ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ.

ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಗುರುವಾರ ಬಾಂಬ್ ಬೆದರಿಕೆ ಬಂದಿದೆ.ವಿಮಾನ ನಿಲ್ದಾಣದ ಪ್ರಾಧಿಕಾರವು ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ಮಾಹಿತಿ ನೀಡಿತು, ನಂತರ ಆವರಣದಾದ್ಯಂತ ಕಟ್ಟುನಿಟ್ಟಿನ ತಪಾಸಣೆ ಮತ್ತು ತನಿಖೆ ನಡೆಸಲಾಯಿತು. ವಿಮಾನ ನಿಲ್ದಾಣದ ಒಳಗೆ ಬಾಂಬ್ ಇಡಲಾಗಿದೆ ಎಂದು ಮಧುರೈ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಬಂದಿತ್ತು. ಇದರ ನಂತರ, ವಿಮಾನ ನಿಲ್ದಾಣದ ನಿರ್ದೇಶಕ ಮುತ್ತುಕುಮಾರ್ ಅವರು ಮಧುರೈ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರಿಗೆ ಬೆದರಿಕೆ ಬಗ್ಗೆ ಮಾಹಿತಿ ನೀಡಿದರು ಎಂದು ಮಧುರೈ ವಿಮಾನ ನಿಲ್ದಾಣದ…

Read More

ರಾಜ್ಯ ಮಟ್ಟದ ‘ ಸ್ವಿಮ್ ಗಾಲ 2025 ‘ ಈಜು ಸ್ಪರ್ಧೆ ಅ. 12 ರಂದು ಮಂಗಳೂರಿನಲ್ಲಿ

ಮಂಗಳೂರು: ರಾಜ್ಯದ ಪ್ರತಿಷ್ಠಿತ ಈಜು ಕ್ಲಬ್‌ಗಳಲ್ಲಿ ಒಂದಾದ ಮಂಗಳ ಸ್ವಿಮ್ಮಿಂಗ್ ಕ್ಲಬ್ ತನ್ನ 35 ವರ್ಷ ಪೂರೈಸಿದ ಹಿನ್ನಲೆಯಲ್ಲಿ ರಾಜ್ಯಮಟ್ಟದ ಮೆಡಲಿಸ್ಟ್ ಹಾಗೂ ನಾನ್ ಮೆಡಲಿಸ್ಟ್ ‘ ಸ್ವಿಮ್ ಗಾಲ 2025 ‘ ಈಜು ಸ್ಪರ್ಧೆಯನ್ನು ಮಂಗಳೂರಿನ ಕಾರ್ಪೋರೇಷನ್ ಈಜುಕೊಳದಲ್ಲಿ ಅಕ್ಟೋಬರ್ 12 ರಂದು , ಬೆಳಿಗ್ಗೆ 8.00ರಿಂದ – ರಾತ್ರಿ 8.00ರ ತನಕ ನಡೆಯಲಿದೆ ಎಂದು ಮಂಗಳೂರಿನ ಮಂಗಳಾ ಈಜು ಸಂಸ್ಥೆಯ ಅಧ್ಯಕ್ಷರಾದ ಪ್ರಮುಖ್ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ…

Read More

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶುದ್ಧ ಎಳ್ಳೆಣ್ಣೆಯ ಅಭಿಷೇಕಕ್ಕೆ ಸಿದ್ಧತೆ.

