ಸತ್ಯಶೋಧನೆಗೆ ಆದ್ಯತೆ ನೀಡಿ, ಉತ್ತಮ ಸಂಗತಿಗಳಿಗೂ ಪ್ರಚಾರ ಸಿಗಲಿ: ಶಾಸಕ ಅಶೋಕ್ ರೈ
ಪುತ್ತೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸತ್ಯಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣಪುಟ್ಟ ತಪ್ಪುಗಳನ್ನು ವೈಭವೀಕರಿಸುವುದರ ಜೊತೆಗೆ ಸಮಾಜದಲ್ಲಿರುವ ಉತ್ತಮ ಸಂಗತಿಗಳನ್ನೂ ಜನರಿಗೆ ತಲುಪಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಉಪನ್ಯಾಸ, ಬಿ.ಟಿ. ರಂಜನ್ ಪ್ರಶಸ್ತಿ ಪ್ರದಾನ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಭಿವೃದ್ಧಿ ರಾಜಕಾರಣವೇ ಚರ್ಚೆಯಾಗಬೇಕು, ಧರ್ಮ ರಾಜಕಾರಣವಲ್ಲ. ಪುತ್ತೂರಿಗೆ…
