ಆತ್ಮಹತ್ಯೆಗೆತ್ನಿಸಿದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಸ್ಪತ್ರೆಗೆ ಸಾಗಿಸುತ್ತಿರುವ ಮಧ್ಯೆ ಅಪಘಾತಕ್ಕೊಳಗಾಗಿ ಮ್ಯತ್ಯು.

ಕಾಸರಗೋಡು :ಬೇತೂರು ಪಾರ ಸಮೀಪದಲ್ಲಿ ಬುಧವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳನ್ನು ರಕ್ಷಿಸಲು ಮನೆಯಿಂದ ಆಸ್ಪತ್ರೆಗೆ ಸಾಗಿಸುತ್ತಿರುವ ಮಧ್ಯೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಆಕೆ ಸಾವನ್ನಪ್ಪಿದ್ದಾಳೆ.ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಬೇಡಡ್ಕ ಬೇತೂರುಪಾರ ತಚ್ಚಾ‌ರ್ ಕುಂಡುವಿನ ಬಾಬು ಎಂಬವರ ಪುತ್ರಿ ಮಹಿಮಾ (19) ಸಾವನ್ನಪ್ಪಿದ ದುರ್ದೈವಿ. ಬುಧವಾರ ಬೆಳಗ್ಗೆ ಮಹಿಮಾ ಮನೆಯ ಮಲಗುವ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಮನೆಯವರು ತಕ್ಷಣ ನೇಣು ಹಗ್ಗದಿಂದ ಕೆಳಕ್ಕಿಳಿಸಿ ಕಾರಿನಲ್ಲಿ ಆಸ್ಪತ್ರೆಗೆ ಕಾಸರಗೋಡಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ….

Read More

ತಪ್ಪು ಸಂದೇಶದ ಆರೋಪ: ಹೋರಾಟಗಾರ ಜಯಂತ್ ಟಿ ವಿರುದ್ಧ ‌ಕೇಸ್.

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಕೇಸ್ ದಾಖಲಾಗಿದೆ. ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯೂಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಹೋರಾಟಗಾರ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಜಯಂತ್ ಟಿ ರವರು ಯೂಟ್ಯೂಬ್‌ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರೂ ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ…

Read More

ಪಿ.ಎ. ತಾಂತ್ರಿಕ ಮಹಾವಿದ್ಯಾಲಯದಲ್ಲಿ “ಐಇಇಇ ಡಿಸ್ಕವರ್ 25” ಅಂತರಾಷ್ಟ್ರೀಯ ಸಮ್ಮೇಳನ.

ಮಂಗಳೂರು: ಐಇಇಇ ಮಂಗಳೂರು ಉಪವಿಭಾಗದ ವತಿಯಿಂದ 9ನೇ ಅಂತರಾಷ್ಟ್ರೀಯ ಐಇಇಇ ಡಿಸ್ಕವರ್ 25 ಸಮ್ಮೇಳನವು ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿ.ಎಲ್.ಎಸ್.ಐ ಎಲೆಕ್ನಿಕಲ್ ಸರ್ಕ್ಯೂಟ್ಸ್ ಮತ್ತು ರೋಬೋಟ ವಿಷಯದಲ್ಲಿ ಅಕ್ಟೋಬರ್ 17 ಮತ್ತು 18, 2025ರಂದು ಪಿ. ಎ. ತಾಂತ್ರಿಕ ಮಹಾವಿದ್ಯಾಲಯ ನಡುಪದವು ಮಂಗಳೂರು ಇಲ್ಲಿ ನಡೆಯಲಿದೆ ಎಂದು ಐಇಇಇ ಮಂಗಳೂರು ಉಪವಿಭಾಗ ಇದರ ಜಂಟಿ ಕಾರ್ಯದರ್ಶಿಯಾದ ಡಾ. ಹರಿವಿನೋದ್ ಎನ್ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಇದು ಸಂಶೋಧಕರು,…

