ದೀಪಾವಳಿ ನೇಮೋತ್ಸವ ಸಂಪನ್ನ.

ಕಾಸರಗೋಡು : ಕಾಸರಗೋಡು ಕೋಟೆ ಭಾಗಿಲಿನಲ್ಲಿರುವ, ಪಳ್ಳದ ಕೊಟ್ಯ ಶ್ರೀ ಧೂಮಾವತಿ, “ದೀಪಾವಳಿ ನೇಮೋತ್ಸವ “ನಾಗರಕಟ್ಟೆಯ, ಕಾಸರಗೋಡು ಕೋಟೆ ಬಾಗಿಲಿನಲ್ಲಿ ಸಮಸ್ತ ಜನ ಸಮುದಾಯದ ಓಗ್ಗೋಡುವಿಕೆಯಲ್ಲಿ ಸಂಪನ್ನವಾಯಿತು. ಪಳ್ಳದ ಕೊಟ್ಯ ತರವಾಡಿನಿಂದ ಬಂದ ಬಂಡಾರ ಮೆರವಣಿಗೆ, ಗುಳಿಗನ ಕೋಲ, 20.10.2025,ರಂದು ನಡೆದ ಧೂಮಾವತಿ ರಾಜನ್ ದೈವ ಕೋಲ, ಊರವರ ಸಹಕಾರದಲ್ಲಿ, ಕಾಸರಗೋಡು ಕೋಟೆ ನಾಯಕರ ಮನೆ ವಂಶಸ್ತರ ನೇತೃತ್ವದಲ್ಲಿ ವಿಜೃಂಭಣೆ ಯಿಂದ ನಡೆಯಿತು. ಉತ್ಸವ ಸಮಿತಿ ಸಹಕರಿಸಿದ ಸಕಲರೀಗೆ ಧನ್ಯವಾದ ಸಮರ್ಪಸಿದೆ.

Read More

ಪುತ್ತೂರು: ಜೇನುನೊಣ ದಾಳಿ- ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿ 5 ಲಕ್ಷ ಪರಿಹಾರ ಘೋಷಣೆ

ಪುತ್ತೂರು, ಅ. 22 : ಸೇಡಿಯಾಪು ಬಳಿ ಜೇನುನೊಣಗಳ ದಾಳಿಯಿಂದ ಸಾವನ್ನಪ್ಪಿದ ವಿದ್ಯಾರ್ಥಿಯ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸೋಮವಾರ ನಡೆದ ಅಶೋಕ ಜನಮನ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವ ಅಶೋಕ್ ರೈ ಅವರು ಘಟನೆಯನ್ನು ತಮ್ಮ ಗಮನಕ್ಕೆ ತಂದ ನಂತರ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದರು. ತೆಂಕಿಲಾದ ವಿವೇಕಾನಂದ ಪ್ರಾಥಮಿಕ…

Read More

ಕೃಷ್ಣ ನಗರಿಯಲ್ಲಿ ದೀಪಾವಳಿ ಸಂಭ್ರಮ: ಶ್ರೀಕೃಷ್ಣ ಮಠದಲ್ಲಿ ಬಲೀಂದ್ರ ಪೂಜೆ, ಲಕ್ಷ್ಮೀ ಪೂಜೆ ಸಂಪನ್ನ .

ಉಡುಪಿ:ದೇವಾಲಯಗಳ ನಗರಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಪ್ರಯುಕ್ತ ಸೋಮವಾರ ರಾತ್ರಿ ಸಂಭ್ರಮದ ಬಲೀಂದ್ರ ಪೂಜೆ ನಡೆಯಿತು. ತುಳುನಾಡಿನಲ್ಲಿ ಬಲೀಂದ್ರ ಪೂಜೆಗೆ ವಿಶೇಷ ಮಹತ್ವವಿದೆ. ಈ ಭಾಗವನ್ನು ಆಳಿದ ಅರಸ ಬಲೀಂದ್ರನಿಗೆ ದೀಪಾವಳಿಯ ವೇಳೆ ಸ್ವಾಗತ ಕೋರಿ ಆತಿಥ್ಯ ನಡೆಸುವುದು ಇಲ್ಲಿನ ಪದ್ಧತಿ. ವರ್ಷಕ್ಕೊಮ್ಮೆ ಅರಸನನ್ನು ಬರಮಾಡಿಕೊಂಡು ಗೌರವಿಸುವುದು ಸಂಪ್ರದಾಯ. ಈ ಆಚರಣೆಯನ್ನು ಬಲೀಂದ್ರ ಪೂಜೆ ಎಂದು ಕರೆಯಲಾಗುತ್ತದೆ. ಭತ್ತದ ಗದ್ದೆಗಳಲ್ಲಿ ದೀಪವಿಟ್ಟು ಬಲೀಂದ್ರನನ್ನು ಕೂಗಿ ‌ಕರೆಯಲಾಗುತ್ತದೆ. ಕೃಷಿ ಸಂಸ್ಕೃತಿಯೊಂದಿಗೆ ಬಲೀಂದ್ರ ಪೂಜೆ ತಳಕು ಹಾಕಿಕೊಂಡಿರುವುದರಿಂದ ಇವತ್ತಿಗೂ…

