ಸುರತ್ಕಲ್ ಚೂರಿ ಇರಿತ ಪ್ರಕರಣ.ನಾಲ್ವರು ಆರೋಪಿಗಳ ಗುರುತು ಪತ್ತೆ .

ಸುರತ್ಕಲ್: ದೀಪಕ್ ಬಾರ್ ಬಳಿ ಗುರುವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸಂಘ ಪರಿವಾರದ ಕಾರ್ಯಕರ್ತ ಗುರುರಾಜ್, ಆತನ ಸ್ನೇಹಿತರಾದ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ದುಷ್ಕೃತ್ಯ ಎಸಗಿದ ಆರೋಪಿಗಳೆಂದು ತಿಳಿದು ಬಂದಿದೆ. ಪ್ರಕರಣದ ತನಿಖೆ ಆರಂಭಿಸಿದ ಸುರತ್ಕಲ್ ಪೊಲೀಸ್ ನಿರೀಕ್ಷ ಪ್ರಮೋದ್ ಕುಮಾರ್ ನೇತೃತ್ವದ ಪೊಲೀಸ್ ತಂಡ, ಘಟನೆ ನಡೆಯುವ ಸಂದರ್ಭ ಸ್ಥಳದಲ್ಲಿದ್ದ ಸಂತ್ರಸ್ತರ ಸ್ನೇಹಿತನೊಬ್ಬನ…

Read More

ಕರ್ನೂಲ್ ಬಸ್ ದುರಂತ .ಮೃತರ ಸಂಖ್ಯೆ 20ಕ್ಕೆ ಏರಿಕೆ .

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಬೆಂಕಿಗಾಹುತಿಯಾಗಿರುವ ಘಟನೆಯಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಶುಕ್ರವಾರ ಬೆಳಗಿನ ಜಾವ ಘಟನೆ ನಡೆದಿದೆ. ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿ, ಕೆಲವೇ ಕ್ಷಣಗಳಲ್ಲಿ ಬಸ್‌ ಬೆಂಕಿಗಾಹುತಿಯಾಗಿದೆ. ಬೆಂಕಿಯ ತೀವ್ರತೆಗೆ ಇಡೀ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಇವರಲ್ಲಿ 18 ಮಂದಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ. ಹಲವರ ಮೃತದೇಹ ಸಂಪೂರ್ಣವಾಗಿ…

Read More

ನವಂಬರ್ 4ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು “ಗೋ-ಕುಟೀರ”ದ ಭೂಮಿ ಪೂಜೆಗೆ ಗೋ-ಸಂಕಲ್ಪದ ಸಂಭ್ರಮ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ- ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಸಂಜೆ ಗಂಟೆ 4:00ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಕಾಸರಗೋಡು ಗೋ- ಕುಟೀರದ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ. ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮ ದಿನೋತ್ಸವವನ್ನು…

Read More

ಹೂವಿನ ರಾಶಿಯೋ.. ಜಾರುವ ಪಾದಚಾರಿ ರಸ್ತೆಯೋ….

ಮಂಗಳೂರು: ನಗರದ ಹೃದಯ ಭಾಗವೆಂದು ಕರೆಯಲ್ಪಡುವ ಹಂಪನ ಕಟ್ಟೆಯ ಮಿನಿ ವಿಧಾನಸೌಧ ಎದುರು ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಹೂವಿನ ವ್ಯಾಪಾರ ಜೋರಾಗಿಯೇ ಇತ್ತು. ಘಟ್ಟ ಪ್ರದೇಶದಿಂದ ಕರಾವಳಿಯ ಕಡೆಗೆ ಹೂವಿನ ರಾಶಿಯೇ ಹರಿದು ಬಂದಿತ್ತು. ಸೇವಂತಿಕೆ, ಗೊಂಡೆ ಹೂವುಗಳ ರಾಶಿಯು ಕಣ್ಣಿಗೆ ಹಬ್ಬವಾಗಿತ್ತು. ಆದರೆ ಇದೀಗ ದೀಪಾವಳಿ ಹಬ್ಬ ಮುಗಿಯುತ್ತಿದಂತೆಯೇ ತಂದ ಹೂವುಗಳನ್ನು ಪಾದಚಾರಿ ಮಾರ್ಗದಲ್ಲೇ ಬಿಟ್ಟು ಹೋಗಿದ್ದು. ಅದು ಅಲ್ಲೇ ಚೆಲ್ಲಾಪಿಲ್ಲಿಯಾಗಿ ಉಳಿದು ಬಿಟ್ಟಿದೆ. ಸಂಜೆಯ ವೇಳೆಗೆ ಎಡೆ ಬಿಡದೆ ಸುರಿದ ಹಿಂಗಾರು ಮಳೆಯು ಹೂವಿನ…