Read More

‘ಮಹಾಭಾರತ ಧಾರಾವಾಹಿ ಖ್ಯಾತಿಯ ಕರ್ಣನ ಪಾತ್ರಧಾರಿ ನಟ ಪಂಕಜ್ ಧೀರ್ ಇನಿಲ್ಲ

ಮುಂಬೈ: ಬಿ.ಆರ್. ಚೋಪ್ರಾ ಅವರ ‘ಮಹಾಭಾರತ’ ಧಾರಾವಾಹಿಯಲ್ಲಿ ಯೋಧ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15 ರಂದು ನಿಧನರಾದರು. ಅವರ ಹಳೆಯ ಸ್ನೇಹಿತ, ಸಹೋದ್ಯೋಗಿ ಮತ್ತು ಸಿನ್ಮಾ ಸದಸ್ಯ ಅಮಿತ್ ಬೆಕ್ಸ್ ಈ ಸುದ್ದಿಯನ್ನು ದೃಢಪಡಿಸಿದರು.ಮೂಲಗಳ ಪ್ರಕಾರ, ಪಂಕಜ್ ಕೆಲವು ಸಮಯದಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಎಂದು ವರದಿಯಾಗಿದೆ. ಕೆಲವು ತಿಂಗಳ ಹಿಂದೆ ಆ ಕಾಯಿಲೆ ಮತ್ತೆ ಕಾಣಿಸಿಕೊಂಡಿತು, ಇದರಿಂದಾಗಿ ಅವರು ತೀವು ಅಸ್ವಸ್ಥರಾದರು. ಅವರು ಪ್ರಮುಖ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು.

Read More

ಸಿಲ್ವ‌ರ್ ಜುಬಿಲಿ ಸಂಭ್ರಮದಲ್ಲಿರುವ ಪೇಸ್ ಎಜುಕೇಶನ್ ಗ್ರೂಪ್‌ನಿಂದ ‘ಪೇಸ್ ಸಿಲ್ವಿಯೋರಾ 2025’ ಉತ್ಸವ ಆರಂಭ.

ಮಂಗಳೂರು: ಶಿಕ್ಷಣ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸಿ 25 ವರ್ಷಗಳನ್ನು ಪೂರೈಸಿದ ಪೇಸ್ಎಜುಕೇಶನ್ ಗ್ರೂಪ್ ತನ್ನ ಸಿಲ್ವರ್ ಜುಬಿಲಿ ಸಂಭ್ರಮದ ಅಂಗವಾಗಿ ‘ಪೇಸ್ ಸಿಲ್ವಿಯೋರಾ 2025’ ಉತ್ಸವವನ್ನು ಘೋಷಿಸಿದೆ. “ಒಂದು ಪರಂಪರೆಯನ್ನು ಗೌರವಿಸುವುದು, ಭವಿಷ್ಯವನ್ನು ಬೆಳಗಿಸುವುದು” ಎಂಬ ಥೀಮ್‌ ನಡಿ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಮೂರು ತಿಂಗಳ ಕಾಲ ಉತ್ಸವ ಜರುಗಲಿದ್ದು, ಶೈಕ್ಷಣಿಕ, ಸಾಂಸ್ಕೃತಿಕ, ಆರೋಗ್ಯ, ಸಾಮಾಜಿಕ ಹಾಗೂ ಕ್ರೀಡಾ ಚಟುವಟಿಕೆಗಳು ಆಯೋಜನೆಯಾಗಲಿವೆ. ಅಂತಿಮ ಹಂತದ ಸಮಾರಂಭ ಡಿಸೆಂಬರ್ ಕೊನೆಯಲ್ಲಿ ಮಂಗಳೂರಿನ ವೇಸ್ ನೊಲೆಡ್ಜ್ ಸಿಟಿ…

Read More

ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.ಬಂಟ್ವಾಳ ಹೊಸ್ಮಾರು ನಿವಾಸಿ ಗೋಪಾಲ ಎಂಬವರ ಪುತ್ರ ಧನುಷ್ (23) ಮೃತಪಟ್ಟ ಯುವಕನಾಗಿದ್ಧಾನೆ. ಸರ್ವೆ ಇಲಾಖೆಯ ಗುತ್ತಿಗೆ ಆಧಾರದ ಉದ್ಯೋಗಿಯಾಗಿರುವ ಈತ ಮಂಗಳೂರು ಕಡೆಯಿಂದ ಬಂಟ್ವಾಳ ಹೊಸ್ಮಾರು ಮನೆಗೆ ಬರುವ ಸಂಜೆ ವೇಳೆ ತುಂಬೆ ಸಮೀತ ರಾಮಲಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಕೂಡಲೇ ಆಸ್ಪತ್ರೆಗೆ…

Read More

ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್, ಸಿಡಬ್ಲ್ಯುಎಫ್‌ಐ -ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ನಡೆಯಿತು.ಬಳಿಕ ನಡೆದ ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸಿದ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಅವರು ಲಕ್ಷಾಂತರ ಜನತೆಗೆ ಸಂಬಂಧಿಸಿ ಆಳುವ ಪಕ್ಷ…

Read More

ಹಾಸನಾಂಭ ಜಾತ್ರೆಯಲ್ಲಿ VIP ವ್ಯವಸ್ಥೆ ಇಲ್ಲದ ಸಾಮಾನ್ಯ ದರ್ಶನಕ್ಕೆ ಆದ್ಯತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದು

ಹಾಸನ: ಹಾಸನಾಂಭ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.ಹಾಸನಾಂಭ ದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ನಾನು ಕಳೆದ ವರ್ಷವೂ ದರ್ಶನ ಪಡೆದಿದ್ದೆ. ಈ ವರ್ಷವೂ ದರ್ಶನ‌ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ,…

Read More

ಕುಂದಾಪುರ: ಕ್ರೇನ್ ಹರಿದು ಯುವಕ ಮೃತ್ಯು

ಉಡುಪಿ: ಕ್ರೇನ್ ಹರಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದೆ. ಮೃತನನ್ನು ತೆಕ್ಕಟ್ಟೆ ಗ್ರಾಮದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ. ಹೆದ್ದಾರಿಯಲ್ಲಿ ಯೂಟರ್ನ್ ತೆಗೆದುಕೊಳ್ಳುವ ಸ್ಥಳದಲ್ಲಿ ಖಾಸಗಿ ಬಸ್ ಪ್ರಯಾಣಿಕರನ್ನ ಹತ್ತಿಸಿ ಇಳಿಸುತ್ತಿತ್ತು. ಈ ವೇಳೆ ಬಸ್ ಪಕ್ಕದಲ್ಲಿ ದ್ವಿಚಕ್ರ ಸವಾರ ತಿರುವು ತೆಗೆದುಕೊಳ್ಳಲು ಮುಂದಾಗಿದ್ದಾನೆ.ಆಗ ಏಕಾಏಕಿ ಬಸ್ ಚಲಿಸಿದ ಪರಿಣಾಮ ಆಯತಪ್ಪಿ ದ್ವಿಚಕ್ರ ಸವಾರ ರಸ್ತೆಗೆ ಬಿದ್ದಿದ್ದಾನೆ. ಸವಾರ ಬೀಳುತ್ತಿದ್ದಂತೆ ಆತನ ಮೇಲೆ ಕ್ರೇನ್…

Read More

ಬೇರೆ ಎಲ್ಲಾ ಕೊಡುಗೆಗಳಿಂದಲೂ ನನಗೆ ತೃಪ್ತಿ ತಂದ ಕಾರ್ಯ ಮದ್ಯವರ್ಜನಾ ಶಿಬಿರಗಳು. ಇದರಿಂದ ಲಕ್ಷಾಂತರ ಮಂದಿ ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಇದು ಸಮಾಜಕ್ಕೆ ಪ್ರೇರಣೆ ನೀಡುವ ಕೆಲಸವಾಗಿದೆ- ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪುತ್ತೂರಿನಲ್ಲಿ ಹೇಳಿಕೆ

ಪುತ್ತೂರು; ಪಂಚೇಂದ್ರಿಯನ್ನು ಹತೋಟಿಯಲ್ಲಿ ಇಡುವ ಕಾರ್ಯ ಮಾಡಬೇಕಾಗಿದ್ದು, ತರಬೇತಿ ಮೂಲಕ ಇದನ್ನು ಯಶಸ್ವಿಯಾಗಿಸಬಹುದು. ಮದ್ಯ ವ್ಯಸನ ಮುಕ್ತವಾಗುವುದರಿಂದ ಸಂಸಾರಕ್ಕೆ ನೆಮ್ಮದಿ ನೀಡುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು….

Read More
error: Content is protected !!