ಕಣ್ಣೂರು ವಾರ್ಡ್‌ನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 52 ನೇ ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು ಇಲ್ಲಿಯತನಕ ಇಲ್ಲಿರುವ ದೇವಸ್ಥಾನದವರೆಗೆ ನಾಲ್ಕು ಚಕ್ರದ ವಾಹನಗಳು ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿಯಿದ್ದ ಕಾರಣ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ನಂತರದ ದಿನಗಳಲ್ಲಿ ಶತಾಯಗತಾಯ ಇಲ್ಲಿಗೊಂದು ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲೇಬೇಕೆಂಬ ನಮ್ಮೆಲ್ಲರ ಆಶಯಕ್ಕೆ ಆಸರೆಯಾಗಿ ನಿಂತವರು ಇಲ್ಲಿನ…

Read More

​ಮಂಜೇಶ್ವರ: ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ – ಕುಂಡುಕೊಳಕೆ ಬೀಚ್‌ನಲ್ಲಿ ಸೂತಕದ ಛಾಯೆ

​ಮಂಜೇಶ್ವರ: ಇಲ್ಲಿನ ಕುಂಡುಕೊಳಕೆ ಸಮುದ್ರ ಕಿನಾರೆಯಲ್ಲಿ ಬುಧವಾರ ಸಂಜೆ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು (ಗುರುವಾರ) ಸಂಜೆ ಹೊಸಬೆಟ್ಟು ಕಡಪ್ಪುರದಲ್ಲಿ ಪತ್ತೆಯಾಗಿದೆ. ಮಂಜೇಶ್ವರ ಚೌಕಿ ನಿವಾಸಿಗಳಾದ ಉಮರುಲ್ ಫಾರೂಕ್ ಮತ್ತು ರಝೀನಾ ದಂಪತಿಗಳ ಪುತ್ರ ಮೊಹಮ್ಮದ್ ಝೈನುಲ್ ಹಾಬಿದ್ (18) ಬುಧವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಕುಂಡುಕೊಳಕೆ ಬೀಚ್‌ಗೆ ವಿಹಾರಕ್ಕೆ ಬಂದಿದ್ದನು. ಈ ಸಂದರ್ಭದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಆತ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದನು. ತಕ್ಷಣವೇ ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಹುಡುಕಾಟ…

Read More

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನ ದುರ್ಮರಣ

ಕಡಬ: ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ ಹೂವಪ್ಪ ಗೌಡ ಎಂಬವರ ಪುತ್ರ ಕಿಶನ್ ಎ ಹೆಚ್ (32 ವರ್ಷ) ಎಂದು ಗುರುತಿಸಲಾಗಿದೆ. ಇವರು ಕಳೆದ ಎರಡು ವರ್ಷಗಳಿಂದ ಗುತ್ತಿಗಾರಿನ ‘ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ಲಿಮಿಟೆಡ್’ನಲ್ಲಿ ಲೋನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಎರಡು…

Read More

ಮಂಗಳೂರಿನಲ್ಲಿ ಲಯನ್ಸ್ ಕ್ಲಬ್ “ಸುಮಂಗಲ ಜಿಲ್ಲಾ ಕನ್ವೆನ್ಷನ್” ಏಪ್ರಿಲ್ 18 ಹಾಗೂ 19ರಂದು

ಲಯನ್ಸ್ ಕ್ಲಬ್ ಜಿಲ್ಲೆ 317 ಡಿ ವತಿಯಿಂದ “ಸುಮಂಗಲ ಜಿಲ್ಲಾ ಕನ್ವೆನ್ಷನ್” ಸಮ್ಮೇಳನವನ್ನು ಏಪ್ರಿಲ್ 18 ಹಾಗೂ 19ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನಾ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಮ್ಮೇಳನವನ್ನು ಜಿಲ್ಲೆಯ ಪ್ರಥಮ ಮಹಿಳೆ ಮಮತಾ ಶೆಣೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಗವರ್ನರ್ ಕುಡುಪಿ ಅರವಿಂದ ಶೆಣೈ ವಹಿಸಲಿದ್ದಾರೆ ಎಂದರು . ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ನಿರ್ದೇಶಕ ಪಂಕಜ್ ಮೆಹ್ತಾ…

Read More

​ಮಂಜೇಶ್ವರ ಕುಂಡುಕೊಳಕೆ ಬೀಚ್: ಪ್ರವಾಸಿಗರ ಪಾಲಿಗೆ ಮೃತ್ಯುಕೂಪವಾಗುತ್ತಿದೆಯೇ ಈ ಕಿನಾರೆ?

​ಮಂಜೇಶ್ವರ: ಶಾಲಾ ರಜೆ ಅವಧಿಯಾದ್ದರಿಂದ ಮಂಜೇಶ್ವರದ ಪ್ರಸಿದ್ಧ ಕುಂಡುಕೊಳಕೆ ಬೀಚ್‌ಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಮತ್ತು ಕುಟುಂಬಗಳು ಆಗಮಿಸುತ್ತಿದ್ದಾರೆ. ಆದರೆ, ಕನಿಷ್ಠ ಭದ್ರತಾ ವ್ಯವಸ್ಥೆಯೂ ಇಲ್ಲದ ಕಾರಣ ಈ ಸುಂದರ ಕಿನಾರೆ ಇದೀಗ ಪ್ರಾಣಭಯ ಹುಟ್ಟಿಸುವ ತಾಣವಾಗಿ ಮಾರ್ಪಟ್ಟಿದೆ. ಬುಧವಾರ ಸಂಜೆ ಸಂಭವಿಸಿದ ದುರಂತದಲ್ಲಿ 18 ವರ್ಷದ ಝೈನುಲ್ ಹಾಬಿದ್ ಸಮುದ್ರ ಪಾಲಾಗಿದ್ದು, ಈತನ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಂಡಿದ್ದರೂ ಇನ್ನು ಸುಳಿವು ಲಭ್ಯವಾಗಿಲ್ಲ. ಇದು ಕೇವಲ ಒಂದು ಆಕಸ್ಮಿಕವಲ್ಲ, ಇಲ್ಲಿನ ಭದ್ರತಾ ವೈಫಲ್ಯಕ್ಕೆ ಬಲಿಯಾದ ಮತ್ತೊಂದು…

