ವೈಟ್ ಬೋರ್ಡ್ ವಾಹನಗಳಲ್ಲಿ ವಿದ್ಯಾರ್ಥಿ ಸಾಗಣೆ: ಕಠಿಣ ಕ್ರಮಕ್ಕೆ ಒತ್ತಾಯ
ಖಾಸಗಿ (ವೈಟ್ ಬೋರ್ಡ್) ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಿಸುವ ಹಾಗೂ ಬಾಡಿಗೆ ಆಧಾರದ ಮೇಲೆ ಬಳಸುತ್ತಿರುವ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಘದ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳನ್ನು ಸಾಗಿಸಲು ಮತ್ತು ಬಾಡಿಗೆಗೆ ಬಳಸಲು ಟೂರಿಸ್ಟ್ (ಯೆಲ್ಲೋ ಬೋರ್ಡ್) ವಾಹನಗಳಿಗೆ ಮಾತ್ರವೇ ಅವಕಾಶವಿದೆ. ನಮ್ಮ ಸಂಘದ ಸದಸ್ಯರು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಆದರೆ, ಕೆಲವು ಚಾಲಕರು…