ಶರಣಿ ರೂಪಾ ಬಿ. ಮುದ್ದೇಬಿಹಾಳ ತಾಲೂಕು ಅಧ್ಯಕ್ಷೆಯಾಗಿ ಆಯ್ಕೆ

ರೂಪಾ ಬಿ. ನಾಟೀಕಾರ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು, ಶಿಕ್ಷಕಿ, ವಚನಕಾರ್ತಿ, ಕವಯತ್ರಿ, ಹಾಗೂ ಸಂಘಟಕಿಯಾದ ಇವರನ್ನು,ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ “ರಜತ ಸಂಭ್ರಮ “ಪೂರೈಸಿದ ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿ, ಕನ್ನಡ ಶೈಕ್ಷಣಿಕ, ಕನ್ನಡ ಪರ ಚಟುವಟಿಕೆಗಳ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವ ಈ ಸಂಸ್ಥೆಯ ಮುದ್ದೇಬಿಹಾಳ ತಾಲೂಕಿಗೆ ಅಧ್ಯಕ್ಷರನ್ನಾಗಿ ನೇಮಿಸಿದೆ.ಕನ್ನಡ ಭವನದ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್…

Read More

ಪಾವೂರು ಅಂಗನವಾಡಿಯಲ್ಲಿ ಸಂಭ್ರಮದ 77ನೇ ಗಣರಾಜ್ಯೋತ್ಸವ ಆಚರಣೆ

ಮಂಜೇಶ್ವರ: ಪಾವೂರು ಅಂಗನವಾಡಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ವಹಿಸಿದ್ದರು. ವರ್ಕಾಡಿ ಪಂಚಾಯತ್ ಸದಸ್ಯ ಸಿದ್ದಿಕ್ ಪಾವೂರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲಾಕ್ ಸದಸ್ಯೆ ಬೀಪಾತಿಮ ಜಾವುರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಅಂಗನವಾಡಿಯ ಪುಟಾಣಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದರು. ಕಾರ್ಯಕ್ರಮದ ಆರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಸೈಲಜಾ ಸ್ವಾಗತ ಭಾಷಣ ಮಾಡಿದ್ದು, ಸಹಾಯಕ ಕಾರ್ಯಕರ್ತೆ ಸುಚಿತ್ರ ವಂದನಾರ್ಪಣೆ ಸಲ್ಲಿಸಿದರು.

Read More

ಬಹುವರ್ಷಗಳ ಬೇಡಿಕೆ ಈಡೇರಿಕೆ: ಅನಧಿಕೃತ ಬಡಾವಣೆ ಸಕ್ರಮ, ಮನೆ ನಿರ್ಮಾಣಕ್ಕೆ ದಾರಿ ತೆರೆದಿತು

ಪುತ್ತೂರು; ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜಾಗವನ್ನು ಕಟ್ ಮಾಡಿ ಕೃಷಿಯೇತರ ವಿಚಾರಗಳಿಗೆ ಬಳಕೆ ಮಾಡಿಕೊಂಡಿರುವ ಸುಮಾರು ೩೦ ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಯೋಜನವಾಗುವಂತೆ ರಾಜ್ಯ ಸರ್ಕಾರ ಇದೀಗ ಅನಧಿಕೃತ ಬಡಾವಣೆಗಳನ್ನು ಸಕ್ರಮೀಕರಿಸುವ ಮೂಲಕ ಕಟ್ ಕನ್ವರ್ಷನ್ ಸಮಸ್ಯೆಗೆ ಪರಿಹಾರ ನೀಡುವ ಮಹತ್ವದ ಕೆಲಸ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ೨೦೨೪ರ ಸೆಪ್ಟಂಬರ್ ೧೦ರ ಮೊದಲು ರಚಿಸಲಾದ ಅಕ್ರಮ ಬಡಾವಣೆಗಳನ್ನು ರಾಜ್ಯ ಸರ್ಕಾರ ಅಕ್ರಮಗೊಳಿಸಲು ಮುಂದಾಗಿದೆ….

