ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ
ಮಂಜೇಶ್ವರ: ಕಣ್ವತೀರ್ಥ ಪರಿಸರದಲ್ಲಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಚಟುವಟಿಕೆಗಳಿಗೆ ಕಾರಣವಾಗಿರುವ ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು.ಕಣ್ವತೀರ್ಥ ಗೇಟ್ ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯನ್ನು ಮಂಜೇಶ್ವರ ಗ್ರಾಮ ಪಂಚಾಯತು ಮುಂಭಾಗದಲ್ಲಿ ಪೊಲೀಸರು ತಡೆದರು. ಬಳಿಕ ಮಂಜೇಶ್ವರ ಗ್ರಾಮಪಂಚಾಯತ್ ಮುಂಭಾಗದಲ್ಲಿ ನಿವೃತ ಸೇನಾಧಿಕಾರಿ ವಿಜಯ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಮಧುಸೂಧನ್ ಆಚಾರ್ಯ ಉದ್ಘಾಟಿಸಿದರು….