ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚೆಕ್ ಲೀಫ್ ಕಳವು.

ಮಂಜೇಶ್ವರ: ಮನೆಗೆ ಬೀಗ ಹಾಕಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭದಲ್ಲಿ ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚೆಕ್ ಲೀಫ್ ಕಳವುಗೈದಿರುವ ಬಗ್ಗೆ ದೂರಲಾಗಿದೆ. ಪೆರ್ಮುದೆ ನಿವಾಸಿ ಹಾಗೂ ಗಲ್ಫ್ ಉದ್ಯೋಗಿಯಾಗಿರುವ ರಫೀಕ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 3೦ ಸಾವಿರ ರೂಪಾಯಿ ಹಾಗೂ ಬ್ಯಾಂಕ್‌ನ ಚೆಕ್ ಲೀಫ್ ಕಳವುಗೈದಿದ್ದಾರೆ. ಈ ಬಗ್ಗೆ ರಫೀಕ್‌ರ ಪತ್ನಿ ಶಮ್ನ ಕೆ.ಎ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಶಮ್ನ ಹಾಗೂ ಮಕ್ಕಳು ಈ…

Read More

ಕೆ ಎಸ್‌ ಆರ್‌ ಟಿ ಸಿ ಬಸ್‌ನಲ್ಲಿ ಮದ್ಯ ಸಾಗಾಟ: ಮೊಗ್ರಾಲ್ ನಿವಾಸಿ ಸೆರೆ.

ಮಂಜೇಶ್ವರ: ಸಾರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯವನ್ನು ಅಬಕಾರಿ ತಂಡ ವಶಪಡಿಸಿ ಒಬ್ಬನನ್ನು ಬಂಧಿಸಿದ್ದಾರೆ.ಮೊಗ್ರಾಲ್ ನೀರೋಳ್ ನಿವಾಸಿ ಬಿ. ಶಿವಪ್ರಸಾದ್ (26) ಬಂಧಿತ ವ್ಯಕ್ತಿ. ಈತನ ಬ್ಯಾಗ್‌ನಿಂದ 9 ಲೀಟರ್ ಕರ್ನಾಟಕ ಮದ್ಯ ವಶಪಡಿಸಲಾಗಿದೆ. ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ತಂಡ ಬಸ್‌ನಲ್ಲಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್ ಜಿನು ಜೇಮ್ಸ್ ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ ಎಂ.ವಿ. ಜಿಜಿನ್, ಗ್ರೇಡ್ ಪ್ರಿವೆಂಟೀವ್ ಆಫೀಸರ್ ಪಿ.ಕೆ. ಬಾಬು ರಾಜ್, ಸಿವಿಲ್ ಎಕ್ಸೆಸ್ ಆಫೀಸರ್ ಸುನೀಲ್ ಎಂಬಿವರು…

Read More

ಸೆ. 12ರಂದು ರಾಷ್ಟ್ರೀಯ ಹೆದ್ದಾರಿ ದುರಸ್ಥಿ ಒತ್ತಾಯಿಸಿ, ರಾಷ್ಟ್ರೀಯ ಹೆದ್ಧಾರಿ ಕಛೇರಿಗೆ ಮುತ್ತಿಗೆ ಮತ್ತು ಪ್ರತಿಭಟನೆ

ದಿನಾಂಕ:12.09.2025 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿಗೆ ನಡೆದ ಅನೇಕ ಅಪಘಾತಗಳು ಅಮಾಯಕರ ಜೀವವನ್ನು ಬಲಿದಾನ ಪಡೆದಿದ್ದು, ರಾಷ್ಟ್ರೀಯ ಹೆದ್ದಾರಿಯ ದುರಸ್ಥಿಯೇ ಪ್ರಮುಖ ಕಾರಣವಾಗಿರುತ್ತದೆ. ರಾಷ್ಟ್ರೀಯ ಹೆದ್ಧಾರಿ ಯಾವುದೇ ದುರಸ್ಥಿ ಕಾರ್ಯಕ್ರಮ ಮಾಡದೇ ಇರುವುದರಿಂದ ದಿನಾಂಕ:12.09.2025 (ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ನಂತೂರಿನ ಜಂಕ್ಷನಲ್ಲಿ ಪ್ರತಿಭಟನೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತೀರ್ಮಾನಿಸಲಾಗಿದೆ.ಶಾಸಕರು,ಕರ್ನಾಟಕ ವಿಧಾನ ಪರಿಷತ್‌ ಮತ್ತು ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಐವನ್‌ ಡಿʼಸೋಜಾ ತಿಳಿಸಿದರು.

Read More

“ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025 ” ಕಾರ್ಯಕ್ರಮ ಸೆ. 12 ರಂದು.

ಮಂಗಳೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ರಾಜ್ಯ ಸಮಿತಿ ವತಿಯಿಂದ ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ದಿನಾಂಕ 12/09/2025 ನೇ ಶುಕ್ರವಾರ ಸಂಜೆ ಮಂಗಳೂರಿನ ಇಂಡಿಯಾನ ಕನ್ನೆನ್ನನ್ ಹಾಲ್‌ನಲ್ಲಿ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಸೇರಿದಂತೆ ಹಲವಾರು ಸಮುದಾಯದ ಗಣ್ಯರು ಭಾಗವಹಿಸಲಿದ್ದಾರೆ.ಯುನೈಟೆಡ್ ಎಂಪವ‌ಮೆಂಟ್ ಅಸೋಸಿಯೇಷನ್ (ಯುಇಎ) ಕ್ರೀಡೆಗಳ ಮೂಲಕ ಸಮುದಾಯದ ಸಬಲೀಕರಣ ಮತ್ತು…

Read More

ಅತ್ಯಾಚಾರ ಪ್ರಕರಣ : ರ‍್ಯಾಪರ್ ವೇಡನ್ ಬಂಧನ

ಕೊಚ್ಚಿ: ವೈದ್ಯೆಯೊಬ್ಬರು ನೀಡಿದ ಅತ್ಯಾಚಾರ ದೂರಿಗೆ ಸಂಬಂಧಿಸಿದಂತೆ ವೇಡನ್ ಎಂದೇ ಖ್ಯಾತಿಯಾದ ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿಯನ್ನು ಬಂಧಿಸಲಾಗಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನದ ವಿಚಾರಣೆ ಬಳಿಕ ಕೊಚ್ಚಿಯ ತ್ರಿಕ್ಕಾಕರ ಪೊಲೀಸರು ವೇಡನ್ ಅವರನ್ನು ಬಂಧಿಸಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಕೇರಳ ಹೈಕೋರ್ಟ್ ವೇಡನ್‌ಗೆ ಈಗಾಗಲೇ ನಿರೀಕ್ಷಣಾ ಜಾಮೀನು ನೀಡಿರುವುದರಿಂದ ವೈದ್ಯಕೀಯ ಪರೀಕ್ಷೆ ಮತ್ತು ಬಂಧನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Read More

ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ 8 ರಿಂದ 14 ರ ಮಧ್ಯೆ ಪ್ರಾಯದ 14 ಮಕ್ಕಳು ತೀವ್ರ ಅಸ್ವಸ್ಥ.

ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ 8 ರಿಂದ 14 ರ ಮಧ್ಯೆ ಪ್ರಾಯದ 14 ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ.ಪಳ್ಳಿಕ್ಕೆರೆ ಸಮೀಪದ ಪೂಚಕ್ಕಾಡಿನ ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ ಈ ದುರ್ಘಟನೆ ಸಂಭವಿಸಿದೆ. ಇವರೆಲ್ಲರಿಗೂ ಹೊಸದುರ್ಗ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು ಪಳ್ಳಿಕ್ಕೆರೆಯಲ್ಲಿ ನಡೆದ ನಬಿ ದಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಕ್ಕಳಿಗೆ ನಬಿ ದಿನ ಸಂಘಟಕರು ಆಹಾರ ಪೂರೈಸಲು ತರಿಸಲಾಗಿದ್ದ ಆಹಾರ ಸಾಕಾಗದಿದ್ದಾಗ ಸಮೀಪದ ಹೋಟೆಲೊಂದರಿಂದ ಶವರ್ಮ ಖರೀದಿಸಿ ವಿತರಿಸಿದ್ದರು. ಅದನ್ನು ಸೇವಿಸಿದ ಅರ್ಧ…

