ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 6ನೇ ಕಾರ್ಯಕ್ರಮ.ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಭಿಯಾನ ಶ್ಲಾಘನೀಯ- ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್.
ಬೇಳ :’ಇಂದಿನ ವೇಗದ ಜಗತ್ತಿಗೆ ಚುಟುಕು ಸಾಹಿತ್ಯದ ಅಗತ್ಯ ಇದೆ. ಇಂತಹಾ ಶಿಬಿರಗಳಲ್ಲಿ ಮಕ್ಕಳು ಆಸಕ್ತಿಯಿಂದ ಭಾಗವಹಿಸಬೇಕು. ಕಾಸರಗೋಡಿನ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಈ ಅಭಿಯಾನ ಯೋಜನೆಯು ಶ್ಲಾಘನೀಯ’ ಎಂದು ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಸಂಚಾಲಕಿ ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್ ಹೇಳಿದರು. ಅವರು ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಡೆದ ಕನ್ನಡ…