ಸೆಪ್ಟೆಂಬರ್ ೨೧ ರಂದು ಸಂಘನಿಕೇತನ ಪ್ರತಾಪ ನಗರದಲ್ಲಿ-“ಯೋಗ ಏಕಾಹ 2025”
ಮಂಗಳೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನವು ಪ್ರತಾಪನಗರದ ಕೇಶವ ಸ್ಮೃತಿ ಸಂವರ್ಧನ ಸಮಿತಿಯೊಂದಿಗೆ ಜಂಟಿಯಾಗಿ ಒಂದು ದಿನದ ಯೋಗಾಸನ ಪ್ರದರ್ಶನದ ಯೋಗೋತ್ಸವ “ಯೋಗ ಏಕಾಹ 2025” ಕಾರ್ಯಕ್ರಮವನ್ನು ಸೆಪ್ಟೆಂಬರ್ ೨೧ ರಂದು ಸಂಘನಿಕೇತನ ಪ್ರತಾಪ ನಗರದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಧನಂಜಯ ಕೆ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 10 ಪ್ರತಿಷ್ಠಿತ ಯೋಗಾಭ್ಯಾಸವನ್ನು ಕಲಿಸುವ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳಲಿದೆ . ಪ್ರತೀ…