Read More

ಮಂಗಳೂರು ನಗರಾಭಿವೃದ್ಧಿಗೆ ₹165 ಕೋಟಿ: ಏಪ್ರಿಲ್ 18ರಂದು ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ (MGNVP) ದ್ವಿತೀಯ ಹಂತದಡಿ ರಾಜ್ಯ ಸರ್ಕಾರವು ಮಂಗಳೂರು ಮಹಾನಗರ ಪಾಲಿಕೆಗೆ ₹165 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಏಪ್ರಿಲ್ 18ರಂದು ಶಿಲಾನ್ಯಾಸ ನೆರವೇರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ. ಅವರು ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಬೆಳಗ್ಗೆ 9ಕ್ಕೆ ಮರವೂರು ಸೇತುವೆ ಬಳಿ ₹3 ಕೋಟಿ ವೆಚ್ಚದ ಕಾಮಗಾರಿ, 9.45ಕ್ಕೆ ವೆಲೆನ್ಸಿಯಾ…

Read More

ಸ್ಥಳೀಯ ಸಂಸ್ಥೆಗಳ ಚುನಾವಣೆ ತಕ್ಷಣ ನಡೆಸಿ: ಎಸ್‌ಡಿಪಿಐ ಆಗ್ರಹ

ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ತಕ್ಷಣ ನಡೆಯಲಿ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ತಕ್ಷಣ ಕ್ರಮಕೈ ಗೊಳ್ಳಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಮೈಸೂರು ಸುದ್ದಿ ಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಸುಮಾರು 2133 ಕೋಟಿ ರೂ. ಅನುದಾನ ವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ. ನಾಲ್ಕು ಕಂತುಗಳಲ್ಲಿ ಬಿಡುಗಡೆಯಾಗಬೇಕಿದ್ದ ಹಣ ಮಾರ್ಚ್‌ ಅಂತ್ಯದವರೆಗೂ ಬಂದಿಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳು…

Read More

ವೈಟ್ ಬೋರ್ಡ್ ವಾಹನಗಳಲ್ಲಿ ವಿದ್ಯಾರ್ಥಿ ಸಾಗಣೆ: ಕಠಿಣ ಕ್ರಮಕ್ಕೆ ಒತ್ತಾಯ

ಖಾಸಗಿ (ವೈಟ್ ಬೋರ್ಡ್) ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಿಸುವ ಹಾಗೂ ಬಾಡಿಗೆ ಆಧಾರದ ಮೇಲೆ ಬಳಸುತ್ತಿರುವ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಘದ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳನ್ನು ಸಾಗಿಸಲು ಮತ್ತು ಬಾಡಿಗೆಗೆ ಬಳಸಲು ಟೂರಿಸ್ಟ್ (ಯೆಲ್ಲೋ ಬೋರ್ಡ್) ವಾಹನಗಳಿಗೆ ಮಾತ್ರವೇ ಅವಕಾಶವಿದೆ. ನಮ್ಮ ಸಂಘದ ಸದಸ್ಯರು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಆದರೆ, ಕೆಲವು ಚಾಲಕರು…

Read More

ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಸಮಾರೋಪ: ಏಪ್ರಿಲ್ ೧೮ರಂದು ವೈಭವದ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು, ತುಳುನಾಡಿನ ವೀರ ವನಿತೆ ರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಆಕೆಯ ಇತಿಹಾಸವನ್ನುನಾಡಿನ ಯುವ ಜನಾಂಗಕ್ಕೆ ಪರಿಚಯಿಸುವ ಕಾರ್ಯ ನಡೆಸಿದ್ದು ಇದರ ಸಮಾರೋಪ ಸಮಾರಂಭ ಹಾಗೂ ಅಬ್ಬಕ್ಕ @ ಐನೂರರ ಸಂಭ್ರಮದಲ್ಲಿ ಅಬ್ಬಕ್ಕ ನೆನಪಿನೈಸಿರಿ ಎಂಬ ಸಂಚಿಕೆ ಲೋಕಾರ್ಪಣೆ ಕಾರ್ಯಕ್ರಮ ನಿರ್ಮಲ ಭಾರತ ಚಾರಿಟಬಲ್ ಟ್ರಸ್ಟ್ ಇದರ ಸಹಯೋಗದೊಂದಿಗೆ ಎಪ್ರಿಲ್ 18 ರಂದು ಸಂಜೆ 5 ಗಂಟೆಯಿಂದ ಉಳ್ಳಾಲದ ಶಾರದಾನಿಕೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕೆ…

Read More

ಕುಲಶೇಖರ ಪದವು ಶ್ರೀ ಶನೈಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ವರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಏಪ್ರಿಲ್ 18 ರಿಂದ 24 ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ತಿಳಿಸಿದರು. ಅವರು ದೇವಾಲಯದ ಆವರಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ವೇದಮೂರ್ತಿ ಎಂ. ಗಿರಿಧರ ಭಟ್ ಮತ್ತು ವೇದಮೂರ್ತಿ ಡಾ. ಸತ್ಯಕೃಷ್ಣ ಭಟ್ ಅವರ ನೇತೃತ್ವದಲ್ಲಿ…

Read More
error: Content is protected !!