“ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರ ಮುಹೂರ್ತ ನಾಳೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ
ಮಂಗಳೂರು: ಎಂ.ಎನ್. ಆರ್. ಪ್ರೊಡಕ್ಷನ್ ಲಾಂಛನದಲ್ಲಿ ಡಾ ಎಂ. ಎನ್. ರಾಜೇಂದ್ರ ಕುಮಾರ್ ನಿರ್ಮಾಣದ “ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಾಳೆ ಬೆಳಿಗ್ಗೆ 9 ಗಂಟೆಗೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕರಾದ ಎಂ. ಎನ್. ರಾಜೇಂದ್ರ ಕುಮಾರ್ ಅವರು ಪತ್ರಿಕಾಗೋಷ್ಠಿ ಹೇಳಿದರು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ವಿನು ಬಳಂಜ ಅವರ ನಿರ್ದೇಶನದಲ್ಲಿ ಸುಮಾರು 600 ಕಂತುಗಳಲ್ಲಿ…