ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಸ್ಥಾನ ಗೆಲ್ಲಲಿದೆ: ಕೆ. ಸುರೇಂದ್ರನ್ ವಿಶ್ವಾಸ

ಪುತ್ತೂರು: ಕೇರಳದಲ್ಲಿ ಈ ಬಾರಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನ ಗಳಿಸಲಿದೆ ಎಂದು ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿ ಸುಮಾರು 20 ಶೇಕಡಾ ಮತಗಳನ್ನು ಪಡೆದಿದ್ದು, ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸಿರುವುದನ್ನು ಉಲ್ಲೇಖಿಸಿದರು. ಕೇರಳದಿಂದ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಗೆಲುವಿನತ್ತ ಕೊಂಡೊಯ್ದಿದ್ದೇವೆ. ಇದೇ ರೀತಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಉತ್ತಮ ಸಾಧನೆ…

Read More

ಭಾರತ–ಪಾಕಿಸ್ತಾನ ಸಂಘರ್ಷ ನಿಲ್ಲಿಸಿದ್ದು ನಾನೇ: ಟ್ರಂಪ್ ಪುನರುಚ್ಚಾರ

ವಾಷಿಂಗ್ಟನ್: ಭಾರತ–ಪಾಕಿಸ್ತಾನ ನಡುವಿನ ಸಂಘರ್ಷವನ್ನು ತಾನೇ ನಿಲ್ಲಿಸಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಪುನರುಚ್ಚರಿಸಿದ್ದಾರೆ. ಶ್ವೇತಭವನದಲ್ಲಿ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟ್ರಂಪ್, ಸಂಘರ್ಷ ಮುಂದುವರಿದಿದ್ದರೆ ಭಾರತ ಮತ್ತು ಪಾಕಿಸ್ತಾನದ ಮೇಲೆ ಶೇ.200ರಿಂದ 250ರವರೆಗೆ ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾಗಿ ಹೇಳಿದ್ದಾರೆ. ತಮ್ಮ ಈ ನಿಲುವಿನ ಪರಿಣಾಮವೇ ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಕೊಂಡವು ಎಂದು ತಿಳಿಸಿದ್ದಾರೆ. “ನನ್ನ ಮಧ್ಯಸ್ಥಿಕೆಯಿಂದ ಸುಮಾರು 3ರಿಂದ 5 ಕೋಟಿ ಜನರ ಪ್ರಾಣ…

Read More

ಗ್ಯಾಸ್ ದರ ಏರಿಕೆ ಹೋಟೆಲ್ ಉದ್ಯಮಕ್ಕೆ ಆಘಾತ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದಿಂದ ಹೊರಗಿನ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಭೀತಿ ಎದುರಾಗಿದೆ. ಎಲ್ ಪಿಜಿ ದರ ಏರಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಹೊಟೇಲ್ ಮಾಲಕರ ಸಂಘದ ರಾಜ್ಯ ಉಪಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು, ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ದರ…

Read More

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸಿದ ಉಡುಪಿ ಕೋರ್ಟ್

ಉಡುಪಿ: ಇತ್ತೀಚಿಗೆ ಕಾರ್ಕಳದಲ್ಲಿ ಸಂಚಲನ ಉಂಟುಮಾಡಿದ್ದ ಉದ್ಯಮಿ ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆಯಾಗಿದೆ‌. ಸುದೀಪ್‌ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್‌ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಶನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿಯೇ ಕಾರಣ ಎಂದು ಸುದೀಪ್‌ ತಂದೆ ದಾಮೋದರ್ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸೌಮ್ಯ ಶೆಟ್ಟಿಯನ್ನು ಎ….

Read More

ಮೇ ದಿನದ ಆಶಯವನ್ನು ಬುಡಮೇಲುಗೊಳಿಸಿದ ಜನವಿರೋಧಿ ಕಾರ್ಮಿಕ ಸಂಹಿತೆಗಳು – ಸುನಿಲ್ ಕುಮಾರ್ ಬಜಾಲ್

ಮಂಗಳೂರು: 8 ಗಂಟೆಯ ದುಡಿಮೆ,8 ಗಂಟೆಯ ನಿದ್ರೆ,8 ಗಂಟೆಯ ವಿಶ್ರಾಂತಿಗಾಗಿ ಮೂಡಿ ಬಂದಿರುವ ಮೇ ದಿನಾಚರಣೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ಜಗತ್ತಿನಾದ್ಯಂತ ಮಾನವ ಜನಕೋಟಿಗಳು ಒಂದಾಗಿ ಆಚರಿಸುವ ಏಕೈಕ ದಿನವಾಗಿದೆ ಮೇ ದಿನ.ಅಂತಹ ಮೇ ದಿನದ ಆಶಯವನ್ನು ಬುಡಮೇಲುಗೊಳಿಸಿ ದಿನದ ದುಡಿಮೆಯನ್ನು 12 ಗಂಟೆಗೆ ಏರಿಸುವ ಮೂಲಕ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿದ ನರೇಂದ್ರ ಮೋದಿ ಸರಕಾರದ ವಿರುದ್ಧ ಸಮರಶೀಲ ಹೋರಾಟವನ್ನು ನಡೆಸಲು ಕಾರ್ಮಿಕ ವರ್ಗ ಸಜ್ಜಾಗಬೇಕೆಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್…

