ದಕ್ಷಿಣ ಭಾರತದ ನಾಗರಾಧನೆಯ ಪುಣ್ಯ ಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹರಿದು ಬಂದ ಜನ ಸಾಗರ.
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಸಾಲು ಸಾಲಾಗಿ ಕ್ಷೇತ್ರಕ್ಕೆ ಬರುವ ಭಕ್ತರ ದಂಡೆ ಕಂಡು ಬಂತು.ರಾಜ್ಯದಲ್ಲಿ ಜಾತಿ ಸಮೀಕ್ಷೆ ಈ ಸಂದರ್ಭದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಮುಂದುವರಿದ ಕಾರಣ ಹಾಗೂ ಎರಡನೇ ಶನಿವಾರ ಆದ್ದರಿಂದ ನಿನ್ನೆ ಕ್ಷೇತ್ರದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ದೂರ ದೂರಗಳಿಂದ ಬಂದು ಈ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನದ ಭೋಜನಕ್ಕಾಗಿ ಆದಿ ಸುಬ್ರಹ್ಮಣ್ಯದಲ್ಲಿ ಕೂಡ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು. ಭಕ್ತರ ವಾಹನಗಳನ್ನು ಪಾರ್ಕಿಂಗ್ ಸ್ಥಳಗಳಿಲ್ಲದೆ ಎಲ್ಲೆಡೆ ಜಾಗ…