ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ

ಮಂಜೇಶ್ವರ: ಕಣ್ವತೀರ್ಥ ಪರಿಸರದಲ್ಲಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಚಟುವಟಿಕೆಗಳಿಗೆ ಕಾರಣವಾಗಿರುವ ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು.ಕಣ್ವತೀರ್ಥ ಗೇಟ್ ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯನ್ನು ಮಂಜೇಶ್ವರ ಗ್ರಾಮ ಪಂಚಾಯತು ಮುಂಭಾಗದಲ್ಲಿ ಪೊಲೀಸರು ತಡೆದರು. ಬಳಿಕ ಮಂಜೇಶ್ವರ ಗ್ರಾಮಪಂಚಾಯತ್ ಮುಂಭಾಗದಲ್ಲಿ ನಿವೃತ ಸೇನಾಧಿಕಾರಿ ವಿಜಯ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಮಧುಸೂಧನ್ ಆಚಾರ್ಯ ಉದ್ಘಾಟಿಸಿದರು….

Read More

ಮೀಂಜ-ಮಂಗಲ್ಪಾಡಿ ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ

ಮೀಯಪದವು ಚಿಗುರುಪಾದೆಯಲ್ಲಿ ಕಾರ್ಯವೆಸಗುತ್ತಿರುವ “ಮೀಂಜ_ ಮಂಗಲ್ಪಾಡಿ ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ”ಯ ಮಹಾಸಭೆಯು ದಿನಾಂಕ 14 ರಂದು ಚಿಗುರುಪಾದೆ ಸಿ.ಸಿ. ಕಾಂಪ್ಲೆಕ್ಸ್ ನಲ್ಲಿ ಜರಗಿತು. ಸೊಸೈಟಿ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ ಯವರ ಅಧ್ಯಕ್ಷತೆ ಯಲ್ಲಿ , ಮಂಜೇಶ್ವರ ವಿಭಾಗದ ಸಹಕಾರಿ ಸಹಾಯಕ ನಿಬಂಧಕ ಶ್ರೀ ರವೀಂದ್ರ ರವರು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸೊಸೈಟಿ ಯ ಸದಸ್ಯರೂ, ಕರ್ನಾಟಕ ರಾಜ್ಯದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಜಗದೀಶ್ ಶೆಟ್ಟಿ ಮಾಸ್ಟರ್, ಎಲಿಯಾಣ ಅವರಿಗೆ ಸಭೆಯಲ್ಲಿ…

Read More

ಮುಡಿಮಾರು ಪಾವೂರಿನಲ್ಲಿ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಪೂಜೆ.

ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಮುಡಿಮಾರು ಪಾವೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಪೂಜೆಯನ್ನು ಮುಡಿಮಾರ್ ಶ್ರೀ ಮಲರಾಯ ಗುಳಿಗ ದೈವಸ್ಥಾನದ ವಠಾರದಲ್ಲಿ ಏರ್ಪಡಿಸಲಾಗಿತ್ತು. ಈ ಸಭೆಗೆ ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಜಿಲ್ಲಾಧ್ಯಕ್ಷರಾದ ಕೃಷ್ಣ ಶಿವ ಕೃಪ ಗುರುಗಳ ಸಂದೇಶಗಳನ್ನು ನೀಡಿದರು. ಅರಿಬೈಲು ಬರುವ ಜುಮಾದಿ ದೈವಸ್ಥಾನದ ಅರ್ಚಕರಾದ ಅರಸ ಪೂಜಾರಿ ಕುದುಕೋರಿ, ಮುಡಿಮಾರ್ ಮಲರಾಯ ಕ್ಷೇತ್ರದ ಅರ್ಚಕರಾದ ಚಂದ್ರಹಾಸ ಪೂಜಾರಿ ಮುಡಿಮಾರು,ಜಿಲ್ಲಾ ವೇದಿಕೆ…

Read More

ಶ್ರೀ ರಾಮ್ ಫೈನಾನ್ಸ್ ಮಂಗಳೂರು ಇದರ ವತಿಯಿಂದ 1000 ಕ್ಕೂ ಅಧಿಕ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ.