ದಕ್ಷಿಣಕನ್ನಡ: ಇತಿಹಾಸ ಪ್ರಸಿದ್ಧ ಮಹತೋಭಾರ ಮಹಲಿಂಗೇಶ್ವರ ದೇವಸ್ಥಾನದಲ್ಲಿ ಇತಿಹಾಸದಲ್ಲೇ ಮೊದಲಬಾರಿಗೆ ದೇವರ ವಿಗ್ರಹಕ್ಕೆ ಎಳ್ಳೆಣ್ಣೆ ಅಭಿಷೇಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಹಿಂದೆ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಈ ನಿರ್ಧಾರಕ್ಕೆ ಬರಲಾಗಿದೆ. ಮೋದಕ ಹೋಮ, ತುಪ್ಪದೀಪ, ಶುದ್ದ ಎಣ್ಣೆ, ಗಾಯತ್ರಿ ಪೂಜೆ ಸಹಿತ ದೇವರಿಗೆ ಪ್ರೀತ್ಯರ್ಥವಾಗಿ ಭಕ್ತರ ಬೇಡಿಕೆಯಂತೆ ಹಲವು ಸೇವೆಗಳನ್ನು ನೆರವೇರಿಸಲು ಕಾರಣಕರ್ತರಾದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ…

Read More

ಉಳ್ಳಾಲ- ಮೀನು ಆಹಾರ ತಯಾರಿಕಾ ಘಟಕದ ಗೋಡೌನ್ ಗೆ ಬೆಂಕಿ ತಗಲಿ ಅಪಾರ ನಷ್ಟ .

ಮಂಗಳೂರು: ಉಳ್ಳಾಲ- ಮೀನು ಆಹಾರ ತಯಾರಿಕಾ ಘಟಕದ ಗೋಡೌನ್ ಗೆ ಬೆಂಕಿ ತಗಲಿ ಅಪಾರ ನಷ್ಟ ಸಂಭವಿಸಿದೆ.ಮೀನಿನ ಆಹಾರ ತಯಾರಿ ಮತ್ತು ಸಂಸ್ಕರಣಾ ಘಟಕದ ಗೋಡೌನ್ ಗೆ ಬೆಂಕಿ ಬಿದ್ದ ಘಟನೆ ಉಳ್ಳಾಲದ ಕೋಟೆಪುರದಲ್ಲಿ ಸಂಭವಿಸಿದೆ. ಈ ಪರಿಸರದಲ್ಲಿ ಹಲವು ಮೀನಿನ ಪ್ಯಾಕ್ಟರಿಗಳಿದ್ದರೂ ಯಾವುದೇ ರೀತಿಯ ಬೆಂಕಿ ಅವಘಡ ತಪ್ಪಿಸುವ ಸುರಕ್ಷತಾ ವ್ಯವಸ್ಥೆ ಇಲ್ಲ ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಢಕ್ಕೆ ಒಳಗಾದ ಎಂಎಪಿ ಫಿಶ್ ಫುಡ್ ಗೋದಾಮು ಖಾದರ್ ಎಂಬುವರಿಗೆ ಸೇರಿದ್ದು ಎಂದು ಹೇಳಲಾಗಿದ್ದು, ಸಂಜೆ ವೇಳೆ…

Read More

ಕಡಂಬಾರಿನಲ್ಲಿ ಆತ್ಮಹತ್ಯೆ ಪ್ರಕರಣ.ಸ್ಕೂಟರಿನಲ್ಲಿ ಆಗಮಿಸಿದ ಇಬ್ಬರು ಮಹಿಳೆಯರು ಅಧ್ಯಾಪಿಕೆಗೆ ಹಲ್ಲೆ ಮಾಡಿದ ದೃಶ್ಯ ಸಿ ಸಿ ಟಿವಿಯಲ್ಲಿ ಸೆರೆ.

ಮಂಜೇಶ್ವರ : ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಂಬಾರಿನಲ್ಲಿರುವ ಯುವ ಅಧ್ಯಾಪಿಕೆ ಹಾಗೂ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆಯಲ್ಲಿ ನಿಗೂಢತೆ ಹೆಚ್ಚಾಗುತ್ತಿದೆ. ಸ್ಕೂಟರಿನಲ್ಲಿ ಆಗಮಿಸಿದ ಇಬ್ಬರು ಮಹಿಳೆಯರು ಅಧ್ಯಾಪಿಕೆಯನ್ನು ದೂಡಿ ಹಲ್ಲೆಗೈಯುತ್ತಿರುವ ಸಿ ಸಿ ಟಿವಿ ದೃಶ್ಯ ಬೆಳಕಿಗೆ ಬಂದಿರುವುದು ನಿಗೂಢತೆಯನ್ನು ಹೆಚ್ಚಿಸಿದೆ. ಕಡಂಬಾರಿನ ಅಜಿತ್ (35) ಹಾಗೂ ಪತ್ನಿ ಖಾಸಗಿ ಶಾಲೆಯೊಂದರ ಅಧ್ಯಾಪಿಕೆಯಾಗಿರುವ ಶ್ವೇತಾ (27) ಎಂಬಿವರು ಮಂಗಳವಾರದಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ಸ್ಪಂಧಿಸದೆ…

Read More

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ.

ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ. ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ…

Read More

ತಲಪಾಡಿ ಫಾರ್ಮ್‌ನೊಳಗಿನ ಮರದಲ್ಲಿ ಅಸ್ಥಿಪಂಜರ ಪತ್ತೆ .

ಮಂಗಳೂರು: ತಲಪಾಡಿ ಫಾರ್ಮ್‌ನೊಳಗಿನ ಮರದಲ್ಲಿ ಪತ್ತೆಯಾಗಿರುವ ಅಸ್ಥಿಪಂಜರ ಯಾರದ್ದು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್‌ನಲ್ಲಿ ಮಂಗಳವಾರ ಬೆಳಿಗ್ಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ…

Read More

ವಾಹನ ಚೋರನನ್ನು ಬಂಧಿಸಿದ ಪೊಲೀಸರು. ಪಿಕಪ್‌ ವಾಹನ ಮತ್ತು ಬೈಕ್‌ ವಶ .

ಮಂಗಳೂರು: ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನನ್ನು ಬಂಧಿಸಿರುವ ಪೊಲೀಸರು ಪಿಕಪ್‌ ವಾಹನ ಮತ್ತು ಬೈಕ್‌ ವಶಪಡಿಸಿಕೊಂಡಿದ್ದಾರೆ. ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಿಕಪ್‌ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್‌ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್‌ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಕೇರಳದ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್…

Read More

ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರ ದಾಳಿ. ಆರೋಪಿಗಳ ಬಂಧನ.

ಮಂಗಳೂರು: ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ 3 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿ ಮನೆಯನ್ನು ಮುಟ್ಟು ಗೋಲು ಹಾಕಲು ಕ್ರಮ ಕೈಗೊಂಡಿದ್ದಾರೆ. ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ತನ್ನ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿಯನ್ನು ಪಡೆದ ಸುರತ್ಕಲ್ ಪೊಲೀಸ್ ಠಾಣೆ ಪಿಎಸ್‌ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೊಕ್ಕಬೆಟ್ಟುವಿನ…

Read More

ಅ.11ರಂದು ಮಣಿಪಾಲದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ”

ಉಡುಪಿ: ಮಣಿಪಾಲ ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗ, ಕೆಎಂಸಿಯ ವಿದ್ಯಾರ್ಥಿ ಕ್ರೀಡಾ ಸಮಿತಿ ಹಾಗೂ ಎಫ್ಐಟಿವಿಐಬಿ ಎಕ್ಸ್ ಸ್ಫೋರ್ಟ್ಸ್ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ”ವನ್ನು ಇದೇ ಅ.11ರಂದು ಮಣಿಪಾಲ ಮಾಹೆ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗದ ಮುಖ್ಯಸ್ಥೆ ಗೀತಾ ಮಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ 5 ಕಿ.ಮೀ ಜಾಗೃತಿ ಓಟವು ಅ.11ರಂದು ಸಂಜೆ 5ಗಂಟೆಗೆ ಮಣಿಪಾಲ ಮಾಹೆ ಕ್ಯಾಂಪಸ್ ನಲ್ಲಿ…

Read More
error: Content is protected !!