ಕಾಸರಗೋಡು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ)ಕಾಸರಗೋಡು ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಪರಮ ಪೂಜ್ಯ ಪದ್ಮವಿಭೂಷಣ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತ್ರ ಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಿನ್ನೆ ವನಿತ ಭವನ ಕೂಡ್ಲುನಲ್ಲಿ ನಡೆಯಿತು . ಕೂಡ್ಲು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ದಿನೇಶ್ ರವರು ಪ್ರಗತಿ ನಿಧಿ ಬೇಡಿಕೆ…

Read More

ಎ ಎಚ್ ಎಸ್ ತಂಡದ ಏಳನೇ ಸೀಸನ್ ‘ಮಂಜೇಶ್ವರ ಬೀಚ್ ಉತ್ಸವ’

ಮಂಜೇಶ್ವರ: ಮಂಜೇಶ್ವರ ಜನತೆಗೆ ಮತ್ತೊಮ್ಮೆ ಮನರಂಜನೆಯನ್ನು ನೀಡಲು ಎ ಎಚ್ ಎಸ್ ತಂಡದ ಏಳನೇ ಸೀಸನ್ ಮಂಜೇಶ್ವರ ಬೀಚ್ ಉತ್ಸವ ಸ್ಥಳೀಯ ನಿವಾಸಿಗಳಾದ ಶಾನವಾಸ್, ಶೆರೀಫ್ ಹಾಗೂ ಇರ್ಫಾನ್ ಎಂಬಿವರ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಕುಂಡು ಕೊಳಕೆ ಬೀಚ್ ನಲ್ಲಿ ಮನರಂಜನೆಗೆ ಸಿದ್ದವಾಗಿದೆ. ಕಳೆದ 6 ಸೀಸನ್ ಗಳಲ್ಲೂ ನಷ್ಟದ ಹಾದಿಯಲ್ಲೇ ಸಾಗಿ ಕೈ ಸುಟ್ಟುಕೊಂಡಿರುವ ಈ ತಂಡ ನಾಡಿನ ಅಭಿವೃದ್ಧಿಗಾಗಿ ಈ ಸಲ ಕೂಡಾ ಯಾವುದೇ ಪ್ರವೇಶ ಶುಲ್ಕವಿಲ್ಲದೆ ಉಚಿತ ಪ್ರವೇಶದೊಂದಿಗೆ ಉತ್ತಮ ಮನರಂಜನೆ ಹಾಗೂ ಆಗಮಿಸುವವರಿಗೆ…

Read More

ಗೆಳೆಯರ ಬಳಗ (ರಿ) ಬಲ್ಲಂಗುಡೆಲು ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ನೇಮಕ…!

ಮಂಜೇಶ್ವರ : ಗೆಳೆಯರ ಬಳಗ (ರಿ) ಬಲ್ಲಂಗುಡೆಲು ಇದರ ವಾರ್ಷಿಕ ಮಹಾಸಭೆ ಬಲ್ಲಂಗುಡೆಲು ಶ್ರೀ ಕ್ಷೇತ್ರದ ಪರಿಸರದ ಸಂಘದ ಕಟ್ಟಡದಲ್ಲಿ ಸಂಘದ ಅಧ್ಯಕ್ಷರಾದ ಮಾದವ ಉಳಿಯರವರ ಅಧ್ಯಕ್ಷತೆಯಲ್ಲಿ ಜರಗಿತು. ಅಧ್ಯಕ್ಷರು : ಕಾರ್ತಿಕ್ ಶೆಟ್ಟಿ ಮಜಿಬೈಲು ಕೋಶಾಧಿಕಾರಿ : ಬಶೀರ್ ಮೂಡಂಬೈಲು ಕಾರ್ಯದರ್ಶಿ : ಪ್ರದೀಪ್ ಶೆಟ್ಟಿ ಬಲ್ಲಂಗುಡೆಲು ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಸಮಿತಿಯ ರೂಪೀಕರಣ ನಡೆಯಿತು.ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಮ್ ಪ್ರಕಾಶ್ ಆಳ್ವ ಪಟ್ಟತ್ತಮೊಗರು, ಅಧ್ಯಕ್ಷರಾಗಿ ಕಾರ್ತಿಕ್ ಶೆಟ್ಟಿ ಮಜಿಬೈಲು,ಉಪಾಧ್ಯಕ್ಷರಾಗಿ…

