ನಾಳೆ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ವತಿಯಿಂದ ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ ಅಭಿಯಾನಕ್ಕೆ ಚಾಲನೆ
ಮಂಗಳೂರು:ಮನುಷ್ಯನ ಜೀವನಕ್ಕೆ ಮಾರಕವಾದ ಆರೋಗ್ಯಕರ ಜೀವನ ಶೈಲಿಗೆ ಮಾದಕ ವ್ಯಸನ ಅಡ್ಡಿಯಾಗಿದ್ದು ನಮ್ಮ ಜಿಲ್ಲೆಯಲ್ಲಿ ಈ ಮಾದಕ ದ್ರವ್ಯವನ್ನು ಬಹುಮಟ್ಟಿಗೆ ಹತೋಟಿ ತಂದಂತಹ ನಮ್ಮ ಮಂಗಳೂರಿನ ಪೊಲೀಸ್ ಕಮಿಷನರ್ ಹಾಗೂ ಪೊಲೀಸ್ ಇಲಾಖೆ ಮಾದಕ ದ್ರವ್ಯ ಬಳಕೆಯ ವಿರುದ್ಧ ಸಮರ ಸಾರಿರುವುದರಿಂದ ನಮ್ಮ ಜಿಲ್ಲೆಯ ಸಾರ್ವಜನಿಕರು ಹೆಮ್ಮೆ ಪಡುವಂತಾಗಿದೆ. ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೀವನಕ್ಕೆ ಮಾರಕವಾದಂತಹ ಮಾದಕ ದ್ರವ್ಯದ ವಿರುದ್ಧ ಆಂದೋಲನವನ್ನು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘವು ಪೊಲೀಸ್ ಇಲಾಖೆ…