಾಗು ಇನ್ನಿತ್ತರ ಮನೋರಂಜನೆ ಸ್ಪರ್ಧೆಗಳು ನಡೆದವು.ಮತ್ತು ನವಜೀವನ ಸಮಿತಿಯ ಸಾಧಕರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ…

Read More

ಜು. 26ರಂದು ಕಾಸರಗೋಡಿನಲ್ಲಿ ಕರ್ನಾಟಕ–ಗಡಿನಾಡ ಕನ್ನಡ ಸಮ್ಮೇಳನ-2026

ಕಾಸರಗೋಡು: ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಹಾಗೂ ಕನ್ನಡ ಪ್ರಕಾಶನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ‘ಕರ್ನಾಟಕ–ಗಡಿನಾಡ ಕನ್ನಡ ಸಮ್ಮೇಳನ-2026’ ಜುಲೈ 26ರಂದು (ಭಾನುವಾರ) ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ನೇತೃತ್ವದ ಕನ್ನಡ ಭವನದಲ್ಲಿರುವ ದಿ. ಡಾ. ಲಲಿತಾ ಎಸ್.ಎನ್. ಭಟ್ ವೇದಿಕೆಯಲ್ಲಿ ನಡೆಯಲಿದೆ. ಬೆಂಗಳೂರುದ ಡಾ. ಸಿ. ಸೋಮಶೇಖರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ವತಿಯಿಂದ ‘ಸಾಂಸ್ಕೃತಿಕ ಕಲಾ ವೈಭವ – ಕಲಾವಿದರ ಕಲರವ’…

Read More

ಹೊಸ ದೇವಾಲಯ ನಿರ್ಮಾಣಕ್ಕಿಂತ ಪುರಾತನ ಸನ್ನಿಧಿಗಳ ಜೀರ್ಣೋದ್ಧಾರ ಶ್ರೇಷ್ಠ: ಅದಮಾರು ಶ್ರೀ

ಕುಂಜಾರುಗಿರಿ ಶ್ರೀದುರ್ಗಾ ದೇವಸ್ಥಾನದಲ್ಲಿರುವ ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರ ಸೇವಾಪತ್ರವನ್ನು ಶ್ರೀ ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, “ಹೊಸ ದೇವಾಲಯಗಳನ್ನು ನಿರ್ಮಿಸುವುದಕ್ಕಿಂತ ಪುರಾತನ ಸನ್ನಿಧಿಗಳನ್ನು ಸಂರಕ್ಷಿಸಿ ಜೀರ್ಣೋದ್ಧಾರಗೊಳಿಸುವುದು ಶ್ರೇಷ್ಠ ಕಾರ್ಯ. ಊರಿನ ಪ್ರತಿಯೊಬ್ಬರೂ ಒಂದಾಗಿ ಕೈಜೋಡಿಸಿ ಈ ಜೀರ್ಣೋದ್ಧಾರ ಕಾರ್ಯದಲ್ಲಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು. ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಪ್ರತಿ ಭಾನುವಾರ ಸನ್ನಿಧಿಯ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಸಲು ಚಾಲನೆ…

Read More
error: Content is protected !!