Read More

ಬಿಜೆಪಿ ಅಧಿಕಾರ ಇಲ್ಲದ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರದ ಕಪಿಮುಷ್ಟಿಯಲ್ಲಿದ್ದಾರೆ : ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌

ಮಂಗಳೂರು : ರಾಜ್ಯಪಾಲರು ರಾಜ್ಯ ಸರಕಾರದ ಪ್ರತಿನಿಧಿ. ಅವರ ಭಾಷಣ ಎಂದಾಗ ಅದು ಸರಕಾರದ ಅಭಿಪ್ರಾಯಗಳೇನು, ರಾಜ್ಯಕ್ಕೆ ಆಗುವ ಸಮಸ್ಯೆ ಬೆಳವಣಿಗೆಗಳ ಬಗ್ಗೆ ಮತ್ತು ರಾಜ್ಯದ ಪರವಾಗಿ ಏನು ಮಾಡಬೇಕಿದೆ ಎಂಬುದಾಗಿ ಪ್ರಸ್ತಾಪವನ್ನು ನೀಡುವವರು . ಆದರೆ ಬಿಜೆಪಿ ಅಧಿಕಾರ ಇಲ್ಲದ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರದ ಕಪಿಮುಷ್ಟಿಯಲ್ಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಆರೋಪವನ್ನು ವ್ಯಕ್ತಪಡಿಸಿದ್ದಾರೆ . ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಂದರ್ಭ ಇತ್ತೀಚಿಗೆ ವಿಶೇಷ ಅಧಿವೇಶನದಲ್ಲಿ ಭಾಷಣದ ಕುರಿತಂತೆ ಉಂಟಾದ…

Read More

ರೈತ ಕಾರ್ಮಿಕ ವಿರೋಧಿ ಸಂಹಿತೆಗಳು,ಮಸೂದೆಗಳಿಂದ ಜನಸಾಮಾನ್ಯರ ಬದುಕು ಸಂಕಷ್ಟದಲ್ಲಿ – ಕೆ ಯಾದವ ಶೆಟ್ಟಿ

ಮಂಗಳೂರು: ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳು, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ಸೇರಿದಂತೆ ಜನರ ಬದುಕಿಗೆ ಅಪಾಯಕಾರಿಯಾದ ಕಾನೂನುಗಳ ಜಾರಿ ಮಾಡಿದ ಕೇಂದ್ರ ಸರಕಾರ ಗ್ರಾಮೀಣ ಜನತೆಯ ಬದುಕಿಗೆ ಪೂರಕವಾದ ಉದ್ಯೋಗ ಖಾತ್ರಿ ಯೋಜನೆಯನ್ನು ಕೂಡ ಕತ್ತು‌ ಹಿಸುಕಿ ಸಾಯಿಸಲು ಹೊರಟಿದೆ.ಒಟ್ಟಿನಲ್ಲಿ ಕೇಂದ್ರ ಸರಕಾರದ ನಡೆ ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದೆ ಎಂದು ರಾಜ್ಯದ ರೈತ-ಕಾರ್ಮಿಕ ಮುಖಂಡರಾದ ಕೆ. ಯಾದವ ಶೆಟ್ಟಿಯವರು ಆಕ್ರೋಶ ವ್ಯಕ್ತಪಡಿಸಿದರು. ಅವರು‌‌…

Read More

ಸಂವಿಧಾನ ಆಶಯಗಳ ರಕ್ಷಣೆ ಸರ್ಕಾರಗಳ ಕರ್ತವ್ಯ – ಸಂವಿಧಾನ ವಿರೋಧಿ ನೀತಿಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯ: ಹರೀಶ್ ಕುಮಾರ್

ಮಂಗಳೂರು: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರ್ಕಾರಗಳು ಮಾಡಬೇಕು. ಸರ್ಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ…

Read More

ಕೆಲಸವೂ ಇಲ್ಲ, ಸ್ನೇಹಿತನೂ ಇಲ್ಲ… ಕಂಗಾಲಾಗಿ ಮರವೇರಿದ ಯುವಕನ ರಕ್ಷಣೆ – ಕದ್ರಿ ಪೊಲೀಸರ ಮಾನವೀಯ ಕಾರ್ಯ

ಮಂಗಳೂರು : ಇತ್ತ ಕೆಲಸನೂ ಇಲ್ಲ ಅತ್ತ ಕರೆತಂದ ಸ್ನೇಹಿತನೂ ಇಲ್ಲದೆ ಕಂಗಲಾಗಿ ಮರವೇರಿ ಕೂತವನ ರಕ್ಷಿಸಿದ ಕದ್ರಿ ಪೋಲೀಸರುಮಂಗಳೂರು, ಜನವರಿ 26 : ದೂರದೂರಿನಿಂದ ಕೆಲಸ ಅರಸಿ ಸ್ನೇಹಿತನೊಂದಿಗೆ ನಗರಕ್ಕೆ ಬಂದಿದ್ದ ಕಾರ್ಮಿಕನೋರ್ವ ಇತ್ತ ಕೆಲಸನೂ ಇಲ್ಲದೆ ಅತ್ತ ಕರೆ ತಂದ ಸ್ನೇಹಿತನೂ ಇಲ್ಲದೆ ಕಂಗಾಲಾಗಿ ಮರವೇರಿ ಕೂತ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ. ನಗರದ ಕರಂಗಾಲ್ಪಾಡಿಯಲ್ಲಿ ಈ ಘಟನೆ ನಡೆದಿದ್ದು ಬೃಹತ್ತ್ ಮರವೇರಿ ಕೂತವನನ್ನು ಕದ್ರಿನ ಪೊಲೀಸರು ರಕ್ಷಣೆ ಮಾಡಿ ಆಸ್ಪತ್ರೆಗೆ…