Read More

ಅಕ್ಟೋಬರ್ 25 ರಂದು ದುಬೈನಲ್ಲಿ ‘ದುಬೈ ಗಡಿನಾಡ ಉತ್ಸವ’ .ಗಡಿನಾಡ ರತ್ನ ಪ್ರಶಸ್ತಿ ಪ್ರದಾನ, ಸಾಧಕರಿಗೆ ಮತ್ತು ಸಾಧಕ ಸಂಸ್ಥೆಗೆ ಗೌರವ ಸನ್ಮಾನ .

ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದೆ.ಸಂಜೆ ನಾಲ್ಕು ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ,ಗಾಯಕ ಗಾಯಕಿಯರಿಂದ ಸಂಗೀತ ಸುಧೆ,ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ತಂಡದವರಿಂದ…

Read More

ಮತ್ತೆ ಹಿಂಗಾರು ಮಳೆ ಆರ್ಭಟ

ರಾಜ್ಯದಲ್ಲಿ ಹಿಂಗಾರು ಮಳೆ ಚುರುಕಾದ ಹಿನ್ನೆಲೆ ಮುಂದಿನ 1 ವಾರ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಸೈಕ್ಲೋನ್ ಆಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವ ಇದೆ. ಅಕ್ಟೋಬರ್ 22ರಿಂದ 27ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಭಾರಿ ಮಳೆಯಾಗುವ ಸಂಭವ…

Read More

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಗಾಡಿಯನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿ ಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ…

Read More

ಅಭಿವೃದ್ಧಿ ಪ್ಯಾಕೇಜ್ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ – ಮಂಜೇಶ್ವರ ಸಾರ್ವಜನಿಕ ಆರೋಗ್ಯ ಕೇಂದ್ರ,ಆಧುನಿಕ ಕಟ್ಟಡದ ಶಿಲಾನ್ಯಾಸ,NHM ನಿಧಿಯಿಂದ ಔಷಧಾಲಯ ಮತ್ತು ವೈಟಿಂಗ್ ಏರಿಯಾ ಉದ್ಘಾಟನೆ

ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಮಂಜೇಶ್ವರ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕಾಗಿ ನಿರ್ಮಿಸುವ ಆಧುನಿಕ ಕಟ್ಟಡದ ಶಿಲಾನ್ಯಾಸ ಹಾಗೂ NHM ನಿಧಿಯಿಂದ ನಿರ್ಮಿಸಲಾದ ಔಷಧಾಲಯ ಮತ್ತು ವೈಟಿಂಗ್ ಏರಿಯಾವನ್ನು ಗೌರವಾನ್ವಿತ ಆರೋಗ್ಯ ಸಚಿವರಾದ ಶ್ರೀಮತಿ ವೀಣಾ ಜಾರ್ಜ್ ಆನ್ ಮಂಗಳವಾರ ಬೆಳಿಗ್ಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರದ ಗೌರವಾನ್ವಿತ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ವಹಿಸಿದರು.. ಈ ಕಾರ್ಯಕ್ರಮದಲ್ಲಿ ತ್ರಿಸ್ಥರ ಪಂಚಾಯತ್ ಪ್ರತಿನಿಧಿಗಳು, ಆರೋಗ್ಯ ಕಾರ್ಯಕರ್ತರು…