ಮಂಗಳೂರು: ನಮ್ಕ ದೇಶದಲ್ಲಿ ಶೇ 65% ರಷ್ಣು ಯುವ ಸಮೂಹವೇ ಇದೆ, ಈ ಯುವ ಸಮೂಹದ ಸಮಯಗಳು ದೇಶ ಕಟ್ಟುವ ಕಾರ್ಯಕ್ಕೆ ವಿನಿಯೋಗ ಆಗಬೇಕೆ ಹೊರತು, ದುರುಪಯೋಗವಾದರೆ ದೇಶಕ್ಕೆ ಮಾರಕ. ಹಾಗಾಗಿ ಯುವಕ ಶಕ್ತಿ ಸದ್ಬಳಕೆ, ಸ್ವಾಭಿಮಾನದ ಜೀವನ ನಮ್ಮ ಸಮಾಜದಲ್ಲಿ ಆಗಬೇಕಾದರೆ ಉಳ್ಳವರು ಮುಂದೆ ಬರಬೇಕು, ವಿದ್ಯಾರ್ಜನೆಗೆ, ನೈತಿಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು, ವ್ಯವಹಾರದ ತನ್ನ ಪಾಲನ್ನು ಶಿಕ್ಷಣಕ್ಕೆ ನೀಡುತ್ತಿರುವ ಶ್ರೀ ರಾಮ್ ಫೈನಾನ್ಸ್ ನ ಸೇವೆ ನಿಜವಾಗಿಯೂ ಮೆಚ್ಚತಕ್ಕದ್ದು ಎಂದು ದ.ಕ ಜಿಲ್ಲಾ ಸಂಸದರಾದ…

Read More

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

ಮಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ.ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದ. ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಲಾರಿ ರಸ್ತೆಯಲ್ಲಿ…

Read More

ಕೆಎಂಸಿ ಆಸ್ಪತ್ರೆಯ ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಉತ್ತಮ ಆರೈಕೆ ಗ್ಯಾಸ್ಟ್ರೋಎಂಟರ್ಲಾಜಿ ಸೇವೆ 25ನೇ ವರ್ಷಕ್ಕೆ ಪಾದಾರ್ಪಣೆ

ಮಂಗಳೂರು: ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಾಜಿ ಸೇವೆಗೆ 25 ವರ್ಷ ತುಂಬಿದ್ದು . ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸಹಾನುಭೂತಿಯ ರೋಗಿಯ ಆರೈಕೆಯನ್ನು ಸೂಚಿಸುತ್ತಿದೆ . 2000ನೇ ವರ್ಷದಲ್ಲಿ ಆರಂಭವಾದ ಈ ಸೇವೆಯು ಸುಧಾರಿತ ಡೈಯಾಗ್ನೋಸ್ಟಿಕ್ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಚಿಕಿತ್ಸೆಯನ್ನು ನೀಡುತ್ತಾ ಬರುತ್ತಿದೆ ಎಂದು ಗ್ಯಾಸ್ಟ್ರೋ ಎಂಟರಾಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ಬಿ ವಿ ತಂತ್ರಿ ತಿಳಿಸಿದರು. ಅವರು ಕೆಎಂಸಿ ಆಸ್ಪತ್ರೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕಳೆದ…

Read More

ಸೆ.15ರಂದು ಮಂಗಳೂರಿನಲ್ಲಿ ಜೀ಼ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಯ ಮಹಾ ಆಡಿಷನ್

ಮಂಗಳೂರು: ಜೀ಼ ಕನ್ನಡ ವಾಹಿನಿ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡಲು ಮತ್ತೊಮ್ಮೆ ವೇದಿಕೆ ಸಿದ್ಧಮಾಡಿದೆ . ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದೆ. ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ ಕಿಲಾಡಿಗಳಲ್ಲಿ ಭಾಗವಹಿಸುವುದಾದರೆ ನಿಮ್ಮ ವಯಸ್ಸು 16 ರಿಂದ…