Read More

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಶಶಿ ತರೀಕೆರೆ ನೇಮಕ…!

ಉಡುಪಿ:ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗೆ ಬೆಂಗಳೂರಿನ ಶಶಿ ತರೀಕೆರೆ ಅವರ ‘ಪ್ಯೂಪಾ’ ಕವನ ಸಂಕಲನ ಆಯ್ಕೆಯಾಗಿದೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಎಚ್. ಪಿ. ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯು 2024ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಪ್ರಶಸ್ತಿಗೆ ಆಹ್ವಾನಿಸಿತ್ತು. ಅದರಂತೆ ಪ್ರಶಸ್ತಿಗೆ 88…

Read More

ನಿಯಂತ್ರಣ ತಪ್ಪಿ ಕಾರು ಚರಂಡಿ ಮೇಲೆ ಹತ್ತಿದ ಕಾರು….!

ಬಂಟ್ವಾಳ: ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದು ಚರಂಡಿಯ ಮೇಲೆ ಕಾರು ಹತ್ತಿದ ಘಟನೆ ಆ.22 ರಂದು ರಾತ್ರಿ ವೇಳೆ ನಡೆದಿದೆ.ಪುತ್ತೂರು ನಿವಾಸಿ ಇರ್ಶಾದ್ ಎಂಬವರು ಪತ್ನಿ ಜೊತೆ ಮಂಗಳೂರಿಗೆ ತೆರಳುವ ಸಂದರ್ಭದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಅಪಾಯವಾಗದೆ ಕಾರಿನಲ್ಲಿದ್ದ ಇಬ್ಬರು ಸೇಫ್ ಆಗಿದ್ದಾರೆ.ಘಟನೆಯ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

Read More

ಅ.26ರಂದು ಕೃಷ್ಣಮಠದಲ್ಲಿ ‘ಭರತಮುನಿ ಜಯಂತ್ಯುತ್ಸವ’ ಆಚರಣೆ .

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ರಾಧಾಕೃಷ್ಣ ನೃತ್ಯ ನಿಕೇತನ ಸಂಸ್ಥೆಯ 23ನೇ ವರ್ಷದ ಭರತಮುನಿ ಜಯಂತ್ಯುತ್ಸವವನ್ನು ಇದೇ ಅ. 26ರಂದು ನಗರದ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿದುಷಿ ವೀಣಾ ಮುರಳೀಧರ ಸಾಮಗ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು‌ ಉದ್ಘಾಟಿಸಲಿದ್ದಾರೆ. ಕಿರಿಯ ಯತಿಗಳಾದ ಸುಶೀಂಧ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ ಎಂದರು.ಈ ಸಂದರ್ಭದಲ್ಲಿ…

Read More

ಮಂಗಳೂರಿನ ಎಸ್‌ಸಿಎಸ್ ಆಸ್ಪತ್ರೆಯ 38 ವರ್ಷಗಳ ಶ್ರೇಷ್ಠ ನಿಸ್ವಾರ್ಥ ಸೇವೆಯ ಸಂಭ್ರಮಾಚರಣೆ….. !

