ಮಂಜೇಶ್ವರ :ರಾಷ್ಟ್ರೀಯ ಹೆದ್ದಾರಿ ಪಾದಾಚಾರಿ ಮೇಲ್ಸೇತುವೆ ಕಾಮಗಾರಿ ಗೆ ಚಾಲನೆ.
ಮಂಜೇಶ್ವರ: ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರು ಎರಡೂ ದಿಕ್ಕುಗಳಿಗೆ ದಾಟಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ಪಾದಾಚಾರಿ ಮೇಲ್ಸೇತುವೆಯ ನಿರ್ಮಾಣ ಕಾಮಗಾರಿಗೆ ಚಾಲನೆ ದೊರಕಿತು. ಮೇಲ್ಸೇತುವೆ ನಿರ್ಮಾಣ ಸ್ಥಳದ ಬಗ್ಗೆ ಕೆಲವೊಂದು ಮಂದಿ ರೈಲು ನಿಲ್ದಾಣದ ಸಮೀಪ ಫ್ಲೈಓವರ್ ಬೇಕೆಂಬ ಬೇಡಿಕೆ ಇಟ್ಟಿದ್ದರೂ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರಿನವರು ಬೇಡಿಕೆ ಇಟ್ಟಿದ್ದ ಸ್ಥಳದಲ್ಲೇ ಇದೀಗ ಕಾಮಗಾರಿ ಆರಂಭಗೊಂಡಿರುವುದನ್ನು ಹೋರಾಟ ಕ್ರಿಯಾ ಸಮಿತಿ ಹಾಗೂ ಊರವರು ಸ್ವಾಗತಿಸಿದ್ದಾರೆ. ಈ ಪಾದಾಚಾರಿ ಮೇಲ್ಸೇತುವೆ ನಿರ್ಮಾಣದಿಂದಾಗಿ…