Read More

ಬಿಜೆಪಿ ಮೀoಜ ಪಂಚಾಯತ್ ಕಚೇರಿ ಉದ್ಘಾಟನೆ

ಬಿಜೆಪಿ ಮೀoಜ ಪಂಚಾಯತ್ ಕಚೇರಿ ಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಮುಖಂಡರಾದ ಸುನಿಲ್ ಪಿ ಆರ್, ಮಾಧು ಒಳಪಿಲ್, ಮಣಿಕಂಠ ರೈ, ಎ ಕೆ ಕಯ್ಯರ್, ಲೋಕೇಶ್ ನೊಂದ, ಕೃಷ್ಣ ನಾವಡ, ಕೃಷ್ಣ ಬೆಜ್ಜ, ನಾರಾಯಣ ನಾಯ್ಕ್, ಕೆ ವಿ ಭಟ್, ಶಾಲಿನಿ, ಜ್ಯೋತಿ, ಸಂತೋಷ್ ದೈಗೋಳಿ ಪದ್ಮನಾಭ ರೈ , ಹಾಗೂ ಕಾರ್ಯಕರ್ತರು ಉಪಸ್ಥಿತಿ ಇದ್ದರು. ಚಂದ್ರಹಾಸ ಬೆಜ್ಜ…

Read More

ರಿಕ್ಷಾ, ನಿಲ್ದಾಣಗಳ ನಡವಳಿಯಲ್ಲಿ ಕೆಲವು ಬದಲಾವಣೆಗೆ ಅಗತ್ಯಕ್ಕೆ ಆಟೋ ಯೂನಿಯನ್ ಆಗ್ರಹ

ಉಡುಪಿ: ಜಿಲ್ಲೆ ಮತ್ತು ನಗರದ ಆಟೋ ರಿಕ್ಷಾ ಮತ್ತು ಆಟೋ ನಿಲ್ದಾಣಗಳಿಗೆ ಸಂಬಂಧಿಸಿದಂತೆ ಅ.1ರಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಹೊಸ ನಡವಳಿಯಲ್ಲಿ ಕೆಲವು ಬದಲಾವಣೆ ಮಾಡಬೇಕು ಎಂದು ಆಶ್ರಯ ಆಟೋ ಯೂನಿಯನ್ ಆಗ್ರಹಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಯೂನಿಯನ್ ಪ್ರಧಾನ ಕಾರ್ಯದರ್ಶಿ ಶಿವಾನಂದ ಮೂಡುಬೆಟ್ಟು ಅವರು, ವಲಯ-1 ಪರ್ಮಿಟ್ ಅಳವಡಿಸಿಕೊಳ್ಳಲು ಮೂರು ತಿಂಗಳ ಕಾಲಾವಕಾಶ ನೀಡಬೇಕು. ನಗರ ಪರವಾನಿಗೆ ಹೊಂದಿರುವ ಆಟೋ ಚಾಲಕನಿಗೆ ಒಂದು ಆಟೋ ಸ್ಟ್ಯಾಂಡ್ ನಲ್ಲಿ ಮಾತ್ರ ಸದಸ್ಯತ್ವ ನೀಡಬೇಕು. ಎರಡು ಕಡೆ…

