ಪುತ್ತೂರಿನಲ್ಲಿ 7 ತಿಂಗಳ ಗರ್ಭಿಣಿ ನೇಣಿಗೆ ಶರಣು

ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ.ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ….

Read More

ನಿರಂತರ ಮಳೆ ಮಂಜೇಶ್ವರದ ಬೀಚ್ ರಸ್ತೆಯಲ್ಲಿರುವ 12 ಮನೆ ಜಲಾವೃತಾ

ಮಂಜೇಶ್ವರ ∙ ಕಳೆದ ಕೆಲವು ದಿವಸಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಂಜೇಶ್ವರ ಚರ್ಚ್ ಬೀಚ್ ರಸ್ತೆ ಪ್ರದೇಶದಲ್ಲಿ ವ್ಯಾಪಕವಾದ ನೀರು ನಿಂತು ಪ್ರದೇಶದ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರವಾಹದ ಪರಿಣಾಮವಾಗಿ ಅಲ್ಲಿನ 12 ಮನೆಗಳಿಗೆ ಮಳೆನೀರು ನುಗ್ಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಈ ಪ್ರದೇಶದಲ್ಲಿ ಮಳೆನೀರು ಹರಿದು ಹೋಗಬೇಕಾದ ಚರಂಡಿಗಳನ್ನು ಮುಚ್ಚಿರುವುದು ಹಾಗೂ ಸಮೀಪದ ತೋಡಿನ ಕಟ್ಟ ಒಡೆದಿರುವುದು ಈ ರೀತಿಯಾಗಿ ನೀರು ಶೇಖರಣೆಯಾಗಿ ಪ್ರವಾಹದ ಭೀತಿಗೆ ಕಾರಣವಾಗಿರುವುದಾಗಿ ತಿಳಿದು ಬಂದಿದೆ. ಸೂಕ್ತವಾದ ನಿಕಾಶಿ…

Read More

ಮಂಜೇಶ್ವರದ ಕೊಡ್ಲಮೊಗರುವಿನಲ್ಲಿ ಮನೆಯೊಳಗೆ ಯುವಕ ನೇಣುಬಿಗಿದು ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ: ಕೊಡ್ಲಮೊಗರಿನಲ್ಲಿ ಮನೆಯೊಳಗೆ ಯುವಕನೊಬ್ಬ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೊಡ್ಲಮೊಗರು ಪಳ್ಳದ ಪಡ್ಪು ಬೀಡು ನಿವಾಸಿ ಶೇಖರ ಬೆಲ್ಚಾಡ ಎಂಬವರ ಪುತ್ರ ಭರತ್ (24) ಸಾವನ್ನಪ್ಪಿದ ದುರ್ದೈವಿ.ಬಾನುವಾರ ಬೆಳಿಗ್ಗೆ ಮನೆಯವರು ದೇವಸ್ಥಾನಕ್ಕೆ ತೆರಳಿ ಮರಳಿ ಬರುತ್ತಿರುವ ಮಧ್ಯೆ ಭರತ್ ಮನೆಯೊಳಗೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಸ್ಥಳೀಯರು ಸಾವಿನಲ್ಲಿ ನಿಗೂಢತೆ ಇರುವ ಶಂಕೆ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಧಾವಿಸಿ ಶವದ ಮಹಜರು ನಡೆಸಿ ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ…

Read More

ಕುಂಬಳೆ ಕೊಯ್ಪಾಡಿ ಸಮುದ್ರ ತೀರದಲ್ಲಿ ತೆರೆಗಳೊಂದಿಗೆ ತೇಲಿ ಬಂದ ಬ್ಯಾರಲ್ , ಸಮುದ್ರದಲ್ಲಿ ಹೊತ್ತಿ ಉರಿದ ಹಡಗಿನಿಂದ ಬಿದ್ದ ಕಂಟೈನರ್ ನಲ್ಲಿದ್ದ ಏಸಿಡ್ ಎಂಬ ಶಂಕೆ

