‘ಎಲ್ಲ ಭಾಷೆಗಳ ಉದ್ದೇಶ ಮನುಕುಲದ ಉದ್ಧಾರ. ಇಲ್ಲಿ ಯಾವುದೇ ಭಾಷೆಯನ್ನು ಸಾಯಲು ಬಿಡಬಾರದು’ – ಡಾ.ಪುರುಷೋತ್ತಮ ಬಿಳಿಮಲೆ
ಮಂಗಳೂರು: ಭಾರತ ಹಲವು ಭಾಷೆಗಳ ರಂಗೋಲಿ. ಎಲ್ಲ ಭಾಷೆಗಳ ಉದ್ದೇಶ ಮನುಕುಲದ ಉದ್ಧಾರ. ಇಲ್ಲಿ ಯಾವುದೇ ಭಾಷೆಯನ್ನು ಸಾಯಲು ಬಿಡಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ- 2025ರ ಅಂಗವಾಗಿ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ ಮಂಗಳವಾರ ಆಯೋಜಿಸಲಾದ 2ನೇ ವರ್ಷದ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಕೆಲವು ಭಾಷೆಗಳು ಪತನಮುಖಿಯಾಗಿವೆ. ಇಂತಹ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಬಹುಭಾಷಾ ಕವಿಗೋಷ್ಠಿ ಪೂರಕ. ಕವಿಗಳು ಹೊಸಲೋಕವನ್ನು…