ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಯೇ ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ- ಜಯಕರ ಶೆಟ್ಟಿ ಇಂದ್ರಾಳಿ
ಉಡುಪಿ: ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಶಕ್ತಿ ತುಂಬುವ ಉದ್ದೇಶದಿಂದ ಸಾಮಾಜಿಕ ಕಳಕಳಿಯ ಚಿಂತನೆ ಇಟ್ಟುಕೊಂಡು ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಕಾರ್ಯನಿರ್ವಹಿಸುತ್ತಿದೆ. ಇದು ಸಹಕಾರಿ ಸಂಸ್ಥೆಯ ಪ್ರಗತಿಗೆ ಪೂರಕವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಉಡುಪಿ ಬಡಗುಬೆಟ್ಟು…