ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ “ಪೋಷಕರಿಗಾಗಿ ವಿಶೇಷ ಕಾರ್ಯಕ್ರಮ”
ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರಾಗಿರುವ ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪೋಷಕರ ಪಾತ್ರವನ್ನು ಒತ್ತಿ ಹಿಡಿಯುವ ಉದ್ದೇಶದಿಂದ “ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದಲ್ಲಿ ಶಾಲೆಯು “ಪೋಷಕರಿಗಾಗಿ ವಿಶೇಷ ಕಾರ್ಯಕ್ರಮ”ವನ್ನು ಶಾಲೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಶಾಲೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಂಜತ್ತೂರು ದಾರುಸ್ಸಲಾಂ ಮಸೀದಿಯ ಖತೀಬ್ ಮೊಹಮ್ಮದಲಿ ಸಲಫಿ ಅವರು ಮುಖ್ಯ ಉಪನ್ಯಾಸಕವಾಗಿ…