Read More

ಕಾಸರಗೋಡು-ಕಾಞ್ಞಂಗಾಡು ನಡುವಿನ ರಾಜ್ಯ ಹೆದ್ದಾರಿಯಲ್ಲಿ ಬೀದಿ ದೀಪ ಕೊರತೆ.ಜನಸಾಮಾನ್ಯರ ಪರದಾಟ

ಕಾಸರಗೋಡು – ಕಾಞ್ಞಂಗಾಡು ನಡುವಿನ ರಾಜ್ಯ ಹೆದ್ದಾರಿಯ ಮೂಲಕ ಹಾದುಹೋಗುವಾಗ ಸಿಗುವ ತ್ರಿಕನಾಡ್ ಪ್ರದೇಶವು ಮುಸ್ಸಂಜೆಯ ಸಮಯದಲ್ಲಿ ಸೂರ್ಯ ಮುಳುಗುತ್ತಿದಂತೆ ಕಡು ಕತ್ತಲು ಸುತ್ತಲೂ ಮೂಡುತ್ತದೆ . ತ್ರಿಕನಾಡ್ ತ್ರಯಂಬಕೇಶ್ವರ ದೇವಾಲಯದ ಸಮೀಪವೇ ಇರುವ ಪ್ರದೇಶವು ಭಯಂಕರ ಕತ್ತಲೆಯಲ್ಲಿ ರಾತ್ರಿ ಕಳೆಯುವಂತೆ ಮಾಡುತ್ತದೆ . ಯಾಕೆಂದರೆ ಇಲ್ಲಿ ಕತ್ತಲನ್ನು ದೂರ ಮಾಡುವ ಬೀದಿ ದೀಪ ಇರದೇ ಇರುವುದು ಆ ಊರಿನ ಭಯಾನಕ ಚಿತ್ರಣವನ್ನು ಕಾಣಿಸುತ್ತದೆ . ಸ್ಥಳೀಯರು ಈ ಸನ್ನಿವೇಶದಿಂದ ಕರಾಳ ರಾತ್ರಿಯನ್ನು ಕಳೆಯುವಂತೆ ಮಾಡುತ್ತಿದೆ ….

Read More

ಹಿಂದೂ ವಿರೋಧಿ ಭ್ರಷ್ಟ, ಭಂಡ ಕಾಂಗ್ರೆಸ್ ಸರಕಾರದಿಂದ ರಾಜ್ಯಕ್ಕೆ ಅಧೋಗತಿ: ರಾಜಗೋಪಾಲ್ ರೈ

ಮಂಗಳೂರು: ಕಾಂಗ್ರೆಸ್ ಸರಕಾರದ ಎರಡೂವರೆ ವರ್ಷದ ಆಡಳಿತದಲ್ಲಿ ರಾಜ್ಯವು ಸಂಪೂರ್ಣ ಅಧೋಗತಿಗೆ ಇಳಿದಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದೂ ವಿರೋಧಿ ಮಾನಸಿಕತೆ, ಪಾಕ್ ಪರ ಘೋಷಣೆಗಳು, ದೇಶದ್ರೋಹಿ ಶಕ್ತಿಗಳು ವಿಜೃಂಭಿಸುತ್ತಿವೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾದ ರಾಜಗೋಪಾಲ್ ರೈ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಸ್ಲಿಂ ಓಲೈಕೆ ರಾಜಕಾರಣ ಮಿತಿಮೀರಿ ನಡೆಯುತ್ತಿದ್ದು, ನಾಡಹಬ್ಬ ದಸರಾದ ಉದ್ಘಾಟನೆಗೆ ಹಿಂದೂ ವಿರೋಧಿ ಮಾನಸಿಕತೆಯ ಬಾನು ಮುಷ್ತಾಕ್‌ಗೆ ಆಹ್ವಾನ ನೀಡಲಾಗಿದೆ. ರಾಜ್ಯಾದ್ಯಂತ ಜನರು…

Read More

ಇತ್ತೀಚಿಗಿನ ದಿನಗಳಲ್ಲಿ ರಾ. ಹೆ 66 ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಇದರ ನೇರ ಹೊಣೆ ಕೇಂದ್ರ ಸರಕಾರ ಹೊರಬೇಕಾಗುತ್ತದೆ – ಮಾಜಿ ಮೇಯರ್ ಶಶಿಧರ್ ಹೆಗ್ಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ನೇತ್ರಾವತಿ ನದಿಯು ಜೀವನಾಡಿಯೋ ಹೇಗೋ , ಹಾಗೇ ಕರಾವಳಿ ಜಿಲ್ಲೆಗೆ ರಾಷ್ಟ್ರೀಯ ಹೆದ್ದಾರಿ 66 ಕೂಡ ಜೀವನಾಡಿ ಇದ್ದ ಹಾಗೆ , ಆದರೆ ಇತ್ತೀಚಿಗಿನ ದಿನಗಳಲ್ಲಿ ಈ ಮಾರ್ಗದಲ್ಲಿ ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಇದರ ನೇರ ಹೊಣೆಯನ್ನು ಕೇಂದ್ರ ಸರಕಾರ, ಜಿಲ್ಲೆಯ ಸಂಸದರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಹೊರಬೇಕಾಗುತ್ತದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಹೇಳಿದರು . ಅವರು ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…

Read More

ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಸೆ. 14ರಂದು ಆಚರಿಸಲಾಗುವುದು- ಎಸ್ ಪ್ರದೀಪ್ ಕುಮಾರ್ ಕಲ್ಕೂರ

ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಲು ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಉದ್ದೇಶದಿಂದ ಕಳೆದ 43ವರ್ಷಗಳಿಂದ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸೆಪ್ಟೆಂಬರ್ 14 ರವಿವಾರ ಆಚರಿಸಲಾಗುವುದೆಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೃಷ್ಣಾಷ್ಟಮಿಯಂದು ಬೆಳಗ್ಗೆ 9.00ರಿಂದ ಶ್ರೀ ಕೃಷ್ಣ…

Read More
error: Content is protected !!