Read More

ವೃದ್ಧೆಯ ಚಿನ್ನದ ಸರ ಕದ್ದ ಖದೀಮನ ಬಂಧನ

ಉಡುಪಿ:ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಚಿನ್ನದ ಎಗರಿಸಿದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಸುನಿಲ್ ರಮೇಶ್ ಲಮಾಣಿ(29) ಬಂಧಿತ ಆರೋಪಿಯಾಗಿದ್ದು ಈತನಿಂದ ಕಳವು ಮಾಡಿದ ಚಿನ್ನದ ರೋಪ್ ಚೈನನ್ನು ವಶಪಡಿಸಿಕೊಳ್ಳಲಾಗಿದೆ. ಸೆ.9ರಂದು ಕಾರ್ಕಳ ಎಳ್ಳಾರ ಗ್ರಾಮದ ಮುಳ್ಳಾಡು ನಿವಾಸಿ ಕುಮುದಾ ಶೆಟ್ಟಿ (80) ಎಂಬವರು ಮನೆಯ ಅಂಗಳ ದಲ್ಲಿ ಕುಳಿತುಕೊಂಡಿದ್ದರು ಆಗ ತಾನು ಕಾರ್ಕಳದ ಸೂಪರ್ ವೈಸರ್ ಎಂದು ಹೇಳಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬ ಮನೆಯಲ್ಲಿ ಸಿಸಿ ಕ್ಯಾಮರಾ ಇದೆಯೇ ಎಂದು ವಿಚಾರಿಸಿದನು ಬಳಿಕ…

Read More

ಪಂಜಾಬ್ ಪ್ರವಾಹ ಸಂತ್ರಸ್ತರಿಗೆ ನೆರವಿಗೆ ಕೋರಿ ಮಂಗಳೂರಿನ ಸಿಖ್ ಸಮುದಾಯದ ವತಿಯಿಂದ ನಾಳೆ ದೇಣಿಗೆ ಸಂಗ್ರಹಣೆ ಅಭಿಯಾನವು ನಡೆಯಲಿದೆ – ಕಮಲ್ ಜಿತ್ ಸಿಂಗ್

ಕಾಸರಗೋಡು: ಪಂಜಾಬ್ ಪ್ರವಾಹ ಸಂತ್ರಸ್ತರಿಗೆ ನೆರವಿಗೆ ಕೋರಿ ಮಂಗಳೂರಿನ ಸಿಖ್ ಸಮುದಾಯದ ವತಿಯಿಂದ ನಾಳೆ ಬೆಳ್ಳಿಗೆ 10 ರಿಂದ 5 ಗಂಟೆಯ ತನಕ ಕೊಟ್ಟಾರ ಚೌಕಿಯಲ್ಲಿ ದೇಣಿಗೆ ಸಂಗ್ರಹಣೆ ಅಭಿಯಾನವು ನಡೆಯಲಿದೆ ಎಂದು ಕಮಲ್ ಜಿತ್ ಸಿಂಗ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಸುಖ್ವಿಂದರ್ ಸಿಂಗ್ , ಇಂದು ಪಂಜಾಬ್ ರಾಜ್ಯದಲ್ಲಿ ತೀವ್ರ ಪ್ರವಾಹದ ಪರಿಣಾಮ ಸಾವಿರಾರು ಕುಟುಂಬಗಳು ತಮ್ಮ ಮನೆ, ಹೊಲ ಹಾಗೂ ಜೀವನೋಪಾಯ ಕಳೆದುಕೊಂಡಿವೆ. ಬೆಳೆಗಳು, ಜಾನುವಾರುಗಳು ಹಾಗೂ ಆಸ್ತಿ-ಪಾಸ್ತಿಗಳು…

Read More

ಕಾಸರಗೋಡು ಕನ್ನಡ ಗ್ರಾಮೋತ್ಸವ 2025 ನವಂಬರ್ 4ಕ್ಕೆ

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮ ದಿನಾಚರಣೆ – ಜನ್ಮ ವರ್ಷಾಚರಣೆ ,ಅಭಿನಂದನಾ ಕಾರ್ಯಕ್ರಮವನ್ನು ಕೇರಳ – ಕರ್ನಾಟಕ ಸಾಹಿತ್ಯ, ಸಾಂಸ್ಕೃತಿಕ ಉತ್ಸವವನ್ನಾಗಿಸಿ ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ – ‘ಕಾಸರಗೋಡು ಕನ್ನಡ ಗ್ರಾಮೋತ್ಸವ ‘2025 ಎಂಬ ಶೀರ್ಷಿಕೆಯ…

Read More
error: Content is protected !!