ಮಂಗಳೂರು: ‘ಬುರುಡೆ ಗ್ಯಾಂಗ್’ ಪ್ರಹಸನ ವಿಚಾರ—ಕಲಾವಿದರ ವಿರುದ್ಧ ನಿಂದನೆ; ಕ್ರಮಕ್ಕೆ ಆಗ್ರಹ
ಮಂಗಳೂರು: ಸ್ಥಳೀಯ ವಾಹಿನಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಕಲಾವಿದರಿಗೆ ಅವಾಚ್ಯವಾಗಿ ನಿಂದನೆ ಮಾಡಿದ ಪ್ರಕರಣದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯಕ್ಷಗಾನ ಕಲಾವಿದರು ಒತ್ತಾಯಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರ ರೈ ಮಂದಾರ, ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ದೂರವಾಣಿ ಮೂಲಕ ಅವಾಚ್ಯವಾಗಿ ನಿಂದಿಸಿರುವುದಾಗಿ ಆರೋಪಿಸಿದರು. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಮಹಿಳಾ ಠಾಣೆಗೆ ಈಗಾಗಲೇ ದೂರು ಸಲ್ಲಿಸಲಾಗಿದ್ದು, ಸಂಬಂಧಪಟ್ಟವರ…