ಕುಂಬಳೆ: ಇಲ್ಲಿನ ಕೊಯ್ಪಾಡಿ ಸಮುದ್ರ ತೀರದಲ್ಲಿ ತೆರೆಗಳೊಂದಿಗೆ ತೇಲಿ ಬಂದ ಬ್ಯಾರಲ್ ಗಳು ದಡಕ್ಕೆ ಅಪ್ಪಳಿಸಿದೆ. ಭಾನೂವಾರ ಸಂಜೆ 3 30ರ ವೇಳೆ ಸಮುದ್ರ ದಂಡೆಯಲ್ಲಿ ಬ್ಯಾರಲ್ ತೇಲುವುದನ್ನು ಕಂಡು ಶಂಕಿತನಾದ ಮತ್ಸ್ಯ ಕಾರ್ಮಿಕನೋರ್ವ ಕೂಡಲೇ ಕೋಸ್ಟಲ್ ಪೋಲೀಸರಿಗೆ ಮಾಹಿತಿ ನೀಡಿದನು. ಇದರಂತೆ ಪೋಲೀಸರು ಆಗಮಿಸಿ ಬ್ಯಾರಲ್ ದಡಕ್ಕೆ ತಂದು ಸಂರಕ್ಷಿಸಿದ್ದಾರೆ. ಇತ್ತೀಚೆಗೆ ಕೇರಳ ಕರಾವಳಿ ತೀರದಲ್ಲಿ ಹೊತ್ತಿ ಉರಿದ ಹಡಗಿನಿಂದ ಸಮುದ್ರ ಪಾಲಾದ ಕಂಟೈನರಿನಿಂದ ಬಿದ್ದ ಬ್ಯಾರಲ್ ಇದಾಗಿರಬೇಕೆನ್ನಲಾಗಿದೆ. ಬ್ಯಾರಲ್ ನಲ್ಲಿ ನೈಟ್ರಿಕ್ ಏಸಿಡ್ ಇರುವುದೆಂದು…

Read More

ಕೇರಳದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಬ್ರಿಟನ್ ನೌಕಾಪಡೆಯಯುದ್ಧ ವಿಮಾನ

ಕೇರಳ : ಹಾರಾಡುತ್ತಿರುವಾಗಲೇ ಇಂಧನ ಖಾಲಿಯಾದ ಹಿನ್ನೆಲೆ, ಬ್ರಿಟನ್‌ನ ನೌಕಾಪಡೆಯ ಯುದ್ಧ ವಿಮಾನ ಎಫ್-35 ಕೇರಳದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ರಾತ್ರಿ ತುರ್ತು ಭೂಸ್ಪರ್ಶ ಕಂಡಿದೆ. ಶನಿವಾರ ರಾತ್ರಿ 9.30 ರ ಸುಮಾರಿನಲ್ಲಿ ಭಾರತದ ಮೇಲೆ ಹಾರುತ್ತಿರುವಾಗ ಇಂಧನ ಖಾಲಿಯಾದ ಬಗ್ಗೆ ಪೈಲಟ್ ಮಾಹಿತಿ ರವಾನಿಸಿದ್ದಾನೆ. ತಕ್ಷಣವೇ ಬ್ರಿಟನ್ ಅಧಿಕಾರಿಗಳು ಭಾರತೀಯ ಅಧಿಕಾರಿಗಳ ಜೊತೆ ಸಂಪರ್ಕ ಸಾಧಿಸಿ ವಿಮಾನ ಇಳಿಯಲು ಅನುಮತಿ ಕೋರಿದ್ದಾರೆ. ಇದಕ್ಕೆ ಒಪ್ಪಿದ ಭಾರತದ ಅಧಿಕಾರಿಗಳು ಕೇರಳದ ತಿರುವನಂತಪುರಂ ನಿಲ್ದಾಣದಲ್ಲಿ ಇಳಿಸಲು ಅನುವು…

