ಕರಾವಳಿ ಪ್ರವಾಸೋದ್ಯಮಕ್ಕೆ ಭರವಸೆಗಳು ಈಡೇರಿಲ್ಲ: ಡಿ.ಕೆ. ಶಿವಕುಮಾರ್ ವಿರುದ್ಧ ವಿವೇಕಾನಂದ ಸಾಲಿನ್ಸ್ ಟೀಕೆ
ಮಂಗಳೂರು ಡಿ.ಕೆ. ಶಿವಕುಮಾರ್ ಅವರು ಇದೇ ವರ್ಷದ ಜನವರಿ 10ರಂದು ಮಂಗಳೂರಿಗೆ ಭೇಟಿ ನೀಡಿ ಹೂಡಿಕೆದಾರರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಕರಾವಳಿ ಕರ್ನಾಟಕಕ್ಕಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸುವುದಾಗಿ ಹಾಗೂ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ನೀಡಿದ ಭರವಸೆಗಳು ಇದುವರೆಗೆ ವಿಧಾನಸಭೆಯಲ್ಲಿ ಪ್ರಸ್ತಾವನೆಯಾಗದಿರುವುದು ವಿಷಾದನೀಯ ಎಂದು ವಿವೇಕಾನಂದ ಸಾಲಿನ್ಸ್ ತಿಳಿಸಿದ್ದಾರೆ.ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂಡಿಕೆದಾರರ ಸಭೆಯಲ್ಲಿ ಐಟಿ ಹಾಗೂ ಇತರ ಕೈಗಾರಿಕೆಗಳಿಗೆ ಅಗತ್ಯವಾದ ಬೃಹತ್ ಮೂಲಸೌಕರ್ಯ ಒದಗಿಸುವುದಾಗಿ ನೀಡಿದ ಭರವಸೆಯೂ ಈಡೇರಿಲ್ಲ ಎಂದು…
