ಕೈಯಲ್ಲಿ ಮಚ್ಚು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿದ ಯುವಕ; ಪೊಲೀಸರ ವಶಕ್ಕೆ
ಮೂಡಬಿದ್ರೆ, ಜುಲೈ 20: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಯುವಕನನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಹಾಡಹಗಲೇ ಕೈಯಲ್ಲಿ ಮಚ್ಚು ಹಿಡಿದು ಬಸ್ ನಿಲ್ದಾಣಕ್ಕೆ ಬಂದ ರಾಜೇಶ್, ಅಲ್ಲಿನ ಮೊಬೈಲ್ ಅಂಗಡಿಯೊಂದಕ್ಕೆ ತೆರಳಿ ಸಿಬ್ಬಂದಿಗೆ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಬಳಿಕ ಹೊರಬಂದು ಮಚ್ಚನ್ನು ಬೆನ್ನಿನ ಭಾಗದಲ್ಲಿ ಇರಿಸಿಕೊಂಡು ಬಸ್ ನಿಲ್ದಾಣದಲ್ಲೇ ಕುಳಿತಿದ್ದಾನೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು….
