ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ದ ಭವ್ಯ ಶೋಭಾಯಾತ್ರೆ.
ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಹಾಗೂ ಭಕ್ತಿ ಭಾವದ ಸಮ್ಮಿಲನದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ದ ಭವ್ಯ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಜೆ ಆರಂಭಗೊಂಡು, ಶುಕ್ರವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಜರಗಿದ ಭವ್ಯ ಶೋಭಾಯಾತ್ರೆಯನ್ನು ಸಹಸ್ರಾರು ಜನರು ಕಣ್ಣುಂಬಿಕೊಂಡರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಗುರುವಾರ ಸಂಜೆ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ…