ಸಹಕಾರ ರತ್ನ’ ಡಾ॥ ಎಂ. ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ-ಧರ್ಮ ಜಾಗೃತಿ ಯಾತ್ರೆ’

ಮಂಗಳೂರು: ಸಹಕಾರ ರತ್ನ’ ಡಾ॥ ಎಂ. ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ಮಧ್ಯಾಹ್ನ 12.00 ಗಂಟೆಗೆ ಹೊರಡಲಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಧರ್ ರೈ ಬಾಲ್ಯೊಟ್ಟು ತಿಳಿಸಿದರು . ಅವರು ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ…

Read More

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೃಹತ್ ಪ್ರತಿಭಟನಾ ಸಭೆ.

ಮಂಗಳೂರು: ಮದ್ದೂರಿನ ಗಣೇಶ ವಿಸರ್ಜನೆ ಸಮಯದಲ್ಲಿ ಮುಸ್ಲಿಂ ರಿಂದ ಕಲ್ಲು ತೂರಾಟದ ವಿರುದ್ಧ ಹಾಗೂ ರಾಜ್ಯದಾದ್ಯಂತ ಗಣೇಶ ವಿಸರ್ಜನೆಗೆ ತಡೆ ಒಡ್ಡುತ್ತಿರುವುದು ಹಾಗೂ ಪ್ರಾಂತ್ಯದ ಅನೇಕ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳ ಪ್ರವೇಶಕ್ಕೆ ನಿಷೇಧ ಒಡ್ಡುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಿನಿ ವಿಧಾನಸೌಧದ ಮುಂಭಾಗ, ಮಂಗಳೂರು ಇಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು .

Read More

ಧರ್ಮಸ್ಥಳ ಪ್ರಕರಣ .ಬೆಳ್ತಂಗಡಿ ಎಸ್ಐಟಿ ಕಚೇರಿಗೆ ತೆರಳಿ ದೂರು ನೀಡಿದ ಮಹೇಶ್ ಶೆಟ್ಟಿ ತಿಮರೋಡಿ.

ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದೆ.‌ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ಎಸ್ ಐಟಿ ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐಟಿ ಕಛೇರಿಗೆ ಮಹೇಶ್ ಶೆಟ್ಟಿಯವರು ಭೇಟಿ ನೀಡಿದ್ದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು…

Read More

ಮಾಧವಿ ಅಪಘಾತ ಸಾವಿಗೆ ಹೆದ್ದಾರಿ ಪ್ರಾಧಿಕಾರವೇ ಕಾರಣ – ಬಿಕೆ ಇಮ್ಮಿಯಾಜ್

ಮಂಗಳೂರು: ನಂತೂರಿನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಸಂಪೂರ್ಣ ಅಯೋಗ್ಯವಾಗಿದೆ ಹೆದ್ದಾರಿ ಪೂರ್ತಿ ಬೃಹತ್ ಗುಂಡಿಗಳು ನಿರ್ಮಾಣಗೊಂಡಿದೆ. ದ್ವಿಚಕ್ರ ವಾಹನ ಸವಾರರು ದಿನನಿತ್ಯ ಅಪಘಾತಕ್ಕೊಳಗಾಗಿ ಸಾವಿಗೀಡಾಗುತ್ತಿದ್ದಾರೆ .ಹೆದ್ದಾರಿ ಪ್ರಾಧಿಕಾರ ಮತ್ತು ನಮ್ಮ ಜನಪ್ರತಿನಿದಿನಗಳು ಗಾಢ ನಿದ್ರೆಯಲ್ಲಿದ್ದಾರೆ ಎಂದು ಡಿವೈಎಫ್‌ಐ ದ.ಕ ಜಿಲ್ಲಾಧ್ಯಕ್ಷ ಬಿ.ಕೆ ಇಮಿಯಾಜ್ ಹೇಳಿದರು. ಅವರು ಇಂದು ಕುಳೂರು ಜಂಕ್ಷನ್ ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ಗುಂಡಿಯಿಂದಾಗಿ ಅಪಘಾತಾಕ್ಕೊಳಗಾಗಿ ಸಾವನ್ನಪ್ಪಿದ ಮಾಧವಿ ಕುಟುಂಬಕ್ಕೆ ಗರಿಷ್ಠ ಪರಿಹಾರಕ್ಕೆ ಒತ್ತಾಯಿಸಿ, ಹೆದ್ದಾರಿ ಗುಂಡಿ…

