ಮಳೆಗಾಲಕ್ಕೆ ಪೂರ್ವಸಿದ್ಧತೆ: ಅವಘಡ ತಡೆಗೆ ಸಮನ್ವಯ ಕ್ರಮ ಕೈಗೊಳ್ಳಲು ಶಾಸಕ ವೇದವ್ಯಾಸ ಕಾಮತ್ ಸೂಚನೆ
ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅವಘಡಕ್ಕೆ ಆಸ್ಪದವಿಲ್ಲದಂತೆ ಸಕಲ ಸಿದ್ದತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಕಳೆದ ಮಳೆಗಾಲದಲ್ಲಿ ಮ.ನ.ಪಾ ವ್ಯಾಪ್ತಿಯ ಹಲವೆಡೆ ಅಪಾರ ಪ್ರಮಾಣದ ಹಾನಿಯುಂಟಾಗಿದ್ದನ್ನು ಗಮನದಲ್ಲಿಟ್ಟುಕೊಂಡು ನೆರೆ ಪರಿಸ್ಥಿತಿಗೆ ಕಾರಣ, ಪ್ರವಾಹ ಮರುಕಳಿಸದಂತೆ ತುರ್ತಾಗಿ ನಡೆಯಬೇಕಿರುವ ಕಾರ್ಯ ಇತ್ಯಾದಿ ವಿಷಯಗಳ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು….