Read More

ಅಜ್ಞಾತರಿಂದ ಗಲ್ಫ್ ನಿವಾಸಿಯ ಮನೆಗೆ ಗುಂಡು ಹಾರಾಟ

ಮಂಜೇಶ್ವರ : ಉಪ್ಪಳ ಹಿದಾಯತ್ ಬಜಾರಿನ ಕೊಲ್ಲಿ ಉದ್ಯೋಗಿಯೊಬ್ಬರ ಮನೆಗೆ ಅಜ್ಞಾತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಉಪ್ಪಳ ಹಿದಾಯತ್ ಬಜಾರಿನಲ್ಲಿ ವಾಸವಾಗಿರುವ ಅಬೂಬಕ್ಕರ್ ಎಂಬವರ ಮನೆಗೆ ಗುಂಡು ಹಾರಿಸಿರುವ ಬಗ್ಗೆ ದೂರಲಾಗಿದೆ. ಗುಂಡು ಹಾರಾಟದಿಂದ ಮನೆಯ ಕಿಟಿಕಿಯ ಗಾಜುಗಳು ಪುಡಿಯಾಗಿದೆ. ಅಬೂಬಕ್ಕರ್ ಕತಾರ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಈತನ ಪತ್ನಿ ಹಾಗೂ ಪುತ್ರಿ ಮನೆಯಲ್ಲಿದ್ದರೆಂದು ಹೇಳಲಾಗಿದೆ.ಕಾರಿನಲ್ಲಿ ಆಗಮಿಸಿದ ತಂಡ ಗುಂಡು ಹಾರಿಸಿ ತಕ್ಷಣ ಅಲ್ಲಿಂದ ಪರಾರಿಯಾಗಿರುವುದಾಗಿ ಹೇಳಲಾಗಿದೆ.ಮಾಹಿತಿ…

Read More

ಕಡಬದಲ್ಲಿ 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಡಬ, ನ.6: ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ಬಾಲಕ ಗಗನ್ (14) ಸ್ಥಳೀಯ ಶಾಲೆಯ ವಿದ್ಯಾರ್ಥಿಯಾಗಿದ್ದು, ಪೋಷಕರಾದ ತಂದೆ-ತಾಯಿ ಹಾಗೂ ಇಬ್ಬರು ಸಹೋದರ-ಸಹೋದರಿಯರೊಂದಿಗೆ ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯಲ್ಲಿ ವಾಸವಾಗಿದ್ದನು. ನ.6ರಂದು ಪೋಷಕರು ಶಾಲೆಗೆ ತೆರಳಿ ಮಗನ ವಿದ್ಯಾಭ್ಯಾಸದ ಪ್ರಗತಿ ಕುರಿತು ವಿಚಾರಿಸಿದಾಗ, ಆತನ ಕಲಿಕಾ ಪ್ರಗತಿ ತೃಪ್ತಿಕರವಾಗಿಲ್ಲವೆಂಬ ಮಾಹಿತಿ ದೊರೆತಿತ್ತು. ಸಂಜೆ ಮನೆಗೆ ಮರಳಿದ ಬಾಲಕ ಆಟವಾಡಿ ಬಳಿಕ…

Read More

ಜಂಟಿ ಸರ್ವೇಗೆ ನಡೆಸಿ ವರದಿ ನೀಡುವಂತೆ ಸೂಚನೆ : ನವೆಂಬರ್ ೧೦ ರಿಂದ ಸರ್ವೆ: ಸುಧೀರ್ ಕುಮಾರ್ ಹೇಳಿಕೆ