Read More

ಮೊಗ್ರಾಲ್ ಪುತ್ತೂರು ರಾ. ಹೆದ್ದಾರಿಗೆ ಲೈಟ್ ಜೋಡಿಸುವಾಗ ದುರ್ಘಟನೆ -ಸಾವಿನ ಸಂಖ್ಯೆ ಎರಡಕ್ಕೇರಿಕೆ

ಕುಂಬಳೆ : ಮೊಗ್ರಾಲ್ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸುವಾಗ ಕ್ರೈನ್ ನಿಂದ ಬಿದ್ದು ಗಾಯಗೊಂಡ ವ್ಯಕ್ತಿಯೂ ಮೃತಪಡುವುದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.ಕೋಝಿಕ್ಕೋಡ್ ಬಳಿಯ ವಡಗರ ನಿವಾಸಿಗಳಾದ ಅಕ್ಷಯ್ (30), ಅಶ್ವಿನ್ (26)ಮೃತ ವ್ಯಕ್ತಿಗಳಾಗಿದ್ದಾರೆ. ಗುರುವಾರ ಮಧ್ಯಾಹ್ನ 12ರ ವೇಳೆಗೆ ಹೆದ್ದಾರಿಗೆ ದೀಪ ಅಳವಡಿಸುವ ವೇಳೆ ಕ್ರೈನ್ ನ ಬಾಕ್ಸ್ ಕಳಚಿದಾಗ, ಕರ್ತವ್ಯದಲ್ಲಿದ್ದ ಇವರಿಬ್ಬರೂ ಬಿದ್ದಿದ್ದರು. ಈ ಪೈಕಿ ಅಕ್ಷಯ್ ಮೊದಲು ಮೃತಪಟ್ಟಿದ್ದರು.ಕುಂಬಳೆ ಸಹಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಅಕ್ಷಯ್ ನ ಮರಣ ಸಂಭವಿಸಿತು. ಅಶ್ವಿನ್…

Read More

ರಾಮಕ್ಷತ್ರಿಯ ಮಹಿಳಾ ಯಕ್ಷವೃಂದ ಜೆಪ್ಪು ಮಂಗಳೂರು ಸ0ಯುಕ್ತ ಆಶ್ರಯದಲ್ಲಿ ನಡೆದ ನುಡಿ ನಮನ, ಕೃತಿ ಬಿಡುಗಡೆ ಸಂಸ್ಮರಣೆ.

ಪರರ ಸೇವೆ ದೇವರ ಸೇವೆ ಎಂಬ ಧ್ಯೇಯವನ್ನು ತನ್ನದಾಗಿಸಿಕೊಂಡು ಬಾಳನ್ನು ಸಾಗಿಸಿದ್ದ ಶ್ರೀಮತಿ ದಿ. ಗಾಯತ್ರಿ ನಾಗೇಶ್ ರಾಮಕ್ಷತ್ರಿಯ ಸಮಾಜದ ಅಭಿಮಾನದ ಪುತ್ರಿ ಬಹುಮುಖ ಪ್ರತಿಭೆಯ ಗಾಯತ್ರಿ ಇವರ ವೈಕುಂಠ ಸಮಾರಾಧನೆ ಕ್ರಿಯೆಯ ದಿನದಂದು ಪೂರ್ವಾಹ್ನ 11.00 ರ ವೇಳೆಗೆ ಮಂಗಳೂರು ಶರವು ದೇವಸ್ಥಾನದ ಸಮೀಪವಿರುವ ಬಾಳಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ಮರೆಯಲಾಗದವರು ವ್ಯಕ್ತಿ ಚಿತ್ರಣ ಕೃತಿ ಕನ್ನಡ ಭವನ ಪ್ರಕಾಶನ ಕಾಸರಗೋಡು, ಇದರ ಸಂಸ್ಥಾಪಕ ಅಧ್ಯಕ್ಷರು ಸಂಚಾಲಕರು ಆಗಿರುವಂತಹ ಡಾ. ವಾಮನ್ ರಾವ್ ಬೇಕಲ್ ಇವರ ನೇತೃತ್ವದಲ್ಲಿ…