ಮಂಗಳೂರು: ಎಸ್‌ಸಿಎಸ್ ಆಸ್ಪತ್ರೆ, ಮಂಗಳೂರು ಇದರ 38 ವರ್ಷಗಳ ಶ್ರೇಷ್ಠ ನಿಸ್ವಾರ್ಥ ಸೇವೆಯ ಸಂಭ್ರಮಾಚರಣೆ ಕಾರ್ಯಕ್ರಮ ಮತ್ತು ನೂತನವಾಗಿ ನಿರ್ಮಾಣಗೊಂಡ ಫುಜಿಫಿಲ್ಮ್ ಜಪಾನ್‌ನ 128 ಸ್ಪ್ಲೆಸ್ ಕಾರ್ಡಿಯಕ್ ಸಿಟಿ ಸ್ಕ್ಯಾನ್ ನೊಂದಿಗೆ ಆಧುನಿಕ ರೇಡಿಯಾಲಜಿ ವಿಭಾಗ ಮತ್ತು ಎನ್‌ಎಬಿಎಲ್ ಮಾನ್ಯತೆ ಪಡೆದ ಪ್ರಯೋಗಾಲಯವು ಇಂದು ಲೋಕಾರ್ಪಣೆಗೊಂಡಿತ್ತು . ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ . ಬ್ರಿಜೇಶ್ ಚೌಟ ಮಾತನಾಡಿ , ಕಳೆದ 38 ವರ್ಷಗಳಿಂದ ಎಸ್‌ಸಿಎಸ್ ಆಸ್ಪತ್ರೆಯು ಜನ…

Read More

ಮಲ್ಪೆ ಬಂದರಿನಲ್ಲಿ ಕಾಲುಜಾರಿ ನೀರಿಗೆ ಬಿದ್ದ ಯುವಕನ ಪ್ರಾಣ ರಕ್ಷೆ…..!

ಉಡುಪಿ: ಮಲ್ಪೆ ಬಂದರಿನಲ್ಲಿ ಕಾಲುಜಾರಿ ನೀರಿಗೆ ಬಿದ್ದ ಯುವಕನನ್ನು ರಕ್ಷಿಸಲಾಗಿದೆ. ಇಲ್ಲಿ ಬೋಟುಗಳನ್ನು ಲಂಗರು ಹಾಕುವ ಪ್ರದೇಶದಲ್ಲಿ, ಈ ದುರ್ಘಟನೆ ಸಂಭವಿಸಿತ್ತು. ಎರಡು ಬೋಟುಗಳ ನಡುವಿನ ಇಕ್ಕಟ್ಟಿನಲ್ಲಿ ಯುವಕನೊಬ್ಬ ಹಿನ್ನೀರು ಪ್ರದೇಶದಲ್ಲಿ ಕುಸಿದು ಬಿದ್ದಿದ್ದ. ಅಪಾರ ಪ್ರಮಾಣದಲ್ಲಿ ಹೂಳು ತುಂಬಿರುವ ಈ ಪ್ರದೇಶದಲ್ಲಿ ಒಂದು ಬಾರಿ ನೀರಿಗೆ ಬಿದ್ದರೆ ಬದುಕಿ ಬರುವುದೇ ಕಷ್ಟ. ಯುವಕ ಕಾಲು ಜಾರಿ ಬೀಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಈಜುಪಟು ಈಶ್ವರ ಮಲ್ಪೆ, ಹರಸಹಸಪಟ್ಟು ಯುವಕನನ್ನು ಮೇಲಕ್ಕೆತ್ತಿದ್ದಾರೆ. ಅಪಾಯಕಾರಿ ಹೂಳಿನಲ್ಲಿ ಹೂತು ಹೋದರೆ ಮತ್ತೆ…

Read More

ಬೈಕ್ ಗೆ ಅಡ್ಡ ಬಂದ ಚಿರತೆಯ ದುರ್ಮರಣ….!

ಉಡುಪಿ: ಚಿರತೆಯೊಂದು ಚಲಿಸುತ್ತಿದ್ದ ಬೈಕ್​ಗೆ ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು, ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ ನಲ್ಲಿ ಈ ಘಟನೆ ಸಂಭವಿಸಿದೆ.ಗಂಭೀರ ಗಾಯಗೊಂಡ ಬೈಕ್ ಸವಾರ ನಂಚಾರ್ ನಿವಾಸಿ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರ…

Read More
error: Content is protected !!