Read More

ಕನ್ನಡ ಭಾಷೆ ಬಳಕೆಯಾಗುತ್ತಿರುವ ಕಾಸರಗೋಡಿನಲ್ಲಿ ಕನ್ನಡ ಭಾಷೆಗೆ ಮತ್ತೆ ಕೊಡಲಿ

ಮಂಜೇಶ್ವರ : ಕನ್ನಡ ಭಾಷೆ ಬಳಕೆಯಾಗುತ್ತಿರುವ ಕಾಸರಗೋಡಿನಲ್ಲಿ ಕನ್ನಡ ಭಾಷೆಗೆ ಮತ್ತೆ ಕೊಡಲಿ ಏಟು ಬಿದ್ದಿದೆ. ಒಂದಲ್ಲ ಒಂದು ವಿಷಯದಲ್ಲಿ ಕನ್ನಡದ ಅವಗಣನೆಯಾಗುತ್ತಿರುವ ಕಾಸರಗೋಡಿನ ಶಾಲೆಗಳಲ್ಲೂ ಮಲಯಾಳೀಕರಣ ಮಾಡಲು ಮುಂದಾದಾಗ ಕನ್ನಡಿಗರ ಒಕ್ಕೊರಳಿನ ಪ್ರತಿಭಟನೆಯಿಂದ ಅದು ಸಾಕಾರಗೊಂಡಿರಲಿಲ್ಲ. ಇದೀಗ ಕಾಸರಗೋಡು ಜಿಲ್ಲೆಯನ್ನು ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ನಾಮಫಲಕಗಳಲ್ಲಿ ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ಭಾಷೆ ರಾರಾಜಿಸುತಿದ್ದರೂ ಕನ್ನಡ ಭಾಷೆಯನ್ನು ಇಲ್ಲೂ ಅವಗಣಿಸಲಾಗಿದೆ . ಇದು ಕನ್ನಡ ಭಾಷಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರೀಯ ಭಾಷಾ ಅಲ್ಪಸಂಖ್ಯಾತ ನೀತಿಗೆ ಅನುಗುಣವಾಗಿ…

Read More

ಗರ್ಭಿಣಿ ಹಸುವನ್ನು ಮಾಂಸ ಮಾಡಿ ಕಳೆಬರವನ್ನು ಉಪೇಕ್ಷಿಸಿ ಪರಾರಿಯಾದ ಕಟುಕರಿಗೆ ತಕ್ಕ ಶಾಸ್ತಿ ನೀಡಲು ದೇವರ ಮೊರೆ ಹೋದ ಕುಟುಂಬಸ್ಥರು

ಮಂಜೇಶ್ವರ: ಕಟುಕರು ಹಟ್ಟಿಯಿಂದ ಗರ್ಭಿಣಿ ದನವನ್ನು ರಾತ್ರೋರಾತ್ರಿ ಕದ್ದೋಯ್ದು ಪರಿಸರದಲ್ಲೆ ಮಾಂಸ ಮಾಡಿ ಕಳೆಬರವನ್ನು ಸ್ಥಳದಲ್ಲೇ ಉಪೇಕ್ಷಿಸಿ ಪರಾರಿಯಾದ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ. ಪ್ರಕರಣ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮನೆ ಮಂದಿ ಇದೀಗ ದನ ಕದ್ದ ಕಟುಕರಿಗೆ ತಕ್ಕ ಶಾಸ್ತಿಯಾಗಲೆಂದು ಕುಂಬ್ಳೆ ಶ್ರೀ ಗೋಪಾಲಕೃಷ್ಣ ದೇವರಲ್ಲಿ ಪ್ರಾರ್ಥಸಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತ್ ಗೊಳಪಟ್ಟ 7 ನೇ ವಾರ್ಡ್ ಹೊಸಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ “ಗಿರೀಶ್ ನಿಲಯ” ನಿವಾಸಿ, ಪ್ರಗತಿಪರ ಕೃಷಿಕರೂ, ಹೈನುಗಾರಿಕೆ ವೃತ್ತಿಯಲ್ಲಿ…