ಕಡಬ ತಾಲೂಕಿನ ವ್ಯಾಪ್ತಿಯಲ್ಲಿರುವ ಐನೆಕಿದು, ಸುಬ್ರಮಣ್ಯ, ಬಿಳಿನೆಲೆ, ಶಿರಿಬಾಗಿಲು , ಕೊಂಬಾರು, ಕೊಣಾಜೆ , ಐತ್ತೂರು, ನೂಜಿಬಾಳ್ತಿಲ, ರೆಂಜಿಲಾಡಿ, ಶಿರಾಡಿ ಮುಂತಾದ ಹತ್ತು ಗ್ರಾಮಗಳ ಅರಣ್ಯ ಮೀಸಲು ಅರಣ್ಯಗಳ ಜಂಟಿ ಸರ್ವೆ ನಡೆಸಿ ಕ್ರೂಡಿಕೃತ ದಾಖಲೆಗಳನ್ನು ಸಿದ್ದಪಡಿಸಿ ವರದಿ ನೀಡುವಂತೆ ಸರಕಾರ ಆದೇಶ ಮಾಡಿದ್ದು ನವೆಂಬರ್ ೧೦ ರಿಂದ ಜಂಟಿ ಸರ್ವೆ ಕಾರ್ಯ ನಡೆಯಲಿದೆ ಎಂದು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕಡಬದಲ್ಲಿ…

Read More

ಸಾಮಾಜಿಕ ಪಿಡುಕನ್ನು ಹೋಗಲಾಡಿಸುವ ಕನಕದಾಸರ ಬರವಣಿಗೆ ಇಂದಿಗೂ ಪ್ರಸ್ತುತ : ದ. ಕ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತಿ ಆಚರಣೆಯು ಮಂಗಳೂರಿನ ತುಳುಭವನದಲ್ಲಿ ನಡೆಯಿತು . ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ದರ್ಶನ್ ಹೆಚ್ ವಿ , ಸಾಹಿತ್ಯವನ್ನು ತಿಳಿಯುವುದು ತುಂಬಾನೇ ಮುಖ್ಯವಾಗಿರುತ್ತದೆ . ಅದರಲ್ಲಿ ನಾನಾ ಪ್ರಕಾರಗಳು ಬರುತ್ತದೆ . ಅವುಗಳಲ್ಲಿ ಒಂದು ಪ್ರಕಾರ ದಾಸ ಸಾಹಿತ್ಯ . ದಾಸ ಸಾಹಿತ್ಯವು ಕನ್ನಡ ಸಾಹಿತ್ಯ ಲೋಕಕ್ಕೆ…

Read More

ಕ್ಲಾಸಿಕ್ ಸಬ್ ಜೂನಿಯರ್ 76 ಕೆಜಿ ಮಹಿಳಾ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 2025ರಲ್ಲಿ ಶೆರಿಲ್ ಡಿಸೋಜಾಗೆ ಬೆಳ್ಳಿ ಪದಕ

ಮಂಗಳೂರು: ಕರ್ನಾಟಕ ರಾಜ್ಯ ಸಬ್-ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ಪುರುಷ ಮತ್ತು ಮಹಿಳಾ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 2025 (ಕ್ಲಾಸಿಕ್ ಮತ್ತು ಎಕ್ಯುಪ್ಪೆಡ್ ) ವಿಭಾಗದಲ್ಲಿ ಸ್ಪರ್ಧೆಯು ಇತ್ತೀಚಿಗೆ ತೊಕ್ಕೊಟ್ಟುವಿನ ಅಂಬಿಕಾ ರಸ್ತೆಯಲ್ಲಿರುವ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಓದುತ್ತಿರುವ ಕ್ಲಾಸಿಕ್ ಸಬ್ ಜೂನಿಯರ್ 76 ಕೆಜಿ ವಿಭಾಗವನ್ನು ಪ್ರತಿನಿಧಿಸಿದ ಶೆರಿಲ್ ಡಿಸೋಜಾ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು ಮೆಲ್ವಿನ್ ಡಿಸೋಜಾ ಮತ್ತು ಲೀನಾ ಫೆರ್ನಾಂಡಿಸ್ ಇವರ ಪುತ್ರಿಯಾಗಿದ್ದಾರೆ . ಇವರಿಗೆ ನಾಗುರಿಯ ಗರೋಡಿ…

Read More
error: Content is protected !!