Read More

ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ದಿಂದ ಕ್ಲಸ್ಟರ್ ಬಹಿಷ್ಕಾರ ಹಾಗೂ ಮನವಿ ಸಲ್ಲಿಕೆ

ಉಪ್ಪಳ: ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಾಂವಿಧಾನಿಕ ಮತ್ತು ಭಾಷಾ ಹಕ್ಕುಗಳನ್ನು ಮರಳಿ ಸ್ಥಾಪಿಸುವ ಉದ್ದೇಶದಿಂದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನೇತೃತ್ವದಲ್ಲಿ ಕ್ಲಸ್ಟರ್ ಬಹಿಷ್ಕಾರ ನಡೆಸಲಾಯಿತು. ತದನಂತರ ಮಂಜೇಶ್ವರ ಉಪಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಪಜಿಲ್ಲಾ ಕಚೇರಿಗೆ ಭೇಟಿ ನೀಡಿ, ಶಿಕ್ಷಕರ ಕೈ ಪಿಡಿಗಳನ್ನು ಒದಗಿಸಬೇಕು, ಶಾಸ್ತ್ರೋತ್ಸವ ಮತ್ತು ಕಲೋತ್ಸವಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೂ ಸಮಾನ ಅವಕಾಶಗಳನ್ನು ನೀಡಬೇಕು, ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಸಂರಕ್ಷಣೆ ಮಾಡಬೇಕು, ದ್ವಿ…

Read More

ಅಕ್ಟೋಬರ್ 24 ಕ್ಕೆ ಬೋಳೂರಿನ ನೂತನ ಶ್ರೀ ಮಹಾಮಾಯಿ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ …. !

ಇತಿಹಾಸ ಪ್ರಸಿದ್ಧ ಬೋಳೂರಿನ ಶ್ರೀ ವೀರಭದ್ರ ಮಹಾಮಾಯಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಆಶ್ರಯದಲ್ಲಿ ನೂತನ ಶ್ರೀ ಮಹಾಮಾಯಿ ದೇವರ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭವು ಅಕ್ಟೋಬರ್ 24 ರಂದು ಪೂರ್ವಾಹ್ನ 8.04 ರಿಂದ ಶುರುವಾಗಲಿದೆ ಎಂದು ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಕಲ್ಬಾವಿ ತಿಳಿಸಿದರು . ಅವರು ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಅಂದಾಜು ೩. ೯೨ ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣ ಕಾರ್ಯನಡೆಯುವ ಈ…

Read More

ಮಿಡಲ್ ಕ್ಲಾಸ್ ಫ್ಯಾಮಿಲಿ’ ಅಕ್ಟೋಬರ್ 25ರಿಂದ ಯೂಟ್ಯೂಬ್ ನಲ್ಲಿ ಬಿಡುಗಡೆ .

ಮಂಗಳೂರು:ಥಿಯೇಟರ್‌ನಲ್ಲಿ ಬರೋಬ್ಬರಿ 160 ದಿನಗಳ ಕಾಲ ಆರ್ಭಟಿಸಿದ್ದ ತುಳು ಚಿತ್ರ ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಅಕ್ಟೋಬರ್ 25ರಿಂದ ಯೂಟ್ಯೂಬ್ ನಲ್ಲಿ ಉಚಿತವಾಗಿ ವೀಕ್ಷಕರಿಗೆ ದೊರೆಯುವ ಮೂಲಕ ತುಳು ಚಿತ್ರಪ್ರೇಮಿಗಳಿಗೆ ಮನರಂಜಿಸಲು ಸಜ್ಜಾಗಿದೆ ಎಂದು ಚಿತ್ರ ತಂಡ ಘೋಷಿಸಿದೆ. ಈ ಕುರಿತಂತೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ಮಾಪಕ ಆನಂದ್ ಎನ್. ಕುಂಪಲ, ನಿರ್ದೇಶಕ ರಾಹುಲ್ ಅಮೀನ್, ನಾಯಕ ನಟ ವಿನಿತ್ ಕುಮಾರ್ ಮತ್ತು ನಾಯಕ ನಟಿ ಸಮತಾ ಅಮೀನ್ 2025ರ ಜನವರಿ 31ರಂದು ತುಳುನಾಡಿನಾದ್ಯಂತ ಅದ್ಧೂರಿಯಾಗಿ…

Read More
error: Content is protected !!