Read More

ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ಅಕ್ಷಯ ಪಾತ್ರೆ ಸಮರ್ಪಣೆ

ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರದ ವಾರ್ಷಿಕೋತ್ಸವ ಜಾತ್ರೆಯ ಅಂಗವಾಗಿ ಮಚ್ಚಾಂಬಾಡಿ ಪಾವೂರು ವಿಭಾಗದ ವತಿಯಿಂದ ಕ್ಷೇತ್ರಕ್ಕೆ ಅಕ್ಷಯ ಪಾತ್ರೆ (ಕೊಪ್ಪರಿಗೆ) ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಗುರಿಕಾರರಾದ ಪುರುಷೋತ್ತಮ ಗುರಿಕಾರ, ಪ್ರಸಾದ್ ಗುರಿಕಾರ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಗಣೇಶ್ ಪಾವೂರು, ಪಾವೂರು ವಿಭಾಗದ ಅಧ್ಯಕ್ಷ ಮನೋಜ್ ಕೊಪ್ಪಳ ಉಪಸ್ಥಿತರಿದ್ದರು. ಹಾಗೂ ಜಯರಾಜ್ ಬಜಾಲ್, ಶಿವಕುಮಾರ್ ಬಳ್ಳೂರು, ಸುರೇಶ್ ಬೋಲ್ಯಾಂಗೋಡಿ, ದಿವಾಕರ ಚೌಕಿ, ಸುಧಾಮಣಿ ಅರಿಬೈಲ್, ಮಲ್ಲಿಕಾ ಬೇಕರಿ, ಸರಿತಾ ಕುಂಡಾಪು, ಲಲಿತಾ ತಾವುಡ್ಗೋಳಿ, ಚಿರಶ್ರೀ ಬೇಕರಿ,…

Read More

ಕಾಸರಗೋಡು ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರದ 2 ನೇ ಹಂತದ ಕಾಮಗಾರಿ 5 ತಿಂಗಳಲ್ಲಿ ಪೂರ್ಣ

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಸರಗೋಡು ಗೋ-ಕುಟೀರದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ತಲುಪಿರುತ್ತದೆ.ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯ ನೆನಪಿಗಾಗಿ ಶಾಶ್ವತವಾದ ಕಾಸರಗೋಡು ಗೋ-ಕುಟೀರದ ನಿರ್ಮಾಣದ ಮೂಲಕ ಸಾರ್ಥಕ ಸೇವೆಯನ್ನು ಗುರುತಿಸಿಕೊಳ್ಳುವುದಕ್ಕಾಗಿ 2025 ನವಂಬರ್ 4 ರಂದು ಕಾಸರಗೋಡು…

Read More

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಸನ್ಮಾನ, ಸ್ಮಾರ್ಟ್ ಕಾರ್ಡ್ ವಿತರಣೆ

ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರ ನೇತೃತ್ವದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್‌, ಬಸ್ ನೌಕರರ ಸಂಘ ಹಾಗೂ ಆಟೋ ರಿಕ್ಷಾ ಚಾಲಕ-ಮಾಲೀಕರ ಸಂಘದ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಮಂಗಳೂರಿನ ಹಂಪನಕಟ್ಟೆಯ ತಾಜ್ ಮಹಲ್ ಎದುರಿನ ರಿಕ್ಷಾ ನಿಲ್ದಾಣದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಮಿಕ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳ ಆರು ಮಂದಿಯನ್ನು ಸನ್ಮಾನಿಸಲಾಯಿತು. ಅಲ್ಲದೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂದರ್ಭದಲ್ಲಿ ಧೈರ್ಯದಿಂದ ಸೇವೆ…

Read More

ಸಿಎಂ ಬದಲಾವಣೆ ಚರ್ಚೆಯಲ್ಲಿ ಅಭಿವೃದ್ಧಿ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಚರ್ಚೆಗಳು ಜೋರಾಗಿದ್ದರೂ ಅಭಿವೃದ್ಧಿ ವಿಷಯಗಳು ಕಡೆಗಣನೆಗೊಳ್ಳುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಜಿ. ಪರಮೇಶ್ವರ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ಆರೋಪಿಸಿದರು. ಈ ಹಿನ್ನೆಲೆ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ಆದರೆ ಜನರ ಸಮಸ್ಯೆಗಳತ್ತ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಟೀಕಿಸಿದರು. ಕ್ಯಾಬಿನೆಟ್‌ನಲ್ಲಿ…

Read More

ಮಂಗಳೂರು: ಕುದ್ರೋಳಿ ಕ್ಷೇತ್ರಕ್ಕೆ ನೂತನ ಆಡಳಿತ ಸಮಿತಿ ಆಯ್ಕೆ

ಮಂಗಳೂರು : ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ 2026-27ನೇ ಸಾಲಿನ ಆಡಳಿತ ಸಮಿತಿಗೆ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ವತಿಯಿಂದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ರವಿಶಂಕರ್ ಮಿಜಾರ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಜೂನ್ 20ರಂದು ನಡೆದ ಅನಧಿಕೃತ ಸಭೆ ವಿರುದ್ಧ ಕಾನೂನು ಹೋರಾಟ ನಡೆಸಲಾಗಿದ್ದು, ಅಧ್ಯಕ್ಷರ ಅನುಮತಿ ಹಾಗೂ ಅಗತ್ಯ ಬಹುಮತವಿಲ್ಲದೆ ನಡೆದ ಸಭೆ ಅಸಂವಿಧಾನಿಕವಾಗಿತ್ತು ಎಂದು ಹೇಳಿದರು. ಈ…

Read More
error: Content is protected !!