Read More

ವಿಟ್ಲ ಪಿ.ಎಂ.ಶ್ರೀ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಸಿ.ರವಿಶಂಕರ್ ಶಾಸ್ತ್ರಿ ಆಯ್ಕೆ ಹಾಗೂ ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಅಮೀನ್ ಆಯ್ಕೆ

ವಿಟ್ಲ: ಪಿ.ಎಂ.ಶ್ರೀ (RMSA) ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಟ್ಲ ಇದರ 2026–2029 ಅವಧಿಯ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ.)ಯ ನೂತನ ಅಧ್ಯಕ್ಷರಾಗಿ ಸಿ.ರವಿಶಂಕರ್ ಶಾಸ್ತ್ರಿ ಹಾಗೂ ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಅಮೀನ್ ಆಯ್ಕೆಯಾಗಿದ್ದಾರೆ.ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಗೌಡ ನಾಯ್ತೋಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರೂ ಪದನಿಮಿತ್ತ ಸದಸ್ಯರಾದ ರವಿಪ್ರಕಾಶ್ ವಿಟ್ಲ ಅವರು ಗೌರವ ಉಪಸ್ಥಿತರಿದ್ದರು. ರಾಜ್ಯದಲ್ಲೇ ಅತೀ ಹೆಚ್ಚು…

Read More

ಕಾಸರಗೋಡು ಜಿಲ್ಲಾ ಕೇರಳೋತ್ಸವದಲ್ಲಿ ಲಕ್ಕಿ ಬ್ರದರ್ಸ್ ಮಂಜೇಶ್ವರ ತಂಡಕ್ಕೆ ದ್ವಿತೀಯ ಸ್ಥಾನ

ಕಾಸರಗೋಡು ಜಿಲ್ಲಾ ಕೇರಳೋತ್ಸವದಲ್ಲಿ ಲಕ್ಕಿ ಬ್ರದರ್ಸ್ ಮಂಜೇಶ್ವರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.ಮೆಹಂದಿ ವಿಭಾಗದಲ್ಲಿ ಅಫ್ಸಾ & ಅಸ್ಮಾ ಹಾಗೂ ಪ್ರಬಂಧ ಬರವಣಿಗೆಯಲ್ಲಿ ಪೂಜಾ ಲಕ್ಷ್ಮಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕಥಾ ಪ್ರಸಂಗ ಜನಪದ ನೃತ್ಯ ವಿಭಾಗದಲ್ಲಿ ಕುಮಾರಿ ಶಿಬಿರಾ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.ಕಥಾ ರಚನೆಯಲ್ಲಿ ಕುಬ್ರಾ ರವರು ‘ಎ’ ಗ್ರೇಡ್ ಗಳಿಸಿದ್ದಾರೆ. ಮಂಜೇಶ್ವರ ಬ್ಲಾಕ್ ತಂಡವನ್ನು ಮುನ್ನಡೆಸಿದ ತಂಡದ ನಾಯಕ ಕಲಾವಿದ ಸಿದ್ದಿಕ್ ಮಂಜೇಶ್ವರ ಅವರನ್ನು ಬ್ಲಾಕ್ ಅಧ್ಯಕ್ಷ ಸೈಫುಲ್ಲಾ ತಂಗಳ್ ಹಾಗೂ…

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ವಿಶ್ವದ ಬೃಹತ್ ಹಾಗೂ ಲಿಖಿತ ಸಂವಿಧಾನವನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನವು ರಚನೆಯಾಗಿ ಜಾರಿಗೆ ಬಂದ 1950 ಜನವರಿ 26ನೇ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಜಾರಿಯಾದ ಈ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನ ಜೀವನ ಭದ್ರತೆಗೆ ಭದ್ರಬುನಾದಿ ಹಾಕಿತು. ಎಂದು ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣಗೈದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಮಾತನಾಡಿದರು. ಸಮಾಜ ವಿಜ್ಞಾನ…

Read More
error: Content is protected !!