Read More

ವಿಮಾನ ದುರಂತದಲ್ಲಿ ಮೃತ ಪಟ್ಟ ಪ್ರಯಾಣಿಕರಿಗೆ ಸಂತಾಪ ಸೂಚಿಸಿದ -ಗಣೇಶ್ ಪಾವೂರು

ಮಂಜೇಶ್ವರ :ಗುಜರಾತ್ನ ಅಹ್ಮದಾಬಾದ್ ನಲ್ಲಿ ನಡೆದ ಬೋಯಿಂಗ್ ವಿಮಾನ ದುರಂತದಲ್ಲಿ ಮೃತ ಪಟ್ಟ ಪ್ರಯಾಣಿಕರಿಗೆ ತೀಯಾ ವೆಲ್ಫೇರ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಗಣೇಶ್ ಪಾವೂರು ಸಂತಾಪ ಸೂಚಿಸಿದ್ದಾರೆ. ಬದುಕಿ ಉಳಿದ ಗಾಯಲು ಬೇಗ ಗುಣ ಮುಖರಾಗಲಿ ಏಂದು ಅವರು ಹಾರೈಸಿದ್ದಾರೆ ಹಾಗೂ ಇದನ್ನು ಕೇಂದ್ರ ಸರಕಾರ ತನಿಖೆ ನಡೆಸಿ ಇದರ ಸತ್ಯಂಶವನ್ನು ಕಂಡು ಹಿಡಿಯಬೇಕು ಏಂದು ಗಣೇಶ್ ಪಾವೂರು ಅಗ್ರಹಿಸಿದ್ದಾರೆ ಈ ದುರಂತದಲ್ಲಿ ಮೃತ ಪಟ್ಟ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ.

Read More

ಜನಜಾಗೃತಿಯ ಹಾದಿಯಲ್ಲಿ ದೀಪ ಜ್ಯೋತಿಯಾಗಿದ್ದ ಕುಳೂರು ಬೀಡು ಕೆ.ದಾಸಣ್ಣ ಆಳ್ವ ನಿಧನ

ಮಂಜೇಶ್ವರ: ಮೀಂಜ ಗ್ರಾಮ ಪಂಚಾಯಿತು ವ್ಯಾಪ್ತಿಯ ಕುಳೂರು ಗ್ರಾಮದ, ಸಮಾಜಸೇವೆ ಮತ್ತು ಜನಜಾಗೃತಿಯ ಹಾದಿಯಲ್ಲಿ ದೀಪದಂತೆ ಜ್ಯೋತಿ ಹರಡಿದ್ದ ಹಿರಿಯ ಸಮಾಜ ಸೇವಕ ಹಾಗೂ ಕುಳೂರು ಬೀಡಿನ ಮನೆತನದ ಹಿರಿಯ ಸದಸ್ಯ ಧಾರ್ಮಿಕ, ಕುಳೂರು ಬೀಡು ಕೆ. ದಾಸಣ್ಣ ಆಳ್ವ (93) ಇಂದು ಮುಂಜಾನೆ ನಿಧನರಾಗಿದ್ದಾರೆ. ಅಸೌಖ್ಯ ನಿಮ್ಮಿತ ಕಳೆದ ಒಂದು ವಾರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ಅಪರಾಹ್ನ 3.30 ಕ್ಕೆ…

Read More

ಗುಜರಾತ್ ನ ಅಹಮದಾಬಾದ್ ನ ಮೇಘಾನೀ ಪ್ರದೇಶದಲ್ಲಿ ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ

ಗುಜರಾತಿನ ಅಹ್ಮದಾಬಾದ್ ನ ಮೇಘನಿ ನಗರ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸರದಾರ್ ವಲ್ಲಭಾ ಭಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೂಡಲೇ ವಿಮಾನ ಫತನವಾಗಿದ್ದು, ವಿಮಾನದಲ್ಲಿ 242ಪ್ರಯಾಣಿಕರಿದ್ದರು. ಇದರಲ್ಲಿ ಇಬ್ಬರು ಪೈಲಟ್ ಸೇರಿಜಂತೆ 12ಮಂದಿ ವಿಮಾನ ಸಿಬಂದಿಗಳೆನ್ನಲಾಗಿದೆ. ವಿಮಾನ ನಿಲ್ದಾಣ ಬಳಿಯಲ್ಲೇ ಪತನವಾದ ವಿಮಾನದಿಂದ ಬೆಂಕಿ , ದಟ್ಟ ಹೊಗೆಯೇಳುತ್ತಿದೆ. ದಟ್ಟ ಜ್ವಾಲೆಯ ಹೊಗೆಯಿಂದ ಏನೂ ಕಾಣದ ಪರಿಸ್ಥಿತಿ ಇದೆಯೆಂದು ಪ್ರಾಥಮಿಕ ವರದಿ ಉಲ್ಲೇಖಿಸಿದೆ. ಜನರ ಸಾವು ನೋವಿನ ಮಾಹಿತಿ…

Read More
error: Content is protected !!