Read More

ಸೆ. 14 ರಂದು ಸಾರ್ವಜನಿಕ ಮಸೀದಿ ದರ್ಶನ ಕುದ್ರೋಳಿ ಜಾಮಿಯಾ ಮಸೀದಿ ನೋಡ ಬನ್ನಿ ಕಾರ್ಯಕ್ರಮ

ಮಂಗಳೂರು: ಪ್ರವಾದಿ ಮುಹಮ್ಮದರು ಜನಿಸಿ 1500 ವರ್ಷಗಳೇ ಕಳೆದಿವೆ ಮತ್ತು ಇಸ್ಲಾಮ್ ಭಾರತಕ್ಕೆ ಆಗಮಿಸಿ ಸಾವಿರ ವರ್ಷಗಳೇ ಕಳೆದಿವೆ. ಆದರೆ ಮುಸ್ಲಿಮರ ಧರ್ಮ ಗ್ರಂಥ ಕು‌ ಆನ್ ಅದರ ಆರಾಧನಾ ಕೇಂದ್ರವಾಗಿರುವ ಮಸೀದಿಗಳು, ನಮಾಝ್, ಅದಾನ್ ಇತ್ಯಾದಿಗಳು ಈ ದೇಶಕ್ಕೆ ತೆರೆದುಕೊಂಡಿರುವುದು ಬಹಳ ಕಡಿಮೆ. ಇದರಿಂದಾಗಿ ಸಮಾಜದಲ್ಲಿ ಮಸೀದಿಗಳ ಬಗ್ಗೆ, ಮುಸ್ಲಿಮರ ಬಗ್ಗೆ ಅವರ ಕುರ್ ಆನಿನ ಬಗ್ಗೆ ಮತ್ತು ಆಚಾರ ವಿಚಾರಗಳ ಬಗ್ಗೆ ಹಲವು ಅನುಮಾನ, ಕುತೂಹಲಗಳು ಇರುವುದು ಸಹಜವಾಗಿದೆ. ಆದ್ದರಿಂದಲೇ ಪ್ರವಾದಿ ಜನಿಸಿದ ಈ…

Read More

“ಜಿಲ್ಲೆಯಲ್ಲಿ ಡಿಜೆ, ಮೈಕ್ ನಿರ್ಬಂಧಕ್ಕೆ ಹಿಂದೂ ಸಂಘಟನೆಗಳೇ ನೇರ ಕಾರಣ-ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಡಿಜೆ , ಮೈಕ್ , ಮೆರವಣಿಗೆಗೆ ಪೊಲೀಸ್ ಇಲಾಖೆ ವಿಧಿಸಿರುವ ನಿರ್ಬಂಧಗಳಿಂದ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ . ಈ ನಿರ್ಬಂಧಗಳಿಗೆ ಕಾರಣ ಹಿಂದೂಪರ ಸಂಘನೆ ಆಗಿದೆ . ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಪೊಲೀಸ್ ಅಧಿಕಾರಿಗಳು ಈ ರೀತಿಯ ನಿಯಮವನ್ನು ಕೈಗೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ದಕ್ಷಿಣ…

Read More

ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ” ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ : ಗಡಿ ಪ್ರದೇಶದಲ್ಲಿ ಗಮನ ಸೆಳೆಯಿತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಂದು ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು. ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ನ ತೀರ್ಪುಗಾರರ ಪರಿಶೀಲನೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಿನ್ನೆಸ್ ದಾಖಲೆಯಲ್ಲಿ ಸ್ಥಾನ…

Read More

“ಭೂದಾನ ಚಳುವಳಿಯೇ, ಭೂಮಸೂದೆ ಕಾಯ್ದೆಗೆ ಪ್ರೇರಣೆ : ಪಿ .ಸೋಮಪ್ಪ

ಮಂಜೇಶ್ವರ : ಮಹಾತ್ಮಾ ಗಾಂಧಿಜಿಯವರ ಅನುಯಾಯಿ, ಸ್ವಾತಂತ್ರ್ಯ ಹೋರಾಟಗಾರ ಆಚಾರ್ಯ ವಿನೋಬಾ ಭಾವೆಯವರ ಭೂದಾನ ಚಳುವಳಿಯಿಂದ ಪ್ರೇರಿತರಾಗಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ಭೂಮಸೂದೆ ಕಾಯ್ದೆಯನ್ನು ಜಾರಿಗೆ ತಂದರು. ಉಳುವವನೇ ಹೊಲದೊಡೆಯ ಎಂಬ ಪರಿಕಲ್ಪನೆ ವಿನೋಬಾ ಭಾವೆಯವರದ್ದಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಸೋಮಪ್ಪ ಹೇಳಿದ್ದಾರೆ. ಅವರು ವರ್ಕಾಡಿಯಲ್ಲಿ ಜರುಗಿದ ಆಚಾರ್ಯ ವಿನೋಬಾ ಭಾವೆಯವರ 130 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿನೋಬಾ – ವೆಂಕಟೇಶರಾವ್ ಶಾಂತಿ ಸೇನಾ ಫೌಂಡೇಶನ್ ಪ್ರಧಾನ ಸಂಚಾಲಕ…

Read More
error: Content is protected !!